ಉಪಚುನಾವಣೆ ಜಯ: ಕಾಂಗ್ರೆಸ್ ವಿಜಯೋತ್ಸವ
Team Udayavani, Apr 14, 2017, 3:01 PM IST
ಉಡುಪಿ: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯ ವಿಜಯೋತ್ಸವವನ್ನು ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸರ್ವಿಸ್ ಬಸ್ ನಿಲ್ದಾಣದ ಗಾಂಧಿ ಪ್ರತಿಮೆ ಎದುರು ಪಟಾಕಿ ಸಿಡಿಸುವ ಮೂಲಕ ಆಚರಿಸಲಾಯಿತು.
ಬಿಜೆಪಿಯ ಅಪಪ್ರಚಾರದ ನಡುವೆಯೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಲು ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಕಾರ್ಯಕ್ರಮಗಳೇ ಕಾರಣ. ಬಿಜೆಪಿಯ ಸ್ಥಳೀಯ ಮಾಜಿ ಶಾಸಕರು ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಬೇಕಾದಷ್ಟು ಆಪಾದನೆಗಳನ್ನು ಮಾಡಿದರೂ ಜನ ಅದನ್ನು ನಂಬುವುದಿಲ್ಲ ಎಂಬುದಕ್ಕೆ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿ ಹೇಳಿದರು.
ಪಕ್ಷದ ನಾಯಕರಾದ ವೆರೋನಿಕಾ ಕರ್ನೇಲಿಯೋ, ಜ್ಯೋತಿ ಹೆಬ್ಟಾರ್, ಪ್ರಖ್ಯಾತ್ ಶೆಟ್ಟಿ, ಹರೀಶ್ ಕಿಣಿ, ಲಕ್ಷಿ¾àಕಾಂತ್ ಬೆಸ್ಕೂರ್, ರಮೇಶ್ ಕಾಂಚನ್, ಮೀನಾಕ್ಷಿ ಮಾಧವ ಬನ್ನಂಜೆ, ಸಂಧ್ಯಾ ತಿಲಕ್ರಾಜ್, ಶೋಭಾ ಪೂಜಾರಿ, ಸೆಲಿನ ಕರ್ಕಡ, ಗಣೇಶ್ ನೆರ್ಗಿ, ರಮೇಶ್ ಪೂಜಾರಿ, ನಾರಾಯಣ್ ಪಿ. ಕುಂದರ್, ಶೇಖರ್ ಜಿ. ಕೋಟ್ಯಾನ್, ಶಾಂತಾರಾಮ್ ಸಾಲ್ವಂಕರ್, ಸುಕೇಶ್ ಕುಂದರ್, ಪ್ರಶಾಂತ್ ಪೂಜಾರಿ, ಭಾಸ್ಕರ್ರಾವ್ ಕಿದಿಯೂರು ಉಪಸ್ಥಿತರಿದ್ದರು. ಕೆ. ಜನಾರ್ದನ್ ಭಂಡಾರ್ಕಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ