ಕಾಂಗ್ರೆಸ್ ಹಿಂದೂ ವಿರೋಧಿ ಹೇಗೆ: ಸೊರಕೆ
Team Udayavani, Jul 3, 2018, 7:00 AM IST
ಉಡುಪಿ: ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿಯಾಗುವುದು ಹೇಗೆ ಸಾಧ್ಯ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡ ಉಡುಪಿ ಬ್ಲಾಕ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಚುನಾವಣಾ ಸಮಯ ಭಾವನಾತ್ಮಕ ವಿಚಾರಗಳನ್ನು ಮುಂದೆ ತಂದು ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋಧಿ ಎಂದು ಬಿಂಬಿಸಿ ಬಿಜೆಪಿ ಮತಗಳಿಸುವ ಷಡ್ಯಂತ್ರ ರೂಪಿಸುತ್ತಿದೆ. ಕಾಂಗ್ರೆಸ್ ಪಕ್ಷವು ಅಭಿವೃದ್ಧಿ ಯೋಜನೆ ಗಳನ್ನು ಮುಂದಿಟ್ಟುಕೊಂಡು ಮತಯಾಚಿಸುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಶೇ. 98ರಷ್ಟು ಕಾಯಕರ್ತರು ಹಿಂದೂಗಳು. ಜಿಲ್ಲೆಯ ದೇವಸ್ಥಾನ ಹಾಗೂ ದೈವಸ್ಥಾನಗಳ ಅಭಿವೃದ್ಧಿಯಲ್ಲಿ ಪಕ್ಷಗಳ ಮುಖಂಡರು ಮುಂದಾಳುತನ ವಹಿಸಿರುವಾಗ ಕಾಂಗ್ರೆಸ್ ಪಕ್ಷ ಹಿಂದೂ ವಿರೋಧಿ ಎಂಬ ಬಿಜೆಪಿಯ ಹೇಳಿಕೆ ಹಾಸ್ಯಾಸ್ಪದ ಎಂದವರು ತಿಳಿಸಿದರು.
ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಕಾರ್ಯಕರ್ತರು ಎದೆಗುಂದಬಾರದು. ಈ ಫಲಿತಾಂಶ ತಾತ್ಕಾಲಿಕ ಎಂದು ಸೊರಕೆ ಹೇಳಿದರು.
ಕಾಂಗ್ರೆಸ್ಗೆ ಸತ್ವಪರೀಕ್ಷೆ
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳು ಕಾಂಗ್ರೆಸ್ ಪಕ್ಷಕ್ಕೆ ಸತ್ವ ಪರೀಕ್ಷೆಯಾಗಿದ್ದು, ಕಾರ್ಯಕರ್ತರು ಈಗಿಂದೀಗಲೇ ತೊಡಗಿಸಿಕೊಂಡು ಬಿಜೆಪಿಯ ಸುಳ್ಳು ಅಪಪ್ರಚಾರಗಳಿಗೆ ತಕ್ಕ ಉತ್ತರವನ್ನು ನೀಡಬೇಕಾಗಿದೆ. ಸ್ಥಳೀಯ ಚುನಾವಣೆಗಳಲ್ಲಿ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ರವರು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಬ್ಲಾಕ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆ ಹಾಗೂ ನಿತ್ಯಾನಂದ ಶೆಟ್ಟಿ, ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಸೇವಾದಳದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ಮುರಳಿ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಇಸ್ಮಾಯಿಲ್ ಆತ್ರಾಡಿ, ಭಾಸ್ಕರ್ ರಾವ್ ಕಿದಿಯೂರು, ಶಬ್ಬೀರ್ ಅಹಮ್ಮದ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಯತೀಶ್ ಕರ್ಕೇರ, ಸದಾಶಿವ ಕಟ್ಟೆಗುಡ್ಡೆ, ಸುಜಯ ಪೂಜಾರಿ ಉಪಸ್ಥಿತರಿದ್ದರು. ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.
ಯೋಜನೆ ಮುಂದುವರಿಕೆ
ಹಿಂದಿನ ನಮ್ಮ ಸರಕಾರದಿಂದ ಅನುಷ್ಠಾನಗೊಂಡ ಯೋಜನೆಗಳು ಈ ಸಮ್ಮಿಶ್ರ ಸರಕಾರದಲ್ಲಿಯೂ ಮುಂದುವರಿಯುವುದು. ಜನಪರ ಕಾಳಜಿಯೊಂದಿಗೆ ಒಳ್ಳೆಯ ಆಡಳಿತ ನೀಡಿದಲ್ಲಿ ಜನತೆಯ ಬೆಂಬಲ ಸದಾ ಇರುತ್ತದೆ. ಸರಕಾರದಿಂದ ಅನುಷ್ಠಾನಗೊಂಡ ಯೋಜನೆಗಳನ್ನು ಜನತೆಗೆ ಮನವರಿಕೆ ಮಾಡುವ ಜವಾಬ್ದಾರಿ ಕಾರ್ಯಕರ್ತರಿಗೆ ಇದೆ .
– ಪ್ರತಾಪಚಂದ್ರ ಶೆಟ್ಟಿ
ವಿಧಾನ ಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ