ಬಿಸಿಲು: ಕಲ್ಲಂಗಡಿ, ಖರ್ಬೂಜಾ ವ್ಯಾಪಾರ ಜೋರು


Team Udayavani, Mar 13, 2019, 7:50 AM IST

bisilu.jpg

ಕುಣಿಗಲ್‌: ಪಟ್ಟಣದಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು 30 ಡಿಗ್ರಿ ಇದ್ದ ತಾಪಮಾನ ಈಗ 36 ಡಿಗ್ರಿಗೂ ಅಧಿಕವಾಗಿದೆ. ಇದರಿಂದಾಗಿ ಪಟ್ಟಣದ ಜನತೆ ತಂಪುಪಾನೀಯಾ, ಹಣ್ಣುಗಳ ಮೊರೆ ಹೋಗಿದ್ದಾರೆ. 

ಎಲ್ಲೆಲ್ಲೂ ಬಿಸಿಲ ಝಳ: ಬಿಸಿಲ ಧಗೆಯಿಂದ ದೇಹವನ್ನು ತಂಪು ಮಾಡಿಕೊಳ್ಳಲು ಜನತೆ ವಿಶೇಷವಾಗಿ ಕಲ್ಲಂಗಡಿ, ಕರ್ಬೂಜಾ, ಕಿತ್ತಳೆ ಮತ್ತಿತರ ಹಣ್ಣುಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಈ ಹಣ್ಣುಗಳ ಬೆಲೆಯೂ ದುಪ್ಪಟ್ಟಾಗಿದೆ.

ಪಟ್ಟಣದಲ್ಲಿ ಕಲ್ಲಂಗಡಿ ಮತ್ತು ಕರ್ಬೂಜಾ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ. ಆಂಧ್ರಪ್ರದೇಶದ ಅತ್ಯಂತ ಹೆಚ್ಚು ಇಳುವರಿ ಬರುವ, ರುಚಿ ಹಾಗೂ ಅಪಾರ ಬೇಡಿಕೆ ಇರುವ ಕಿರಣ್‌ ತಳಿಯ ಕಲ್ಲಂಗಡಿ ಮತ್ತು ತಮಿಳುನಾಡಿನಿಂದ ಬರುವ ನಾಮಧಾರಿ ತಳಿಯ ಕಲ್ಲಂಗಡಿ ಹಾಗೂ ಆಂಧ್ರದ ಕಡಪ ಜಿಲ್ಲೆಯಿಂದ ತಂದಿರುವ ಖರ್ಬೂಜಾ ದಿನಕ್ಕೆ ಒಂದೂವರೆ ಟನ್‌ ಖಾಲಿಯಾಗುತ್ತಿದೆ ಎನ್ನುತ್ತಾರೆ ವ್ಯಾಪಾರಿಗಳಾದ ಧನಂಜಯ, ರಾಜು, ಲಾಲು ಮತ್ತು ಫಾಜಿಲ್‌. 

ಪಟ್ಟಣದ ಸ್ಟಡ್‌ ಫಾರ್ಮ್, ಹುಚ್ಚಮಾಸ್ತಿಗೌಡ ವೃತ್ತ, ತಾಲೂಕು ಕಚೇರಿ, ಮಹಾತ್ಮಗಾಂಧಿ ಕಾಲೇಜು ಮುಂಭಾಗದಲ್ಲಿ ಕಲ್ಲಂಗಡಿ ಮತ್ತು ಖರ್ಬೂಜಾ ಹಣ್ಣು ಮಾರಾಟಕ್ಕಿಟ್ಟಿದ್ದು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಆಂಧ್ರದ ಕಿರಣ್‌ ತಳಿಯ ಕಲ್ಲಂಗಡಿ ತಿನ್ನಲು ಬಲು ರುಚಿ. ಒಂದು ಎಕರೆ ಪ್ರದೇಶದಲ್ಲಿ ಕನಿಷ್ಟ 20-25 ಟನ್‌ ಇಳುವರಿ ಬರುತ್ತದೆ. ಮಾರುಕಟ್ಟೆಯಲ್ಲಿ ಬೇಡಿಕೆಯೂ ಹೆಚ್ಚು.

ಆದರೆ, ತಮಿಳುನಾಡಿನ ನಾಮಧಾರಿ ತಳಿಯ ಕಲ್ಲಂಗಡಿ ಹಣ್ಣು ಒಂದು ಎಕರೆಗೆ 7-8ಟನ್‌ ಮಾತ್ರ ಬರುತ್ತದೆ. ಅಲ್ಲಿಂದ ಕೆಜಿಗೆ ಸಾಗಣೆ ವೆಚ್ಚ ಸೇರಿ 14  ರೂ.,ಗೆ ಖರೀದಿಸಿ  20 ರೂ.ಗೆ ಮಾರಾಟ ಮಾಡುತ್ತೇವೆ. ಖಾಲಿಯಾದ ತಕ್ಷಣ ವಾರಕ್ಕೊಮ್ಮೆ 10-12 ಟನ್‌ ಕಲ್ಲಂಗಡಿ ಹಣ್ಣನ್ನು ತರುತ್ತೇವೆ ಎನ್ನುತ್ತಾರೆ ವ್ಯಾಪಾರಿಗಳು.

ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೂ 200ಟನ್‌ ಕಲ್ಲಂಗಡಿ ಮಾರಾಟವಾಗಿದೆ. ಹೆಚ್ಚು ಅಂದರೆ ಕಲ್ಲಂಗಡಿ ಹಣ್ಣು ಏಪ್ರಿಲ್‌ ಕೊನೆವರೆಗೂ ಮಾರುಕಟ್ಟೆಯಲ್ಲಿ ಸಿಗಲಿದೆ. ಆ ನಂತರ ಸಿಗುವುದಿಲ್ಲ. ಇನ್ನು ಖರ್ಬೂಜಾ ಹಣ್ಣು ದಿನಕ್ಕೆ 100-150 ಕೆಜಿ ಮಾರಾಟವಾಗುತ್ತಿದೆ.

ಶ್ರೀರಾಮನವಮಿಯಂದು ಜಾಸ್ತಿ ಮಾರಾಟವಾಗಲಿದೆ. ಕಲ್ಲಂಗಡಿ ಹಣ್ಣನ್ನು ನಾವು ಕತ್ತರಿಸಿ ಚಿಲ್ಲರೆಯಾಗಿ ಮಾರುವುದರಿಂದ ಹೆಚ್ಚಿನ ಲಾಭ ಸಿಗಲಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಪಟ್ಟಣದ ಹೊರವಲಯದ ಹೊಂಗೆಮರದ ನೆರಳು, ಕೆರೆ ತೀರ, ನೆರಳು ಇರುವ ತಂಗುದಾಣಗಳ ಮೊರೆ ಹೋಗುತ್ತಿದ್ದಾರೆ ಜನತೆ. 

* ಕೆ.ಎನ್‌.ಲೋಕೇಶ್‌ 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.