ಸಮಗ್ರ ಆರೋಗ್ಯ ಸುಧಾರಣೆಗೆ ಆದ್ಯತೆ
Team Udayavani, Mar 1, 2017, 3:46 PM IST
ಉಡುಪಿ: ಫಿಸಿಯೋಥೆರಪಿ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಪೂರಕವಾದ ಎಲ್ಲ ರಂಗಗಳನ್ನೂ ಒಳಗೊಂಡು ಸಮಗ್ರ ಆರೋಗ್ಯ ಸುಧಾರಣೆಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಹೇಳಿದರು.
ಮಣಿಪಾಲ ವಿಶ್ವವಿದ್ಯಾನಿಲಯ ಮತ್ತು ದ.ಕ. ಫಿಸಿಯೋಥೆರಪಿ ಶಿಕ್ಷಕರ ಸಂಘದ ಆಶ್ರಯಧಿದಲ್ಲಿ ಮಣಿಪಾಲದ ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸೈನ್ಸ್ (ಎಸ್ಒಎಎಚ್ಎಸ್) ಮಂಗಳಧಿವಾರ ಆಯೋಜಿಸಿದ “ಫಿಸಿಯೋಕಾನ್ 2017′ ಪೂರ್ವಧಿಸಮ್ಮೇಳನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಸರಕಾರಿ ಸ್ವಾಮ್ಯದಲ್ಲಿ ಒಂದು ಕಡೆ ಫಿಸಿಯೋಧಿಥೆರಪಿ ಸಂಸ್ಥೆ ಇದ್ದು ಇನ್ನೊಂದನ್ನು ಆರಂಭಿಸಲು ಯತ್ನಿಸಲಾಗುವುದು. ಫಿಸಿಯೋಧಿಥೆರಪಿ ಕೋರ್ಸ್ಗೆ ಬೇಡಿಕೆ ಇದೆ ಎಂದರು.
ಮಾನವ ಸಂಪದ
ಮಾನವ ಸಂಪನ್ಮೂಲಕ್ಕೆ ತರಬೇತಿ, ಶಿಕ್ಷಣವನ್ನು ಕೊಟ್ಟರೆ ಅದೇ ಸಂಪತ್ತಾಗಿ ಪರಿವರ್ತನೆಗೊಳ್ಳುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಮಣಿಪಾಲದ ಶಿಕ್ಷಣ ಸಂಸ್ಥೆಗಳು. ಬೆಂಗಳೂರು ಮಾಹಿತಿ ತಂತ್ರಧಿಜ್ಞಾನದ ಕೇಂದ್ರವಾಗಿ ಬೆಳೆಯಲು ಹಿಂದಿಧಿನವರು ಆರಂಭಿಸಿದ ಎಂಜಿನಿಯರಿಂಗ್ ಕಾಲೇಜುಧಿಗಳು ಕಾರಣ. ಮಣಿಪಾಲ ಸಂಸ್ಥೆ ಉತ್ತರ ಕರ್ನಾಟಕಧಿದಲ್ಲಿಯೂ ಕ್ಯಾಂಪಸ್ ತೆರೆದು ಅಲ್ಲಿನ ಅಬಿವೃದ್ಧಿಗೆ ಸಹಕಾರ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ವಿ.ವಿ. ಸಹಧಿಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಅವರು, ಸಚಿವರು ಇದೇ ಮೊದಲ ಬಾರಿಗೆ ಮಣಿಪಾಲಕ್ಕೆ ಬಂದಿರುವುದು ಸಂತಸ ತಂದಿದೆ. ಸಚಿವರ ಅಪೇಕ್ಷೆಯಂತೆ ಉತ್ತರ ಕರ್ನಾಟಕದಲ್ಲಿ ಕ್ಯಾಂಪಸ್ ತೆರೆಯಲು ಪ್ರಯತ್ನಿಸುತ್ತೇವೆ ಎಂದರು.
ಕುಲಪತಿ ಡಾ| ಎಚ್. ವಿನೋದ ಭಟ್ ಸ್ವಾಗತಿಸಿ ಎಸ್ಒಎಎಚ್ಎಸ್ ಡೀನ್ ಡಾ| ರಾಜಶೇಖರ್ ಅತಿಥಿಗಳನ್ನು ಪರಿಚಯಿಸಿದರು. ಕರ್ನಾಟಕ ರಾಜ್ಯ ಫಿಸಿಯೋಥೆರಪಿ ಫೆಡರೇಶನ್ ಕಾರ್ಯಾಧ್ಯಕ್ಷ ಡಾ| ಯು.ಟಿ. ಇಫ್ತಿಕಾರ್ ಅಲಿ ಪ್ರಸ್ತಾವನೆಗೈದರು. ವಿ.ವಿ. ಮಂಗಳೂರು ಕ್ಯಾಂಪಸ್ ಸಹಕುಲಪತಿ ಡಾ| ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಫಿಸಿಯೋಥೆರಪಿ ಉಪನ್ಯಾಸಕ ಅಬ್ರಹಾಂ ಸ್ಯಾಮುವೆಲ್ ಬಾಬು ನಿರ್ವಹಿಸಿ, ವಿಭಾಗ ಮುಖ್ಯಸ್ಥೆ ಡಾ| ವೈಶಾಲಿ ಕೆ. ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ