ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !


Team Udayavani, May 28, 2020, 9:55 AM IST

ಮಾಜಿ ಸಚಿವ -ಡಿಸಿ ಮಧ್ಯೆ ಟ್ವೀಟ್‌ ಸಮರ !

ಉಡುಪಿ: ದುಬಾೖಯಿಂದ ಆಗಮಿಸಿದ ಗರ್ಭಿಣಿ ಮಹಿಳೆಯನ್ನು ಹೋಂ ಕ್ವಾರಂಟೈನ್‌ ಬದಲಾಗಿ ಹೊಟೇಲ್‌ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಸರಕಾರದ ನಿಯಮ ಉಲ್ಲಂಘಿಸಿ, ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬುಧವಾರ ಟ್ವೀಟ್‌ ಮೂಲಕ ದೂರು ನೀಡಿದ್ದಾರೆ.

ಗರ್ಭಿಣಿ ಮಹಿಳೆ ಉಡುಪಿ ಲಾಡ್ಜ್ ನಲ್ಲಿ 15 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಿದ್ದಾರೆ. ಆದರೂ ಇನ್ನೂ ಕ್ವಾರಂಟೈನ್‌ ಸೆಂಟರ್‌ನಲ್ಲಿ ಇಡಲಾಗಿದೆ. ಜಿಲ್ಲಾಡಳಿತ ಸರಕಾರದ ನಿಯಮ ಪಾಲಿಸುತ್ತಿಲ್ಲ. ಮನೆಯಿಂದ ಆಹಾರ ಕಲ್ಪಿಸುವ ವ್ಯವಸ್ಥೆಯನ್ನು ಸಹ ನಿಷೇಧಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಡಿಸಿ ಪ್ರತ್ಯುತ್ತರ
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಉಡುಪಿ ಜಿಲ್ಲಾಧಿಕಾರಿ ಅವರು, ಇಲ್ಲಿ ಬೇಜವಾಬ್ದಾರಿ ಪ್ರಶ್ನೆಯೇ ಇಲ್ಲ. ಜಿಲ್ಲೆಗೆ 8 ಸಾವಿರ ಜನರು ಹೊರ ದೇಶ, ರಾಜ್ಯದಿಂದ ಬಂದಿದ್ದಾರೆ. ಅವರೆಲ್ಲರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ದುಬಾೖಯಿಂದ ಬಂದ ಗರ್ಭಿಣಿ ಮಹಿಳೆಯು ಕೋವಿಡ್ ವೈರಸ್‌ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣದಿಂದ 14 ದಿನಗಳ ಅನಂತರ ಪರೀಕ್ಷಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ರೀಟ್ವೀಟ್‌ ಮಾಡಿದ್ದಾರೆ.

ಗರ್ಭಿಣಿ ಮಹಿಳೆ ಮನೆಗೆ
15 ದಿನ ಕ್ವಾರಂಟೈನ್‌ ಅವಧಿ ಮುಗಿಸಿದ ಗರ್ಭಿಣಿಯನ್ನು ಹೊಟೇಲ್‌ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ನಾನು ಜಿಲ್ಲಾಡಳಿತದ ವಿರುದ್ಧವಾಗಿಲ್ಲ. ಆದರೆ ನಿಯಮ ಮೀರಿ ಅಕ್ರಮ ಗಣಿಗಾರಿಕೆ, ಜನರಿಗೆ ಕಿರುಕುಳ ನೀಡಿದಾಗ ಧ್ವನಿ ಎತ್ತಬೇಕಾಗುತ್ತದೆ. ಉತ್ತಮ ಕೆಲಸಗಳಿಗೆ ನನ್ನ ಬೆಂಬಲವಿರುತ್ತದೆ ಎಂದು ಪ್ರಮೋದ್‌ ಮಧ್ವರಾಜ್‌ ಅವರು ಟ್ವೀಟರ್‌ ಖಾತೆಯಲ್ಲಿ ಮಾಹಿತಿ  ನೀಡಿದ್ದಾರೆ.

ರಘುಪತಿ ಭಟ್‌ ಟ್ವೀಟ್‌
ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಟ್ವೀಟ್‌ಗೆ ರೀ ಟ್ವೀಟ್‌ ಮಾಡಿದ ಶಾಸಕ ಕೆ.ರಘುಪತಿ ಭಟ್‌ 60 ದಿನಗಳಿಂದ ಹೋಂ ಕ್ವಾರಂಟೈನ್‌ ಆಗಿರುವ ಮಾಜಿ ಸಚಿವರು ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಆದರೆ ಜಿಲ್ಲೆಯ ಜನರ ಆರೋಗ್ಯದ ಕಡೆಗೆ ನಿರಂತರವಾಗಿ ದುಡಿಯುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.