ಕೇಂದ್ರದಿಂದ ಬಿಎಸ್‌ಎನ್‌ಎಲ್‌ ಸಂಸ್ಥೆ ಮುಚ್ಚುವ ಹುನ್ನಾರ


Team Udayavani, Feb 19, 2019, 7:40 AM IST

kendra-bsn.jpg

ತುಮಕೂರು: ತಮ್ಮ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಬಿಎಸ್‌ಎನ್‌ಎಲ್‌ ಸಂಸ್ಥೆಯ ನೂರಾರು ನೌಕರರು ಸೋಮವಾರ ಬಿಎಸ್‌ಎನ್‌ಎಲ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ, ನೌಕರರು ಘೋಷಣೆ ಕೂಗುತ್ತಾ ಪ್ರತಿಭಟನಾ ಧರಣಿ ನಡೆಸಿದರು. 

ಮುಷ್ಕರ ಆರಂಭ: ಈ ವೇಳೆ ಮಾತನಾಡಿದ ಎಯುಎಬಿ ಜಿಲ್ಲಾ ಸಂಚಾಲಕ ಎಚ್‌.ನರೇಶ್‌ರೆಡ್ಡಿ, ಕೇಂದ್ರ ಸರ್ಕಾರ ನಿರ್ಲಕ್ಷದಿಂದಾಗಿ ಬಿಎಸ್‌ಎನ್‌ಎಲ್‌ ಸಂಸ್ಥೆ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, 3 ಲಕ್ಷ ನೌಕರರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಬಿಎಸ್‌ಎನ್‌ಎಲ್‌ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರಾದ್ಯಂತ ಬಿಎಸ್‌ಎನ್‌ಎಲ್‌ ನೌಕರರು ಮುಷ್ಕರ ಆರಂಭಿಸಿದ್ದಾರೆ ಎಂದು ತಿಳಿಸಿದರು.

ಸಂಸ್ಥೆ ಮುಚ್ಚಲು ಹುನ್ನಾರ: ಕೇಂದ್ರ ಸರ್ಕಾರ ಬಿಎಸ್‌ಎನ್‌ಎಲ್‌ ಸಂಸ್ಥೆಗೆ 4ಜಿ ಸೇವೆ ನೀಡದೇ, ಖಾಸಗಿ ಜಿಯೋ ಸಂಸ್ಥೆಯನ್ನು ಕೇಂದ್ರ ಸರ್ಕಾರ ಪ್ರಚಾರ ಮಾಡುತ್ತಿದ್ದು, ಕಡಿಮೆ ತಂತ್ರಾಂಶದಿಂದ ಗುಣಮಟ್ಟದ ಸೇವೆ ನೀಡಲು ಬಿಎಸ್‌ಎನ್‌ಎಲ್‌ ಸಿಬ್ಬಂದಿ ಪ್ರಯತ್ನ ಮಾಡುತ್ತಿದ್ದರೂ, ನಷ್ಟದಲ್ಲಿದೆ ಎಂದು ಸಂಸ್ಥೆ ಮುಚ್ಚಲು ಹುನ್ನಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ದೇಶದ ಅಭಿವೃದ್ಧಿಗೆ ಪೂರಕ: ಬಿಎಸ್‌ಎನ್‌ಎಲ್‌ ಬೆಳವಣಿಗೆಗೆ ಅವಶ್ಯಕವಾಗಿರುವ 4ಜಿ ಸೇವೆ ನೀಡಿದರೆ ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡಲು ಶಕ್ತವಾಗಲಿದೆ. ಸಂಸ್ಥೆಗೆ ಸೇರಿದ ಆಸ್ತಿ ಮತ್ತು ಭೂಮಿ ನಿರ್ವಹಿಸುವ ಅಧಿಕಾರ ನೀಡಿದರೆ, ವಾರ್ಷಿಕ 10,000 ಕೋಟಿ ರೂ. ಆದಾಯ ಗಳಿಸಬಹುದಾಗಿದೆ. ಸಂಸ್ಥೆಯನ್ನು ಆರ್ಥಿಕವಾಗಿ ಮುನ್ನಡೆಸಬೇಕಾದರೆ, ಕೇಂದ್ರ ಸರ್ಕಾರ ಟ್ರಾಯ್‌ ನಿಯಮ ಪಾಲಿಸಬೇಕು. ನೆಹರೂ ಅವರು ಕೇಂದ್ರ ಸಂಸ್ಥೆಗಳು ದೇಶದ ಅಭಿವೃದ್ಧಿಗೆ ಪೂರಕ ಎಂದರೆ, ಈಗಿನ ಕೇಂದ್ರ ಸರ್ಕಾರ ಅವನ್ನು ಮುಚ್ಚಿಸಲು ಪ್ರಯತ್ನ ನಡೆಸುತ್ತಿದೆ ಎಂದರು.

ವೇತನ ಪರಿಷ್ಕರಣೆ ಮಾಡಿ: ಬಿಎಸ್‌ಎನ್‌ಎಲ್‌ ನೌಕರರಿಗೆ 3ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ವೇತನ ಪರಿಷ್ಕರಣೆ ಮಾಡಬೇಕು. ಪಿಂಚಣಿ ಪರಿಷ್ಕರಣೆ ಮಾಡಬೇಕು. 2ನೇ ವೇತನ ಆಯೋಗದ ತಾರತಮ್ಯ ನಿವಾರಣೆ ಮಾಡುವಂತೆ ಒತ್ತಾಯಿಸಿ, ರಾಷ್ಟ್ರಾದ್ಯಾಂತ ಬಿಎಸ್‌ಎನ್‌ಎಲ್‌ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಮೂರು ದಿನವೂ ನೌಕರರು ಕೆಲಸವನ್ನು ಬಹಿಷ್ಕರಿಸಲಿದ್ದು, ಕೇಂದ್ರ ಸರ್ಕಾರ ತ್ವರಿತವಾಗಿ ಬಿಎಸ್‌ಎನ್‌ಎಲ್‌ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ನೌಕರರು ಮುಷ್ಕರಕ್ಕೆ ಮುಂದಾದಾಗ ವದಂತಿ ಹಬ್ಬಿಸುವ ಮೂಲಕ ಮುಷ್ಕರ ನಿರತರ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದು, ನೌಕರರು ಅಂಥ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಬಿಎಸ್‌ಎನ್‌ಎಲ್‌ ಆಲ್‌ ಯೂನಿಯನ್‌ ಅಸೋಸಿಯೇಷನ್‌ ಮುಖಂಡರು, ಎಸ್‌ಎನ್‌ಇಎ ಜಿಲ್ಲಾ ಕಾರ್ಯದರ್ಶಿ ಬಿ.ಕೆ.ಉಮೇಶ್‌, ಎಐಬಿಎಸ್‌ಎನ್‌ಎಲ್‌ಇಎ ಜಿಲ್ಲಾ ಕಾರ್ಯದರ್ಶಿ ಎಸ್‌.ಭರತ್‌ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.