ಅಧಿಕಾರಿಗಳು ರಾಜಕಾರಣ ಮಾಡಬೇಡಿ


Team Udayavani, Feb 23, 2019, 7:28 AM IST

adikaa.jpg

ಮಧುಗಿರಿ: ತಾಲೂಕಿನ ಅಧಿಕಾರಿಗಳು ರಾಜಕಾರಣ ಮಾಡಬಾರದು. ಅಭಿವೃದ್ಧಿ ದೃಷ್ಟಿಯಿಂದ ಸರ್ವರನ್ನು ಸಮಾನತೆಯಿಂದ ಕಾಣಬೇಕು ಎಂದು ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಸಲಹೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಲವು ಇಲಾಖೆಯಿಂದಲೇ ಈ ರಾಜಕಾರಣ ಶುರುವಾಗಿದೆ. ಆದರೆ, ಇದರಿಂದ ಜನಪ್ರತಿನಿಧಿಗಳ ಹಕ್ಕನ್ನು ಕಸಿದಂತೆ ಆಗುತ್ತದೆ ಎಂದರು.

ರಾಜಕಾರಣ ನುಸಳದಿರಲಿ: ಮಾಜಿ ಶಾಸಕ ರಾಜಣ್ಣನವರ ಕಾಲದ ಕಾಮಗಾರಿಗಳನ್ನು ಈಗ ಜೆಡಿಎಸ್‌ನವರು ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪವೇನು ಇಲ್ಲ. ಆದರೆ, ಕುಡಿಯುವ ನೀರಿನ ಘಟಕಗಳಲ್ಲಿ ಕೆಲವೊಂದು ರಾಜಕಾರಣ ನುಸುಳುತ್ತಿದೆ. ಇದು ನಿಲ್ಲಿಸಬೇಕೆಂದು ಸೂಚಿಸಿದರು. ಅಧ್ಯಕ್ಷರ ಈ ಆರೋಪಕ್ಕೆ ಪ್ರತಿಕ್ರಿಯಿಸಿದ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹೊನ್ನೇಶಪ್ಪ, ಅಧ್ಯಕ್ಷರು ಹೇಳಿದಂತೆ ಕುಡಿಯುವ ನೀರಿನ ವಿಚಾರದಲ್ಲಿ ಯಾವ ಅಧಿಕಾರಿಗಳು ರಾಜಕೀಯ ಮಾಡುತ್ತಿಲ್ಲ ಎಂದರು. 

ದೂರು ನೀಡಿ: ಕೃಷಿ ಇಲಾಖೆಯಲ್ಲೂ ನಮಗೆ ಸ್ಪಂದನೆ ಸಿಗುತ್ತಿಲ್ಲ ಎಂದು ಮಿಡಿಗೇಶಿ ಸದಸ್ಯೆ ಯಶೋಧಮ್ಮ ಆರೋಪಿಸಿದಾಗ ಪ್ರತಿಕ್ರಿಯಿಸಿದ ಕೃಷಿ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಹಿಂದಿನ ಅವಧಿಯಲ್ಲಿ ಅಂಥ ಯಾವುದೇ ಭ್ರಷ್ಟಾಚಾರ ನಡೆಸಿದ್ದರೂ ನಮಗೆ ದೂರು ನೀಡಿ. ನನ್ನ ಅವಧಿಯಲ್ಲಿ ಅಂಥ ಯಾವುದೇ ಕಾರ್ಯಗಳಿಗೆ ಆಸ್ಪದ ನೀಡಿಲ್ಲ ಎಂದರು. 

ಅಧಿಕಾರಿಗಳ ಅಸಮಾಧಾನ: ಸಭೆಯಲ್ಲಿ ಅಧಿಕಾರಿಗಳು ಗೊಂದಲಕ್ಕೆ ಒಳಗಾದಂತೆ ಕಂಡು ಬಂದಿದ್ದು, ಕವಿ ಸರ್ವಜ್ಞ ಜಯಂತಿಗೂ ಹೋಗದೆ ತಾಪಂ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದರೂ ಈ ರಾಜಕಾರಣದ ಆರೋಪ ಬಂದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಅಧ್ಯಕ್ಷರು ಹೇಳುವಂತೆ ಯಾವುದೇ ರಾಜಕಾರಣ ಇಲಾಖೆಗಳಲ್ಲಿ ಮಾಡುತ್ತಿಲ್ಲ. ಆದರೆ, ಅಧ್ಯಕ್ಷರಿಗೆ ಹಲವರು ಇಲ್ಲಸಲ್ಲದ ವಿಚಾರ ಹೇಳುತ್ತಿದ್ದು, ಈ ಗೊಂದಲಕ್ಕೆ ಕಾರಣವಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಆಧಿಕಾರಿ ಸ್ಪಷ್ಟಪಡಿಸಿದರು. 

ತಾಲೂಕಿಗೆ ಎತ್ತಿನಹೊಳೆ ಯೋಜನೆ ಶೀಘ್ರವಾಗಿ ಅನುಷ್ಠಾನಕ್ಕೆ ಬರಲು ಅಗತ್ಯ ಕ್ರಮ ಕೈಗೊಳ್ಳಲು ಇಲಾಖೆ ಜೆಇ ವಿಜಯಪ್ರಸಾದ್‌ ರವರಿಗೆ ಸೂಚಿಸಲಾಯಿತು. ತಾಪಂಗೆ ನೂತನವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಗರಣಿ ಸದಸ್ಯ ಕೆ.ಎ.ರಾಜುರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಪಂ ಇಒ ನಂದಿನಿ, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಮಣ್ಣ, ವ್ಯವಸ್ಥಾಪಕ ದೊಡ್ಡಸಿದ್ದಪ್ಪ ಹಾಗೂ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.