ಬಾಲ್ಯವಿವಾಹ ಬಗ್ಗೆ ಜನ ಜಾಗೃತಿ ಅಗತ್ಯ


Team Udayavani, Feb 15, 2019, 7:31 AM IST

balya.jpg

ತುಮಕೂರು: ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ 2016ರಲ್ಲಿ ತಿದ್ದುಪಡಿಯಾಗಿದ್ದು, ವಿವಾಹಗಳಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕಾರಣರಾಗುವ ಎಲ್ಲರ ಮೇಲೆಯೂ ಕೇಸು ದಾಖಲಿಸಲು ಪೊಲೀಸರಿಗೆ ಅವಕಾಶ ನೀಡಿರುವ ಕಾರಣ ಈ ಕಾಯ್ದೆಯ ಬಗ್ಗೆ ಹೆಚ್ಚಿನ ಜನ ಜಾಗೃತಿ ಅಗತ್ಯ ಎಂದು ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ್‌ ಹೇಳಿದರು.

ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮುದ್ರಣ ಮಾಲೀಕರು, ಛತ್ರಗಳ ಮಾಲೀಕರು ಮತ್ತು ವ್ಯವಸ್ಥಾಪಕರು, ಪೂಜಾರಿಗಳು, ಧಾರ್ಮಿಕ ಮುಖಂಡರುಗಳಿಗಾಗಿ ಆಯೋಜಿಸಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಅರಿವು ಕಾರ್ಯಾಗಾರದಲ್ಲಿ  ಮಾತನಾಡಿ, 2006ರಲ್ಲಿಯೇ ಈ ಕಾಯ್ದೆ ರಚನೆಯಾಗಿದ್ದರೂ ಇಂದಿಗೂ ಸಹ ಬಾಲ್ಯ ವಿವಾಹಗಳು ಜೀವಂತವಾಗಿರುವುದು ನಾಚಿಕೆಯ ವಿಷಯ ಎಂದರು.

ಕಾಯ್ದೆ ಜಾರಿಗೆ ಬಂದ ಬಹಳಷ್ಟು ವರ್ಷಗಳ ಕಾಲ ಎಚ್ಚರಿಕೆ ನೀಡುವ ಅರಿವು ಮೂಡಿಸಲಾಗುತ್ತಿತ್ತು. ಈಗ ಕಾಯ್ದೆ ತೀಕ್ಷ್ಣವಾಗಿದ್ದು, ಕೂಡಲೇ ಪ್ರಕರಣ ದಾಖಲಿಸಲು ಪೊಲೀಸರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಪೋಷಕರು ಮಾತ್ರವಲ್ಲದೆ, ಲಗ್ನಪತ್ರಿಕೆ ಮುದ್ರಿಸುವವರು, ಛತ್ರ ನೀಡುವವರು, ಪೌರೋಹಿತ್ಯ ನಡೆಸುವವರು ಎಲ್ಲರ ಮೇಲೆ ಕಾನೂನಿನ ಅಸ್ತ್ರ ಬಳಕೆಯಾಗಲಿದ್ದು, ಬಾಲ್ಯ ವಿವಾಹಗಳ ಬಗ್ಗೆ ಎಚ್ಚರದಿಂದ ಇರಬೇಕು.

ಛತ್ರಗಳ ಮುಂದೆ ಬಾಲ್ಯ ವಿವಾಹ ನಿಷೇಧ ಎಂದು ಫ‌ಲಕ ಅಳವಡಿಸಿರಬೇಕು ಎಂದು ಸೂಚಿಸಿದರು. ಕೆಲವು ಸಮುದಾಯಗಳಲ್ಲಿ ಇಂದಿಗೂ ಬಾಲ್ಯ ವಿವಾಹ ನಡೆಯುತ್ತಿದ್ದು, ಆ ಸಮುದಾಯಗಳ ಮುಖಂಡರು ಎಚ್ಚರಿಕೆ ವಹಿಸಬೇಕು. ಕಾನೂನಿಗೆ ಮಾತ್ರವೇ ಹೆದರದೆ, ಹೆಣ್ಣು ಮಕ್ಕಳ ಭವಿಷ್ಯವೂ ಇದರಲ್ಲಿ ಅಡಗಿರುವುದರಿಂದ ಅವರ ಜೀವನದ ಬಗ್ಗೆಯೂ ಚಿಂತಿಸಬೇಕು ಎಂದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾಲಾ ಕಾಂಬ್ಳೆàರ್‌ ಮಾತನಾಡಿ, 18 ವರ್ಷದ ಒಳಗಿರುವ ಹೆಣ್ಣು ಮಕ್ಕಳು, 21 ವರ್ಷ ಒಳಗಿರುವ ಗಂಡು ಮಕ್ಕಳ ವಿವಾಹವನ್ನು ಬಾಲ್ಯ ವಿವಾಹ ಎಂದು ಘೋಷಿಸಲಾಗಿದ್ದು, ಇಂತಹ ವಿವಾಹಗಳಿಗೆ ಕಾನೂನಿನ ಯಾವುದೇ ಮಾನ್ಯತೆ ಇರುವುದಿಲ್ಲ.

ತಕ್ಷಣಕ್ಕೆ ವಿವಾಹ ಮಾಡಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೆ ಮುಂದಿನ ಅನಾಹುತಗಳಿಗೆ ತಲೆ ಕೊಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಮುದಾಯದ ಮುಖಂಡರು, ಪೂಜಾರಿಗಳು, ಛತ್ರದ ಮುಖ್ಯಸ್ಥರುಗಳ ಜವಾಬ್ದಾರಿ ಹೆಚ್ಚಿದ್ದು, ತಮ್ಮ ವ್ಯಾಪ್ತಿಯಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಅಂಗನವಾಡಿ ಮೇಲ್ವಿಚಾರಕಿ ಸುಪ್ರೀತಾ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುತ್ತಿವೆ. ವಿವಾಹ ನಡೆದಾಗ ತಡೆಗಟ್ಟುವುದಕ್ಕಿಂತ ಮುಂಚಿತವಾಗಿಯೇ  ಸಂಬಂಧ ಪಟ್ಟವರಿಗೆ ಮಾಹಿತಿ ನೀಡಿದರೆ, ಮುಂದಾಗುವ‌ ಅನಾಹುತಗಳನ್ನು ತಪ್ಪಿಸಬಹುದು.

ಇದಕ್ಕಾಗಿಯೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಇದ್ದು, ಅವರಿಗೆ ಮಾಹಿತಿ ನೀಡಬೇಕು ಎಂದರು. ಮೇಲ್ವಿಚಾರಕಿ ಶಮೀಮ, ತುಮಕೂರು ಗ್ರಾಮಾಂತರ ಮೇಲ್ವಿಚಾರಕಿಯರಾದ ಸರೋಜ, ಅನುಸೂಯ, ಯಲ್ಲವ್ವ, ಶಾಂತಮ್ಮ, ವಿನೋದ‌, ಶಾರದ ಇತರರು ಇದ್ದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.