ಬೈಪಾಸ್‌ ರಸ್ತೆ ಸುರಕ್ಷತೆಗಾಗಿ ರಸ್ತೆ ಪರಿಶೀಲನೆ


Team Udayavani, Mar 10, 2019, 7:47 AM IST

bypass.jpg

ಕೊರಟಗೆರೆ: ಕೊರಟಗೆರೆ ಬೈಪಾಸ್‌ ರಸ್ತೆ ಸುರಕ್ಷತೆ ಮತ್ತು ಅಪಘಾತ ತಡೆಗಟ್ಟುವ ಮುನ್ನಚ್ಚರಿಕೆ ನಾಮಫ‌ಲಕ ಹಾಗೂ ರಸ್ತೆ ಉಬ್ಬುಗಳ ಬಗ್ಗೆ ಕೆಶಿಪ್‌ ಮತ್ತು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೊರಟಗೆರೆ ಆರಕ್ಷಕ ವೃತ್ತ ನಿರೀಕ್ಷಕ ನದಾಫ್ ಕೆಶಿಪ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಹೊರವಲಯದ ಮೂಲಕ ಹಾದುಹೋಗುವ ರಾಜ್ಯ ಹೆದ್ದಾರಿಯ ಬೈಪಾಸ್‌ ರಸ್ತೆಯ ಸುರಕ್ಷತೆ ಪೊಲೀಸ್‌ ಇಲಾಖೆ, ಪಿಡಬ್ಲ್ಯೂಡಿ ಮತ್ತು ಕೆಶಿಪ್‌ ಅಧಿಕಾರಿಗಳ ತಂಡ ಜಂಟಿಯಾಗಿ ಬೈಪಾಸ್‌ ರಸ್ತೆ ಪರಿಶೀಲಿಸಿದ ವೇಳೆ ಮಾತನಾಡಿದರು.

ವಾಹನ ಸವಾರರಿಗೆ ತೊಂದರೆ: ಬೈಪಾಸ್‌ ರಸ್ತೆಯ ಕಾಮಗಾರಿ ವಿಳಂಬದಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಾಮಗಾರಿ ಅಪೂರ್ಣ ಆಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಕೆಶಿಪ್‌ ರಸ್ತೆಯ ಅಪಘಾತ ಸ್ಥಳಗಳನ್ನು ಮೂರು ಇಲಾಖೆಯ ಅಧಿಕಾರಿ ವರ್ಗ ಜಂಟಿಯಾಗಿ ಅಪಘಾತ ಸ್ಥಳಗಳನ್ನು ಗುರುತಿಸಿರುವ ವರದಿಯನ್ನು ಡಿಸಿಎಂ ಮತ್ತು ಜಿಲ್ಲಾಧಿಕಾರಿಗಳಿಗೆ ಪೊಲೀಸ್‌ ಇಲಾಖೆ ನೀಡಲಿದೆ ಎಂದು ಹೇಳಿದರು. 

ಮೇಲಧಿಕಾರಿಗಳಿಗೆ ಮಾಹಿತಿ: ಕೊರಟಗೆರೆ ಆರಕ್ಷಕ ಉಪನಿರೀಕ್ಷಕ ಮಂಜುನಾಥ ಮಾತನಾಡಿ, ಬೈಪಾಸ್‌ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಇಲ್ಲದಿರುವ ಪರಿಣಾಮ ಈಗಾಗಲೇ ಸಾಕಷ್ಟು ಅಪಘಾತಗಳು ನಡೆದಿವೆ. ಪೊಲೀಸ್‌ ಇಲಾಖೆಯಿಂದ ಈಗಾಗಲೇ ಎರಡು ಬಾರಿ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರೂ ಪ್ರಯೋಜನವಾಗಿಲ್ಲ. ಇನ್ನೊಂದು ವಾರದಲ್ಲಿ ಬೈಪಾಸ್‌ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

ಇಲ್ಲದಿದ್ದರೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ ಅವರು, ಬೈಪಾಸ್‌ ರಸ್ತೆಯಲ್ಲಿ ನಿರ್ಮಾಣ ಮಾಡುತ್ತಿರುವ ಹೈಮಾಸ್ಟ್‌ ದೀಪ, ರಸ್ತೆ ಉಬ್ಬುಗಳ ಕಾಮಗಾರಿ ವಿಳಂಬವಾಗಿದೆ. ಅಪಘಾತ ನಡೆಯುವ ಸ್ಥಳಗಳಲ್ಲಿ ಎಚ್ಚರಿಕೆ ನಾಮಫ‌ಲಕ ಮತ್ತು ರಸ್ತೆ ಲೈಟ್‌ಗಳ ವ್ಯವಸ್ಥೆ ಮಾಡಬೇಕು. ರಸ್ತೆ ಉಬ್ಬುಗಳ ಕಾಮಗಾರಿ ಪ್ರಾರಂಭವಾಗಿ ಹಲವು ದಿನಗಳಾದರೂ ಮುಕ್ತಾಯವಾಗಿಲ್ಲ. ರಸ್ತೆ ಸುರಕ್ಷಣೆ ಮತ್ತು ಅಪಘಾತ ತಡೆಯುವ ನಿಟ್ಟಿನಲ್ಲಿ ಕೆಶಿಪ್‌ ಅಧಿಕಾರಿಗಳ ತಂಡ ಪೊಲೀಸ್‌ ಇಲಾಖೆಗೆ ಸಲಹೆ ಪಾಲಿಸಿ ಅಪಘಾತ ತಡೆಯಲು ಸಹಕಾರ ನೀಡಬೇಕು ಎಂದು ಹೇಳಿದರು. 

ಕೊರಟಗೆರೆ ಪಟ್ಟಣದ ಬೈಪಾಸ್‌ ಮೂಲಕ ಹಾದುಹೋಗುವ ಥರಡಿ ಗ್ರಾಮ, ಜಂಪೇನಹಳ್ಳಿ ಕ್ರಾಸ್‌, ಡಿಗ್ರಿ ಕಾಲೇಜು, ಊರ್ಡಿಗೆರೆ ವೃತ್ತ, ಬೋಡಬಂಡೇನಹಳ್ಳಿ, ಮಲ್ಲೇಶಪುರ ಕ್ರಾಸ್‌, ಹೊಳವನಹಳ್ಳಿ ರಸ್ತೆ, ಸಿದ್ದೇಶ್ವರ ಕಲ್ಯಾಣ ಮಂಟಪ ಮತ್ತು ತುಂಬಾಡಿ ಕ್ರಾಸಿನಿಂದ ಸಿದ್ದರಬೆಟ್ಟಕ್ಕೆ ಹೋಗುವ ಮಾರ್ಗದ ಬಳಿ ಕೆಶಿಪ್‌ ಇಲಾಖೆ ರಾಜಣ್ಣ, ಪಿಡಬ್ಲ್ಯೂಡಿ ರಾಘವೇಂದ್ರ ಮತ್ತು ಪೊಲೀಸ್‌ ಇಲಾಖೆ ನದಾಫ್ ಮತ್ತು ಮಂಜುನಾಥ ಜಂಟಿಯಾಗಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.