ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್ ಸಮರ !
Team Udayavani, May 28, 2020, 9:55 AM IST
ಉಡುಪಿ: ದುಬಾೖಯಿಂದ ಆಗಮಿಸಿದ ಗರ್ಭಿಣಿ ಮಹಿಳೆಯನ್ನು ಹೋಂ ಕ್ವಾರಂಟೈನ್ ಬದಲಾಗಿ ಹೊಟೇಲ್ ಕ್ವಾರಂಟೈನ್ಗೆ ಕಳುಹಿಸುವ ಮೂಲಕ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸರಕಾರದ ನಿಯಮ ಉಲ್ಲಂಘಿಸಿ, ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬುಧವಾರ ಟ್ವೀಟ್ ಮೂಲಕ ದೂರು ನೀಡಿದ್ದಾರೆ.
ಗರ್ಭಿಣಿ ಮಹಿಳೆ ಉಡುಪಿ ಲಾಡ್ಜ್ ನಲ್ಲಿ 15 ದಿನಗಳ ಕ್ವಾರಂಟೈನ್ ಅವಧಿ ಪೂರೈಸಿದ್ದಾರೆ. ಆದರೂ ಇನ್ನೂ ಕ್ವಾರಂಟೈನ್ ಸೆಂಟರ್ನಲ್ಲಿ ಇಡಲಾಗಿದೆ. ಜಿಲ್ಲಾಡಳಿತ ಸರಕಾರದ ನಿಯಮ ಪಾಲಿಸುತ್ತಿಲ್ಲ. ಮನೆಯಿಂದ ಆಹಾರ ಕಲ್ಪಿಸುವ ವ್ಯವಸ್ಥೆಯನ್ನು ಸಹ ನಿಷೇಧಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಡಿಸಿ ಪ್ರತ್ಯುತ್ತರ
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವೀಟ್ಗೆ ಪ್ರತ್ಯುತ್ತರ ನೀಡಿದ ಉಡುಪಿ ಜಿಲ್ಲಾಧಿಕಾರಿ ಅವರು, ಇಲ್ಲಿ ಬೇಜವಾಬ್ದಾರಿ ಪ್ರಶ್ನೆಯೇ ಇಲ್ಲ. ಜಿಲ್ಲೆಗೆ 8 ಸಾವಿರ ಜನರು ಹೊರ ದೇಶ, ರಾಜ್ಯದಿಂದ ಬಂದಿದ್ದಾರೆ. ಅವರೆಲ್ಲರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ದುಬಾೖಯಿಂದ ಬಂದ ಗರ್ಭಿಣಿ ಮಹಿಳೆಯು ಕೋವಿಡ್ ವೈರಸ್ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣದಿಂದ 14 ದಿನಗಳ ಅನಂತರ ಪರೀಕ್ಷಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ರೀಟ್ವೀಟ್ ಮಾಡಿದ್ದಾರೆ.
ಗರ್ಭಿಣಿ ಮಹಿಳೆ ಮನೆಗೆ
15 ದಿನ ಕ್ವಾರಂಟೈನ್ ಅವಧಿ ಮುಗಿಸಿದ ಗರ್ಭಿಣಿಯನ್ನು ಹೊಟೇಲ್ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ನಾನು ಜಿಲ್ಲಾಡಳಿತದ ವಿರುದ್ಧವಾಗಿಲ್ಲ. ಆದರೆ ನಿಯಮ ಮೀರಿ ಅಕ್ರಮ ಗಣಿಗಾರಿಕೆ, ಜನರಿಗೆ ಕಿರುಕುಳ ನೀಡಿದಾಗ ಧ್ವನಿ ಎತ್ತಬೇಕಾಗುತ್ತದೆ. ಉತ್ತಮ ಕೆಲಸಗಳಿಗೆ ನನ್ನ ಬೆಂಬಲವಿರುತ್ತದೆ ಎಂದು ಪ್ರಮೋದ್ ಮಧ್ವರಾಜ್ ಅವರು ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
ರಘುಪತಿ ಭಟ್ ಟ್ವೀಟ್
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವೀಟ್ಗೆ ರೀ ಟ್ವೀಟ್ ಮಾಡಿದ ಶಾಸಕ ಕೆ.ರಘುಪತಿ ಭಟ್ 60 ದಿನಗಳಿಂದ ಹೋಂ ಕ್ವಾರಂಟೈನ್ ಆಗಿರುವ ಮಾಜಿ ಸಚಿವರು ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಆದರೆ ಜಿಲ್ಲೆಯ ಜನರ ಆರೋಗ್ಯದ ಕಡೆಗೆ ನಿರಂತರವಾಗಿ ದುಡಿಯುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ