ಮಧ್ವರ 32 ಅಡಿ ಎತ್ತರದ ಏಕಶಿಲಾ ಪ್ರತಿಮೆ


Team Udayavani, Mar 28, 2017, 3:50 AM IST

28-SPORTS-11.jpg

ಕಾಪು: ಪಲಿಮಾರು ಮಠಾಧೀಶರ ಸಂಕಲ್ಪದಂತೆ ಕುರ್ಕಾಲು ಗ್ರಾಮದ ಕುಂಜಾರುಗಿರಿ ಶ್ರೀ ದುರ್ಗಾ ಬೆಟ್ಟದಲ್ಲಿ 40 ಅಡಿ ಎತ್ತರದ ಸಿಮೆಂಟ್‌ ಪಿಲ್ಲರ್‌ (ವೇದಿಕೆ) ಮೇಲೆ ಪ್ರತಿಷ್ಠಾಪಿಸಲು ಉದ್ದೇಶಿರುವ ಪ್ರಪಂಚದಲ್ಲೇ ಅತೀ ದೊಡ್ಡದಾದ 32 ಅಡಿ ಎತ್ತರದ ಜಗದ್ಗುರು ಶ್ರೀ ಮಧ್ವಾಚಾರ್ಯರ ಬೃಹತ್‌ ಏಕಶಿಲಾ ಪ್ರತಿಮೆಯನ್ನು ಕ್ರೇನ್‌ ಮೂಲಕ ಪ್ರತಿಷ್ಠಾಪನೆಗೊಳಿಸುವ ಪ್ರಕ್ರಿಯೆ ಮಾ. 27ರಂದು ನಡೆಯಿತು.

ಕಳೆದ ಮೂರ್‍ನಾಲ್ಕು ದಿನಗಳಿಂದ ಎಲ್‌ ಆ್ಯಂಡ್‌ ಟಿ ಕಂಪೆನಿಯ ಎಂಜಿನಿಯರ್‌ಗಳ ಮಾರ್ಗದರ್ಶನದಲ್ಲಿ ಬೃಹತ್‌ ಕ್ರೇನ್‌ಗಳ ಸಹಾಯದಿಂದ ಶ್ರೀ ಮಧ್ವಾಚಾರ್ಯರ ಏಕಶಿಲಾ ಪ್ರತಿಮೆಯನ್ನು ಪಿಲ್ಲರ್‌ಗಳ ಮೇಲೆ ಎತ್ತಿ ನಿಲ್ಲಿಸುವ ಕಾರ್ಯ ನಡೆಯುತ್ತಿದ್ದು, ಸೋಮವಾರ ಸಂಜೆ ಅಂತಿಮ ಹಂತದಲ್ಲಿ ತಾಂತ್ರಿಕ ಅಡಚಣೆ ಎದುರಾಗಿದ್ದು, ಮಂಗಳವಾರ ಪ್ರತಿಮೆ ಪ್ರತಿಷ್ಠಾಪನೆಗೊಳ್ಳುವ ನಿರೀಕ್ಷೆಯಿದೆ. ಶ್ರೀ ಮಧ್ವಾಚಾರ್ಯರ ಏಕಶಿಲಾ ವಿಗ್ರಹವನ್ನು ಆಚಾರ್ಯರು ಅವತರಿಸಿದ ಪಾಜಕ ಸಮೀಪದಲ್ಲಿರುವ ಅದಮಾರು ಮಠದ ಆಡಳಿತಕ್ಕೊಳಪಟ್ಟಿರುವ ಕುಂಜಾರುಗಿರಿ ಬೆಟ್ಟದಲ್ಲಿ ಪ್ರತಿಷ್ಠಾಪಿಸಬೇಕು ಎನ್ನುವುದು ಪಲಿಮಾರು ಶ್ರೀಗಳ ಸಂಕಲ್ಪವಾಗಿತ್ತು.

32 ಅಡಿ ಎತ್ತರದ ಏಕಶಿಲಾ ವಿಗ್ರಹ 
32 ಅಡಿ ಎತ್ತರ (110 ಟನ್‌ ತೂಕ)ದ ವಿಗ್ರಹವನ್ನು 40 ಅಡಿ ಎತ್ತರದ (250 ಟನ್‌ ಭಾರ ಹೊರುವ ಸಾಮರ್ಥ್ಯ) ಪಿಲ್ಲರ್‌ಗಳ ಮೇಲೆ ಅಳವಡಿಸಲಾಗಿರುವ 8 ಅಡಿ ದಪ್ಪದ ಪದ್ಮ ಪೀಠದಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ.

ಮೇ 8ರಿಂದ-10ರವರೆಗೆ ಪ್ರತಿಷ್ಠಾಪನಾ ಕಾರ್ಯ: ಪಲಿಮಾರು ಶ್ರೀ
ಆಚಾರ್ಯ ಮಧ್ವರ ಏಕಶಿಲಾ ವಿಗ್ರಹದ ಪ್ರತಿಷ್ಠಾ ಧಾರ್ಮಿಕ ವಿಧಿ ವಿಧಾನ ಮತ್ತು ಅಭಿಷೆೇಕ ಹಾಗೂ ಇತರ ಕಾರ್ಯಗಳು ಮುಂದಿನ ಮೇ 8ರಿಂದ 10ರ ವರೆಗೆ ನಡೆಯಲಿದೆ. ಬಳಿಕ ಇಲ್ಲಿ ನಿತ್ಯ ಪೂಜೆ ಸಹಿತ ಭಕ್ತರಿಗೆ ಧ್ಯಾನಕ್ಕೆ ಅಗತ್ಯವಾಗಿರುವ ಆಧ್ಯಾತ್ಮಿಕ ವಾತಾವರಣ ಮೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ವಿಗ್ರಹ ಪ್ರತಿಷ್ಠಾಪನೆಗೆ ಸಂಕಲ್ಪಿಸಿರುವ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಕುಂಜಾರಿನಲ್ಲೇ ಸ್ಥಾಪನೆ ಯಾಕೆ ? 
ಕುಂಜಾರುಗಿರಿ – ಪಾಜಕ ಕ್ಷೇತ್ರ ಆಚಾರ್ಯರು ಅವತಾರ ಮಾಡಿದ ಕ್ಷೇತ್ರ. ಬಾಲ್ಯದಲ್ಲಿ ತಿರುಗಾಡಿದ ಕ್ಷೇತ್ರ, ದುರ್ಗಾ ಬೆಟ್ಟದಲ್ಲೇ ಧ್ಯಾನಸ್ಥರಾಗಿದ್ದು, ಅದೇ ಕಾರಣದಿಂದ ಇಲ್ಲಿ ಮಧ್ವಾಚಾರ್ಯರ ವಿಗ್ರಹ ಪ್ರತಿಷ್ಠಾಪಿಸಲು ಸಂಕಲ್ಪಿಸಲಾಗಿದೆ ಎಂದು ಪಲಿಮಾರು ಶ್ರೀ ತಿಳಿಸಿದ್ದಾರೆ. ಕಿರಿಯ ಶ್ರೀ ಈಶಪ್ರಿಯ ತೀರ್ಥರು ಉಪಸ್ಥಿತರಿದ್ದರು.

ವಿಶೇಷ ಶಿಲೆಯಲ್ಲಿ  ವಿಗ್ರಹ
ಬೆಂಗಳೂರಿನ ದೇವನಹಳ್ಳಿಯಿಂದ ತರಿಸಲಾಗಿದ್ದ ಕೋಯ್ನಾ ಗ್ರೇ ಗ್ರಾನೈಟ್‌ ಶಿಲೆಯನ್ನು ಕೆ.ಎಂ. ಶೇಷಗಿರಿ ಅವರ ವಿನ್ಯಾಸ, ಪರಿಕಲ್ಪನೆ ಮತ್ತು ಮೇಲ್ವಿಚಾರಣೆಯಲ್ಲಿ, ಅಂತಾರಾಷ್ಟ್ರೀಯ ಮಟ್ಟದ ಶಿಲ್ಪಿ ಅಶೋಕ್‌ ಗುಡಿಗಾರ್‌ ಬೆಂಗಳೂರು ಅವರ ಮಾರ್ಗದರ್ಶನದಲ್ಲಿ, ಶಿಲ್ಪಿ ಕುಮಾರ್‌ ಅವರ ನೇತೃತ್ವದ ಶಿಲ್ಪಿಗಳ ತಂಡ ಜಗದ್ಗುರು ಮಧ್ವಾಚಾರ್ಯರ ವಿಗ್ರಹವನ್ನಾಗಿ ಪರಿವರ್ತಿಸಿದ್ದರು. ಆರ್ಕಿಟೆಕ್ಟ್ ರಾಜೇಂದ್ರ ಮಯ್ಯ ಅವರ ಮಾರ್ಗದರ್ಶನದಲ್ಲಿ ಎಂಜಿನಿಯರ್‌ ಲಕ್ಷ್ಮೀನಾರಾಯಣ್‌ ನೇತೃತ್ವದಲ್ಲಿ ಕಾಂಕ್ರೀಟ್‌ ಪಿಲ್ಲರ್‌ ಅಳವಡಿಕೆ ಸಹಿತ ನೆಲ ಸಮತಟ್ಟು ಮಾಡುವ ಕೆಲಸ ನಿರ್ವಹಿಸಿದ್ದರು.

32 ಪ್ರತಿಮಾ ಲಕ್ಷಣ
32 ಪ್ರತಿಮಾ ಲಕ್ಷಣ ಹೊಂದಿರುವ ಶ್ರೀ ಮಧ್ವಾಚಾರ್ಯರ ಶಿಲಾ ಪ್ರತಿಮೆ ಜಗತ್ತಿನಲ್ಲೇ – ದಕ್ಷಿಣ ಭಾರತದಲ್ಲೇ ಪ್ರಥಮದ್ದಾಗಿದೆ. ತಂತ್ರಸಾರ ಗ್ರಂಥದಲ್ಲಿ ಆಚಾರ್ಯ ಮಧ್ವರೇ ತಿಳಿಸಿರುವಂತೆ ಪ್ರತಿಮೆ ನಿರ್ಮಿಸಲಾಗಿದೆ. 32 ಅಡಿ ಎತ್ತರದ ಪ್ರತಿಮೆಯನ್ನು 32 ತಿಂಗಳ ಕಾಲ ಕೆತ್ತಲಾಗಿದೆ. ಗ್ರಂಥಸ್ಥವಾಗಿ ಕೆತ್ತಿರುವ ವಿಗ್ರಹದ ಮೂಲಕ ಚೋಳ ಶೈಲಿ, ಹೊಯ್ಸಳ ಶೈಲಿಯೂ ಸೇರಿದಂತೆ ದಕ್ಷಿಣ ಭಾರತದ ಅನೇಕ ಶೈಲಿಗಳನ್ನು ಪರಿಚಯಿಸಲಾಗಿದೆ ಎಂದು ವಿನ್ಯಾಸ, ಪರಿಕಲ್ಪನೆ ಮತ್ತು ಮೇಲ್ವಿಚಾರಕರಾಗಿರುವ ಕೆ.ಎಂ. ಶೇಷಗಿರಿ ಅವರು ತಿಳಿಸಿದರು.

►Special Photo Gallery►ಕುಂಜಾರುಗಿರಿಯಲ್ಲಿ ಎದ್ದುನಿಂತ ಆಚಾರ್ಯ ಮಧ್ವರ ಶಿಲಾಪ್ರತಿಮೆ: http://bit.ly/2ocW1S5

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.