ನೀರು ಅಮೂಲ್ಯವಾದ ಜೀವ ಜಲ


Team Udayavani, Mar 23, 2019, 7:37 AM IST

neeru-amu.jpg

ತುಮಕೂರು: ನೀರು ಅಮೂಲ್ಯವಾದ ಜೀವ ಜಲ. ನೀರನ್ನು ಮಿತವಾಗಿ ಬಳಸುವುದರ ಮೂಲಕ ಸಂರಕ್ಷಣೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಣೇಶ್‌ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ವಿಶ್ವ ನೀರಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೀರು ದೇವರು ಕೊಟ್ಟ ಕಾಣಿಕೆ: ನೀರನ್ನು ಮಿತವಾಗಿ ಬಳಸದಿದ್ದರೆ ಮುಂದಿನ ದಿನಗಳಲ್ಲಿ ನೀರಿಗಾಗಿಯೇ ಯುದ್ಧ ಮಾಡುವ ಪರಿಸ್ಥಿತಿ ಉಂಟಾಗುತ್ತದೆ. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ. ನಾವೆಲ್ಲರೂ ಸಂಶೋಧನೆಗಳಿಂದ ಎಷ್ಟೇ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಮುಂದುವರಿದರೂ, ನಮ್ಮಿಂದ ನೀರನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ನೀರು ದೇವರು ಕೊಟ್ಟ ಕಾಣಿಕೆ. ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕೆಂದರೆ ನೀರನ್ನು ಸಂರಕ್ಷಿಸಬೇಕು ಎಂದು ಸಲಹೆ ನೀಡಿದರು.

ನೀರಿಲ್ಲದೇ ಬದುಕಲು ಕಷ್ಟ: ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್‌ ಮಾತನಾಡಿ, ನೀರು ವಿಶಿಷ್ಟವಾದ ಜೀವಜಲ. ನಾವು ಊಟವಿಲ್ಲದೇ ಬದುಕಬಹುದು. ಆದರೆ, ನೀರಿಲ್ಲದೇ ಯಾವ ಜೀವ ಸಂಕುಲವೂ ಬದುಕಲಾರವು. ಜನಸಂಖ್ಯೆ ಹೆಚ್ಚಾದಂತೆಲ್ಲಾ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಈಗಾಗಲೇ ಕುಡಿಯುವ ನೀರನ್ನು ಹಣಕೊಟ್ಟು ಬಳಸುತ್ತಿದ್ದೇವೆ. ಭವಿಷ್ಯದಲ್ಲಿ ನೀರಿನ ಅಭಾವ ಉಂಟಾಗದಂತೆ ನೀರಿನ ಮೂಲಗಳನ್ನು ಸಂರಕ್ಷಿಸಬೇಕು ಎಂದರು.

ಸಾಲು ಮರದ ತಿಮ್ಮಕ್ಕ ಮಾದರಿ: ಮುಂದಿನ ಪೀಳಿಗೆಗೆ ನೀರಿನ ಅಭಾವ ಉಂಟಾಗದಂತೆ ತಡೆಯಲು ಹೆಚ್ಚು ಹೆಚ್ಚು ಗಿಡ ಬೆಳೆಸಬೇಕು. ಯಾವುದೇ ನಿರೀಕ್ಷೆಯಿಲ್ಲದೇ ಸಾವಿರಾರು ಮರಗಳನ್ನು ಬೆಳೆಸುವುದರ ಮೂಲಕ ಗುಬ್ಬಿ ತಾಲೂಕಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ನಿಸರ್ಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಬೇರೆ ಜಿಲ್ಲೆಗೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ನೀರು ಧಾರಾಳವಾಗಿ ದೊರೆಯುತ್ತಿದ್ದರೂ, ನಾವು ನೀರನ್ನು ಹೆಚ್ಚು ವ್ಯಯ ಮಾಡುತ್ತಿದ್ದೇವೆ. ಇನ್ನಾದರೂ ನೀರಿನ ಮೌಲ್ಯವನ್ನು ಅರಿತು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಲ ನಮ್ಮ ಜೀವನ ಮೂಲ, ಜಲ ಅಮೂಲ್ಯ. ನಾವು ಜಲಸಾಕ್ಷರತೆಯನ್ನು ಪ್ರತಿ ಕುಟುಂಬಕ್ಕೂ ತಲುಪಿಸುತ್ತೇವೆ.

ನೀರನ್ನು ಸಂರಕ್ಷಿಸಿ ಪ್ರಸ್ತುತವಿರುವ ಜಲಮೂಲಗಳನ್ನು ಪುನಶ್ಚೇತನಗೊಳಿಸಿ ಹೊಸ ಜಲಮೂಲಗಳನ್ನು ನಿರ್ಮಿಸುವ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಇದಕ್ಕೂ ಮುನ್ನ ಜಿಪಂ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಪಂ ಉಪಕಾರ್ಯದರ್ಶಿಗಳಾದ ಡಿ.ಕೃಷ್ಣಪ್ಪ ಹಾಗೂ ಡಾ.ಎಸ್‌.ಪ್ರೇಮ್‌ಕುಮಾರ್‌, ಮುಖ್ಯ ಯೋಜನಾಧಿಕಾರಿ ಬಾಲರಾಜು,

-ಯೋಜನಾ ನಿರ್ದೇಶಕ ಮಾಂಕಾಳಪ್ಪ, ಮುಖ್ಯ ಲೆಕ್ಕಾಧಿಕಾರಿ ಕನಕರಾಜು, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕ ಎಸ್‌.ನಟರಾಜ್‌ ಐ.ಇ.ಸಿ ಸಂಯೋಜಕ ಉಮೇಶ್‌ ಹುಲಿಕುಂಟೆ ಸೇರಿದಂತೆ ಅಧಿಕಾರಿ, ಸಿಬ್ಬಂದಿವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.