ತುಮಕೂರು: ಕಾರು- ಕ್ಯಾಂಟರ್ ಮುಖಾಮುಖಿ ಢಿಕ್ಕಿ; ನಾಲ್ವರು ಮೃತ್ಯು
ಕಾರಿನಲ್ಲಿದ್ದ ಸಾಕು ನಾಯಿ ಸ್ಥಳದಲ್ಲೇ ಸಾವು
Team Udayavani, Dec 14, 2022, 4:12 PM IST
ತುಮಕೂರು: ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ರಾ.ಹೆ. 206 ರಲ್ಲಿ ಬುಧವಾರ ಮಧ್ಯಾಹ್ನ (ಡಿ.14) ನಡೆದಿದೆ.
ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಕೆರೆ ಸಮೀಪದ ನಡುವನಹಳ್ಳಿ ಗ್ರಾಮದವರಾಗಿದ್ದು ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗುತ್ತಿದೆ. ಕಾರಿನಲ್ಲಿ ಸಾಕು ನಾಯಿ ಕೂಡ ಇದ್ದು, ನಾಯಿಯೂ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದೆ.
ಗುಬ್ಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.