ಸಾವಿಗೆ ರಹದಾರಿಯಾದ ಸರ್ಕಲ್‌


Team Udayavani, May 31, 2018, 3:55 PM IST

tmk-1.jpg

ಮಧುಗಿರಿ: ಲೋಕೋಪಯೋಗಿ ಇಲಾಖೆ ಹಾಗೂ ಸ್ಥಳೀಯ ಪೋಲಿಸ್‌, ಪುರಸಭೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಇಲಾಖೆಗಳ ನಿರ್ಲಕ್ಷ್ಯದಿಂದ ಪಟ್ಟಣದಲ್ಲಿನ ರಸ್ತೆಯಲ್ಲಿ ಜನಸಾಮಾನ್ಯರು ಜೀವ ಕಳೆದು ಕೊಳ್ಳುವಂತಾಗಿದೆ.

ಪಟ್ಟಣದ ಶಿರಾಗೇಟ್‌ ಬಳಿ ಲೋಕೋಪಯೋಗಿ ಕಚೇರಿ ಮುಂಭಾಗ ರಾಜ ಚಿಕ್ಕಪ್ಪಗೌಡ ವೃತ್ತವಿದ್ದು, ಮೂರು
ದಿಕ್ಕಿಗೂ ರಸ್ತೆಯ ತಿರುವಿದೆ. ಇಲ್ಲಿ ಯಾವುದೇ ನಾಮಫಲಕವಾಗಲಿ, ರಸ್ತೆ ಸುರಕ್ಷತೆ ಕ್ರಮವೂ ಇಲ್ಲಿಲ್ಲ. ಇದರಿಂದಾಗಿ ಹಲವಾರು ಅಪಘಾತಗಳು ನಡೆದು ಜನಸಾಮಾನ್ಯನ ಬದುಕು ಬೀದಿಗೆ ಬಿದ್ದಿದೆ.

ರಸ್ತೆ ಉಬ್ಬು ನಿರ್ಮಿಸಿಲ್ಲ: ಇದೇ ದಾರಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳಾ ಪೋಲಿಸ್‌ ಪೇದೆ ಲಕ್ಷ್ಮಮ್ಮ(30) ಭಾರಿ ವಾಹನಕ್ಕೆ ಸಿಲುಕಿ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಬಲಗೆ„ ತೋಳು ಮುರಿದು ಸೊಂಟಕ್ಕೆ ಗಂಭೀರ ಗಾಯವಾ ಗಿದ್ದು, ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ರಸ್ತೆ ಉಬ್ಬು ಇಲ್ಲದ ಕಾರಣ ವೇಗವಾಗಿ ಬರುವ ವಾಹನಗಳಿಂದ ಇಂತಹ ಅಪಘಾತಗಳು ಸದಾ ನಡೆಯುತ್ತಿರುತ್ತವೆ.

ಅನಧಿಕೃತ ಪೆಟ್ಟಿಗೆ ಅಂಗಡಿಗಳು: ಈ ಸರ್ಕಲ್‌ ನಲ್ಲಿ ಬೆಸ್ಕಾಂ ಇಲಾಖೆ ಕಚೇರಿ, ಲೋಕೋಪಯೋಗಿ ಇಲಾಖೆ ಕಚೇರಿ ಮತ್ತು ವಸತಿ ಗೃಹಗಳಿದ್ದು, ತಾಪಂ ನೂತನ ಕಟ್ಟಡವಿದೆ. ಅನತಿ ದೂರದಲ್ಲಿ ಸಿದ್ದಾರ್ಥ ಶಾಲೆಯಿದ್ದು ಮಕ್ಕಳು ಜೀವ ಕೈಲಿ ಹಿಡಿದು ರಸ್ತೆ ದಾಟಬೇಕಿದೆ. ತಾಪಂ ಕಚೇರಿ ಮುಂಭಾಗ ಹಲವಾರು ಅನಧಿಕೃತ ಪೆಟ್ಟಿಗೆ ಅಂಗಡಿಗಳು ತಲೆ ಎತ್ತಿವೆ. ಇದರಿಂದ ಸರ್ಕಲ್‌ ತಿರುವು ಸಹ ಕಾಣಸಿದಂತಾಗಿದ್ದು, ಮೂರೂ ಕಡೆ ರಸ್ತೆ ಸುರಕ್ಷತೆಗೆ ಯಾವ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ವೈನ್‌ ಶಾಪ್‌ ಉಳಿಸುವ ಸಲುವಾಗಿ ಹಿಂದಿನ ಸರಕಾರದ ಅವಯಲ್ಲಿ ಸುಪ್ರೀಂಕೋರ್ಟ್‌ ಪಟ್ಟಣದೊಳಗೆ ಬರುವ ರಾಷ್ಟ್ರೀಯ ಹೆದ್ದಾರಿಗಳನ್ನು ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ವಹಿಸಿ ವೈನ್‌ ಶಾಪ್‌ಗ್ಳನ್ನು ಉಳಿಸಿ ಕೈತೊಳೆದುಕೊಂಡಿತು. ಆದರೆ ಸಂಪನ್ಮೂಲದ ಕೊರತೆ ಎದುರಿಸುತ್ತಿರುವ ಸ್ಥಳೀಯ ಸಂಸ್ಥೆಗಳು ಇಂತಹ ಬೃಹತ್‌ ರಸ್ತೆಯನ್ನು ಸ್ವಾಧೀನ ಪಡಿಸಿಕೊಂಡು ಅಭಿವೃದ್ಧಿಪಡಿಸಲು ಅಸಾಧ್ಯ ವಾಗಿದೆ. 

ಸಂಬಂಧಪಟ್ಟವರು ಈಗಲಾದರೂ ಪಟ್ಟಣದಲ್ಲಿನ ಇಂತಹ ಅಪಾಯಕಾರಿ ಸ್ಥಳದಲ್ಲಿ ರಸ್ತೆ ಉಬ್ಬುಗಳನ್ನು ನಿರ್ಮಿಸಿ ಅಗತ್ಯ ರಸ್ತೆ ಸುರಕ್ಷತೆಯನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ನಮ್ಮ ಪರಿಮಿತಿಗೆ ಬರುವುದಿಲ್ಲ. ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಕಾರ ಸೂಚನೆ ನೀಡಿದರೆ ಅಥವಾ ಸಾರ್ವಜನಿಕರಿಂದ ದೂರು ಕೇಳಿಬಂದರೆ ಅಗತ್ಯ ಕ್ರಮಕ್ಕೆ ಶಿಫಾರಸು
ಮಾಡಲಾಗುವುದು. 
ಮಾರುತಿಶಂಕರ್‌, ಮುಖ್ಯಾಧಿಕಾರಿ, ಪುರಸಭೆ.

ರಾಜ ಚಿಕ್ಕಪ್ಪಗೌಡ ವೃತ್ತದಲ್ಲಿ ರಸ್ತೆ ಸುರಕ್ಷತಾ ಕ್ರಮಕ್ಕೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಸಂಬಂಧಪಟ್ಟವರು ಇನ್ನಾದರೂ ಸೂಕ್ತ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಲಿ. 
ಮಂಜುನಾಥ್‌, ನಾಗರಿಕ.

ಸತೀಶ್‌

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.