ವಿದ್ಯುತ್‌, ನೀರು: ಚುನಾವಣಾ ಭರವಸೆ ಈಡೇರಿಕೆ : ಪ್ರಮೋದ್‌


Team Udayavani, Feb 3, 2018, 9:00 AM IST

Pramod-2-2.jpg

ಉಡುಪಿ: ಉಡುಪಿಗೆ ನಿರಂತರ ವಿದ್ಯುತ್‌ ಮತ್ತು ನೀರು ಪೂರೈಕೆ ಮಾಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಭರವಸೆ ನೀಡಿದ್ದೆ. ಅದರಂತೆ ಉಡುಪಿ ತಾಲೂಕಿಗೆ ನಿರಂತರ 24 ಗಂಟೆ ವಿದ್ಯುತ್‌ ಒದಗಿಸಲಾಗಿದೆ. ಇದೀಗ ವಾರಾಹಿಯಿಂದ ಉಡುಪಿಗೆ ಕುಡಿಯುವ ನೀರಿನ ಪೂರೈಕೆ ಯೋಜನೆ ಕಾರ್ಯಗತಗೊಳ್ಳಲಿದ್ದು ಎರಡೂ ಭರವಸೆ ಈಡೇರಿದಂತಾಗಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ. ವಾರಾಹಿ ನದಿಯಿಂದ ಉಡುಪಿಗೆ ಕುಡಿಯುವ ನೀರು ಪೂರೈಕೆ ಯೋಜನೆಯ ಅನುಷ್ಠಾನದ ಪೂರ್ವಭಾವಿಯಾಗಿ ಫೆ.2ರಂದು ಉಡುಪಿ ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಂಗಣದಲ್ಲಿ ಜರಗಿದ ಸಮಾಲೋಚನ ಸಭೆಯಲ್ಲಿ ಅವರು ಮಾತನಾಡಿದರು.

ಈಗ ಉಡುಪಿ ನಗರಕ್ಕೆ ಸ್ವರ್ಣಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಇದರಿಂದ 365 ದಿನಗಳು ಕೂಡ ನೀರು ಪೂರೈಕೆ ಮಾಡಲು ಅಸಾಧ್ಯವಾಗಿದೆ. ಈ ಹಿಂದೆ ಸ್ವರ್ಣಾ ಎರಡನೇ ಹಂತದ ಯೋಜನೆ ಮಾಡುವ ಸಂದರ್ಭವೇ ಯೋಜನೆಯ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಇದರಿಂದ ನೀರು ಪೂರೈಕೆ ಪೂರ್ಣಪ್ರಮಾಣದಲ್ಲಿ ಸಾಧ್ಯವಿಲ್ಲ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕೆಲವು ಜನಪ್ರತಿನಿಧಿಗಳು ಸ್ವರ್ಣೆ ನಮ್ಮ ನದಿ ಎಂಬ ಭಾವನಾತ್ಮಕ ವಿಚಾರ ಮುಂದಿಟ್ಟು ಎರಡನೇ ಯೋಜನೆ ಅನುಷ್ಠಾನಗೊಳಿಸಿದರು. ಆದರೆ ಈಗ ವಾರಾಹಿಯಿಂದ ನೀರು ತರುವುದು ಅನಿವಾರ್ಯವಾಗಿದೆ. ಅಮೃತ್‌ ಯೋಜನೆ ಮತ್ತು ಎಡಿಬಿಯಿಂದ ಕುಡಿಯುವ ನೀರು ಪೂರೈಕೆ ಮತ್ತು ಒಳಚರಂಡಿ ಕಾಮಗಾರಿಗೆ 370 ಕೋ.ರೂ. ಬಿಡುಗಡೆಯಾಗಲಿದೆ ಎಂದು ಸಚಿವರು ಹೇಳಿದರು.

ಅಧಿಕಾರಿಗಳ ನಡುವೆ ಸಮಾಲೋಚನೆ !  
ವಾರಾಹಿಯಿಂದ ಉಡುಪಿಗೆ ನೀರು ತರುವ ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಸಾರ್ವಜನಿಕ ಅಭಿಪ್ರಾಯ ಪಡೆದು ಆ ವರದಿಯನ್ನು ಸರಕಾರಕ್ಕೆ ಕಳುಹಿಸಿಕೊಡುವ ಉದ್ದೇಶದಿಂದ ಈ ಸಮಾಲೋಚನ ಸಭೆ ಕರೆಯಲಾಗಿತ್ತು. ನಗರಸಭೆಯ ಅಧಿವೇಶನ ಜರಗುವ ಸಭಾಂಗಣದಲ್ಲೇ ಆಯೋಜಿಸಲಾಗಿತ್ತು. ಸೀಮಿತ ಸಂಖ್ಯೆಯ ಆಸನಗಳಿದ್ದವು. ಆದರೆ ಅವುಗಳು ಕೂಡ ಭರ್ತಿಯಾಗಿರಲಿಲ್ಲ.

ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಪೌರಾಯುಕ್ತ ಮಂಜುನಾಥಯ್ಯ, ನಗರಸಭೆ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು. 

30 ತಿಂಗಳಲ್ಲಿ ಪೂರ್ಣ 
ವಾರಾಹಿಯಿಂದ ಉಡುಪಿ ಸ್ವರ್ಣೆ ಅಣೆಕಟ್ಟಿನವರೆಗೆ ಪೈಪ್‌ ಲೈನ್‌ ಮೂಲಕ ನೀರು ತಂದು ಅಲ್ಲಿ ಶುದ್ಧೀಕರಣ ಮಾಡಿ ವಿತರಣೆ ಮಾಡುವ ಯೋಜನೆ ಇದಾಗಿದ್ದು ಒಟ್ಟು 38 ಕಿ.ಮೀ. ಪೈಪ್‌ಲೈನ್‌ ಅಳವಡಿಸಲಾಗುವುದು. ಅಗತ್ಯ ಇರುವಲ್ಲಿ ಜನರ ಮನವೊಲಿಸಿ ಭೂ ಸ್ವಾಧೀನ ಮಾಡಲಾಗುವುದು. ಬಹುತೇಕ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿ.ಪಂ. ರಸ್ತೆಗಳ ಪಕ್ಕದಲ್ಲೇ ಪೈಪ್‌ಲೈನ್‌ ಅಳವಡಿಸಲಾಗುವುದು. ಯೋಜನೆಗೆ ಟೆಂಡರ್‌ ಪ್ರಕ್ರಿಯೆ
ನಡೆಯುತ್ತಿದ್ದು ಈ ವರ್ಷದ ಮೇ ತಿಂಗಳಿನಲ್ಲಿ ಕಾಮಗಾರಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಅನಂತರದ 30 ತಿಂಗಳಲ್ಲಿ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಕೆಯುಐಡಿಎಫ್ಸಿ ಸಮನ್ವಯಾಧಿಕಾರಿ ಪ್ರಭಾಕರ ಶರ್ಮ ತಿಳಿಸಿದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.