ವಿದ್ಯುತ್‌, ನೀರು: ಚುನಾವಣಾ ಭರವಸೆ ಈಡೇರಿಕೆ : ಪ್ರಮೋದ್‌


Team Udayavani, Feb 3, 2018, 9:00 AM IST

Pramod-2-2.jpg

ಉಡುಪಿ: ಉಡುಪಿಗೆ ನಿರಂತರ ವಿದ್ಯುತ್‌ ಮತ್ತು ನೀರು ಪೂರೈಕೆ ಮಾಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಭರವಸೆ ನೀಡಿದ್ದೆ. ಅದರಂತೆ ಉಡುಪಿ ತಾಲೂಕಿಗೆ ನಿರಂತರ 24 ಗಂಟೆ ವಿದ್ಯುತ್‌ ಒದಗಿಸಲಾಗಿದೆ. ಇದೀಗ ವಾರಾಹಿಯಿಂದ ಉಡುಪಿಗೆ ಕುಡಿಯುವ ನೀರಿನ ಪೂರೈಕೆ ಯೋಜನೆ ಕಾರ್ಯಗತಗೊಳ್ಳಲಿದ್ದು ಎರಡೂ ಭರವಸೆ ಈಡೇರಿದಂತಾಗಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ. ವಾರಾಹಿ ನದಿಯಿಂದ ಉಡುಪಿಗೆ ಕುಡಿಯುವ ನೀರು ಪೂರೈಕೆ ಯೋಜನೆಯ ಅನುಷ್ಠಾನದ ಪೂರ್ವಭಾವಿಯಾಗಿ ಫೆ.2ರಂದು ಉಡುಪಿ ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಜರಗಿದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಈಗ ಉಡುಪಿ ನಗರಕ್ಕೆ ಸ್ವರ್ಣಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಇದರಿಂದ 365 ದಿನಗಳು ಕೂಡ ನೀರು ಪೂರೈಕೆ ಮಾಡಲು ಅಸಾಧ್ಯವಾಗಿದೆ. ಈ ಹಿಂದೆ ಸ್ವರ್ಣಾ ಎರಡನೇ ಹಂತದ ಯೋಜನೆ ಮಾಡುವ ಸಂದರ್ಭವೇ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಇದರಿಂದ ನೀರು ಪೂರೈಕೆ ಪೂರ್ಣಪ್ರಮಾಣದಲ್ಲಿ ಸಾಧ್ಯವಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕೆಲವು ಜನಪ್ರತಿನಿಧಿಗಳು ಸ್ವರ್ಣೆ ನಮ್ಮ ನದಿ ಎಂಬ ಭಾವನಾತ್ಮಕ ವಿಚಾರ ಮುಂದಿಟ್ಟು ಎರಡನೇ ಯೋಜನೆ ಅನುಷ್ಠಾನಗೊಳಿಸಿದರು. ಆದರೆ ಈಗ ವಾರಾಹಿಯಿಂದ ನೀರು ತರುವುದು ಅನಿವಾರ್ಯವಾಗಿದೆ. ಅಮೃತ್‌ ಯೋಜನೆ ಮತ್ತು ಎಡಿಬಿಯಿಂದ ಕುಡಿಯುವ ನೀರು ಪೂರೈಕೆ ಮತ್ತು ಒಳಚರಂಡಿ ಕಾಮಗಾರಿಗೆ 370 ಕೋ.ರೂ. ಬಿಡುಗಡೆಯಾಗಲಿದೆ ಎಂದು ಸಚಿವರು ಹೇಳಿದರು.

ಅಧಿಕಾರಿಗಳ ನಡುವೆ ಸಮಾಲೋಚನೆ !  
ವಾರಾಹಿಯಿಂದ ಉಡುಪಿಗೆ ನೀರು ತರುವ ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಸಾರ್ವಜನಿಕ ಅಭಿಪ್ರಾಯ ಪಡೆದು ಆ ವರದಿಯನ್ನು ಸರಕಾರಕ್ಕೆ ಕಳುಹಿಸಿಕೊಡುವ ಉದ್ದೇಶದಿಂದ ಈ ಸಮಾಲೋಚನ ಸಭೆ ಕರೆಯಲಾಗಿತ್ತು. ನಗರಸಭೆಯ ಅಧಿವೇಶನ ಜರಗುವ ಸಭಾಂಗಣದಲ್ಲೇ ಆಯೋಜಿಸಲಾಗಿತ್ತು. ಸೀಮಿತ ಸಂಖ್ಯೆಯ ಆಸನಗಳಿದ್ದವು. ಆದರೆ ಅವುಗಳು ಕೂಡ ಭರ್ತಿಯಾಗಿರಲಿಲ್ಲ.

ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಪೌರಾಯುಕ್ತ ಮಂಜುನಾಥಯ್ಯ, ನಗರಸಭೆ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು. 

30 ತಿಂಗಳಲ್ಲಿ ಪೂರ್ಣ 
ವಾರಾಹಿಯಿಂದ ಉಡುಪಿ ಸ್ವರ್ಣೆ ಅಣೆಕಟ್ಟಿನವರೆಗೆ ಪೈಪ್‌ ಲೈನ್‌ ಮೂಲಕ ನೀರು ತಂದು ಅಲ್ಲಿ ಶುದ್ಧೀಕರಣ ಮಾಡಿ ವಿತರಣೆ ಮಾಡುವ ಯೋಜನೆ ಇದಾಗಿದ್ದು ಒಟ್ಟು 38 ಕಿ.ಮೀ. ಪೈಪ್‌ಲೈನ್‌ ಅಳವಡಿಸಲಾಗುವುದು. ಅಗತ್ಯ ಇರುವಲ್ಲಿ ಜನರ ಮನವೊಲಿಸಿ ಭೂ ಸ್ವಾಧೀನ ಮಾಡಲಾಗುವುದು. ಬಹುತೇಕ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿ.ಪಂ. ರಸ್ತೆಗಳ ಪಕ್ಕದಲ್ಲೇ ಪೈಪ್‌ಲೈನ್‌ ಅಳವಡಿಸಲಾಗುವುದು. ಯೋಜನೆಗೆ ಟೆಂಡರ್‌ ಪ್ರಕ್ರಿಯೆ
ನಡೆಯುತ್ತಿದ್ದು ಈ ವರ್ಷದ ಮೇ ತಿಂಗಳಿನಲ್ಲಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಅನಂತರದ 30 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಕೆಯುಐಡಿಎಫ್ಸಿ ಸಮನ್ವಯಾಧಿಕಾರಿ ಪ್ರಭಾಕರ ಶರ್ಮ ತಿಳಿಸಿದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.