ಕುಡಿಯುವ ನೀರಿನ ಕಾಮಗಾರಿ: ಟಾಸ್ಕ್ಫೋರ್ಸ್‌ಗೆ 80 ಲ.ರೂ. ಬಿಡುಗಡೆ


Team Udayavani, Mar 10, 2017, 2:08 PM IST

10-UDUPI-8.jpg

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಕುಡಿಯುವ ನೀರಿನ ಕಾಮಗಾರಿಯ ಕಾರ್ಯಪಡೆಗೆ (ಟಾಸ್ಕ್ ಫೋರ್ಸ್‌) ಪ್ರಥಮ ಹಂತದಲ್ಲಿ 40 ಲ.ರೂ. ಅನುದಾನ ಬಂದಿದ್ದು, ಅದರ ಕಾಮಗಾರಿಗಳ ಪಟ್ಟಿ ಸಿದ್ಧಗೊಂಡು ಪ್ರಗತಿಯಲ್ಲಿದೆ. ಇದೀಗ ಮತ್ತೆ 40 ಲ.ರೂ. ಅನುದಾನ ಹಂಚಿಕೆಯಾಗಿ ಬಂದಿದ್ದು, ಈ ಅನುದಾನದಲ್ಲಿ ಕಾಮಗಾರಿಗಳ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಲು ಪ್ರಸ್ತಾವನೆ, ಅಭಿಪ್ರಾಯ ಸಂಗ್ರಹಣೆಗೆ ಹಾಗೂ ಮನೆನಿವೇಶನಗಳ ಬಗ್ಗೆ ಚರ್ಚಿಸಲು ಕಾಪು ಶಾಸಕ ವಿನಯ ಕುಮಾರ್‌ ಸೊರಕೆ ಅವರ ಅಧ್ಯಕ್ಷತೆಯಲ್ಲಿ ಉಡುಪಿ ತಾ.ಪಂ. ಸಭಾಂಗಣದಲ್ಲಿ ಗುರುವಾರ ಸಭೆ ನಡೆಯಿತು.

ಜಿ.ಪಂ., ತಾ.ಪಂ. ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಪಿಡಿಒ, ವಿ.ಎ. ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಬೋರ್‌ವೆಲ್‌, ಬಾವಿಗಳಿಗೆ ಪಂಪು, ಪೈಪ್‌ಲೈನ್‌ ಅಳವಡಿಸಲು ತುರ್ತಾಗಿ ಮೆಸ್ಕಾಂ ಕನೆಕ್ಷನ್‌ಗಳನ್ನು ಮಾಡಬೇಕು. ನೀರಿನ ಮೂಲಗಳಿದ್ದರೂ, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅಧಿಕಾರಿಗಳು ಆದ್ಯತೆ ಮೇರೆಗೆ ಕೆಲಸ ಮಾಡಬೇಕು ಎಂದು ಶಾಸಕ ಸೊರಕೆ ಸೂಚಿಸಿದರು.

ಎಂಜಿನಿಯರ್‌ಗಳು ಅವರ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಇರುವ ನೀರಿನ ಸಮಸ್ಯೆಯನ್ನು ಗುರುತಿಸಿಕೊಳ್ಳಬೇಕು ಎಂದು ಹೇಳಿದ ಶಾಸಕರು, ಕಂದಾಯ ಇಲಾಖೆಯ ಜಾಗಗಳ ಸರ್ವೇ ನಡೆಸಲು ಅಗತ್ಯವಿರುವ ಸರ್ವೇಯರ್‌ಗಳ ಕೊರತೆಯ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತರಲಾಗುವುದು. ಅನುದಾನಗಳನ್ನು ಜೋಡಣೆ ಮಾಡಿಕೊಂಡು ಕಾಮಗಾರಿ ನಡೆಸಲಾಗುವುದು. ಅಗತ್ಯ ಬಿದ್ದರೆ ತನ್ನ ಶಾಸಕ ನಿಧಿಯಿಂದಲೂ ಅನುದಾನ ಬಳಸಿಕೊಳ್ಳಲಾಗುವುದು ಎಂದವರು ಹೇಳಿದರು.

ಪಲಿಮಾರಿನಲ್ಲಿ ಶ್ಮಶಾನ, ತ್ಯಾಜ್ಯ ವಿಲೇವಾರಿಗೆ ಗುರುತಿಸಿರುವ ಜಾಗದ ಬಳಿ ಇರುವ ಸಮಸ್ಯೆಯ ಕುರಿತು ವಿಷಯ ಪ್ರಸ್ತಾಪವಾಯಿತು. ಪಿಡಬ್ಲೂéಡಿ ರಸ್ತೆ ಪಕ್ಕ ಬೇಲಿ ಹಾಕಿರುವುದಕ್ಕೆ ಪಲಿಮಾರು ಗ್ರಾ.ಪಂ. ಅಧ್ಯಕ್ಷರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪೊಲೀಸ್‌ ಕಂಪ್ಲೇಂಟ್‌ ದಾಖಲಿಸಲು ಶಾಸಕರು ಪಿಡಬ್ಲೂéಡಿ ಅಧಿಕಾರಿಗಳಿಗೆ ಸೂಚಿಸಿದರು.

ಯುಪಿಸಿಎಲ್‌ನಿಂದ 4 ಬೋರ್‌ವೆಲ್‌ಗ‌ಳು ಎಲ್ಲೂರಿಗೆ ನೀಡಲಾಗಿದೆ. ಟಿ.ಸಿ. ಸಮಸ್ಯೆ ಇದೆ. ಪಡುಬೆಳ್ಳೆಯಲ್ಲಿ ಬಾವಿಯಾಗಿ 4 ವರ್ಷಗಳಾದರೂ ಮೆಸ್ಕಾಂ ಕನೆಕ್ಷನ್‌ ಆಗಿಲ್ಲ. ಪಟ್ಲ, ಪಡುಬಿದ್ರಿ ಹಾಸ್ಟೆಲ್‌ಗ‌ಳಲ್ಲಿ ನೀರಿನ ಸಮಸ್ಯೆ ಇದೆ. ನಡಾÕಲು ಗ್ರಾಮದಲ್ಲಿನ 2 ಬಾವಿಗಳು ಬತ್ತಿ ಹೋಗಿದ್ದು, ಕುಡಿಯುವ ನೀರಿಗೆ ತೊಂದರೆಯುಂಟಾಗಿದೆ. ಮುದ್ದೂರು ಹರಿಜನ ಕಾಲನಿ ಬಾವಿ ಕುಸಿದಿದೆ. ಕಂದಾಯ ಇಲಾಖೆಯಲ್ಲಿ ಸರ್ವೇ ಕಾರ್ಯ ವಿಳಂಬ, ಹಕ್ಕುಪತ್ರದ ಸಮಸ್ಯೆಗಳ ಕುರಿತು ವಿಷಯ ಪ್ರಸ್ತಾಪಕ್ಕೆ ಬಂದಿತು.

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ, ಜಿ.ಪಂ. ಸದಸ್ಯರಾದ ಚಂದ್ರಿಕಾ ರಂಜನ್‌ ಕೇಳ್ಕರ್‌, ಶಿಲ್ಪಾ ಜಿ. ಸುವರ್ಣ, ವಿಲ್ಸನ್‌ ರಾಡ್ರಿಗಸ್‌, ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ತಹಶೀಲ್ದಾರ್‌ ಮಹೇಶ್ಚಂದ್ರ, ತಾ.ಪಂ. ಇಒ ಶೇಷಪ್ಪ ಆರ್‌. ಉಪಸ್ಥಿತರಿದ್ದರು.

ಪಿಡಿಒ ಅವರಿಗೆ ವಸತಿಯದ್ದೇ ಗೋಳಂತೆ..!
ವಸತಿ ಯೋಜನೆಗಳಿಗೆ ಸಂಬಂಧಿಸಿ ವಸತಿ ನಿಗಮ ಆ್ಯಪ್‌ ತಯಾರಿಸಿದ್ದು, ಇದರಿಂದ ಬಹಳ ಸಮಸ್ಯೆಯಾಗುತ್ತಲಿದೆ. 1 ಮನೆಯದ್ದು 5 ಬಾರಿ ಫೊಟೋ ತೆಗೆಯಬೇಕಾಗಿದೆ. ಹೀಗಾಗಿ ಒಬ್ಬ ಪಿಡಿಒ 1 ಮನೆಗೆ ಕನಿಷ್ಠ 20 ಬಾರಿ ಭೇಟಿ ನೀಡಬೇಕಿದೆ. ಆ್ಯಪ್‌ಗೆ ಸರಿಯಾಗಿ ಅಪ್‌ಲೋಡ್‌ ಆಗದಿದ್ದರೆ, ಟಾರ್ಗೆಟ್‌ ಆಗದಿದ್ದರೆ ನಿಗಮದಿಂದ ಶೋಕಾಸ್‌ ನೊಟೀಸ್‌ ಕಳುಹಿಸುತ್ತಾರೆ. ಇದರಿಂದಾಗಿ ಬೇರೆ ಕೆಲಸಗಳತ್ತ ಗಮನ ಕೊಡಲೂ ಆಗುತ್ತಿಲ್ಲ ಎಂದು ಹಲವು ಪಿಡಿಒ ಅವರು ಶಾಸಕರಲ್ಲಿ ಗೋಳು ತೋಡಿಕೊಂಡರು. ಈ ಬಗ್ಗೆ ವಸತಿ ಸಚಿವರು, ನಿಗಮದ ಎಂಡಿ ಅವರಲ್ಲಿ ಮಾತನಾಡುವುದಾಗಿ ಶಾಸಕರು ತಿಳಿಸಿದರು.

ಮನೆನಿವೇಶನ ಹಂಚಿಕೆಗೆ ಕ್ರಮ
ಮನೆನಿವೇಶನಕ್ಕೆ ಜಾಗಗಳನ್ನು ಆಯಾ ಗ್ರಾ.ಪಂ.ಗಳನ್ನು ಗುರುತಿಸಿಡಬೇಕು. ಜಾಗದ ಲಭ್ಯತೆ ಇಲ್ಲದಿದ್ದರೆ, ಪಕ್ಕದ ಪಂಚಾಯತ್‌ಗಳಲ್ಲಿ ಜಾಗವಿದ್ದರೆ ಕೊಡಲು ಅವಕಾಶವಿದೆ. ಪಂಚಾಯತ್‌ ಕಾಡು, ನೆಡುತೋಪು, ಡೀಮ್ಡ್ ಫಾರೆಸ್ಟ್‌ ಇದ್ದಲ್ಲಿ ಅದನ್ನು ವಿರಹಿತಗೊಳಿಸಿ ನಿವೇಶನಕ್ಕೆ ಮೀಸಲಿಡಲು ಅವಕಾಶಗಳಿದೆ. ಜಿಲ್ಲಾಧಿಕಾರಿಗಳ ಹಂತದಲ್ಲಿ ಸಮಿತಿಯೊಂದಿದ್ದು, ಪಂಚಾಯತ್‌ ಕಾಡು, ನೆಡುತೋಪುವಿನ ಪಟ್ಟಿಯನ್ನು ಗ್ರಾ.ಪಂ.ಗಳು ತಹಶೀಲ್ದಾರ್‌ ಅಥವಾ ರೇಂಜರ್‌ ಅವರಿಗೆ ನೀಡಬೇಕು ಎಂದು ಶಾಸಕರು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.