ಪಶ್ಚಿಮದಿಂದ ಪೂರ್ವ ದಿಕ್ಕಿಗೆ ಶ್ರೀಕೃಷ್ಣ ವಿಗ್ರಹ


Team Udayavani, May 4, 2017, 11:39 AM IST

030517uk12.jpg

ಉಡುಪಿ: ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಮೆರಿಕದ ನ್ಯೂಜೆರ್ಸಿಯ ಎಡಿಸನ್‌ನ (ಪುತ್ತಿಗೆ ಮಠದ ಶಾಖಾ ಮಠ) ಶ್ರೀಕೃಷ್ಣ ವೃಂದಾವನದಲ್ಲಿ ಪ್ರತಿಷ್ಠಾಪಿಸಲಾಗುವ ಸಾಲಿಗ್ರಾಮ ಶಿಲೆಯ ಕಡಗೋಲು ಕೃಷ್ಣ ಪ್ರತಿಮೆಯನ್ನು ಬುಧವಾರ ಉಡುಪಿಯಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.

ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ಶಾಸಕ ಕೆ. ರಘುಪತಿ ಭಟ್‌, ಬೆಳಪು ದೇವಿಪ್ರಸಾದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. 

ಉಡುಪಿ ಗೀತಾ ಮಂದಿರದಿಂದ ಶ್ರೀಕೃಷ್ಣ ಮಠಕ್ಕೆ ಮೆರವಣಿಗೆಯಲ್ಲಿ ವಿಗ್ರಹ ತಂದ ಬಳಿಕ ಮಧ್ವ ಸರೋವರದಲ್ಲಿ ಮುಳುಗಿಸಿ ಶ್ರೀಕೃಷ್ಣಮಠದ ಮುಖಮಂಟಪಕ್ಕೆ ತಂದಾಗ ಪರ್ಯಾಯ ಶ್ರೀ ಪೇಜಾವರ ಉಭಯ ಶ್ರೀಪಾದರು ಮಂಗಳಾರತಿ ಬೆಳಗಿದರು.

ಪಶ್ಚಿಮ ಕರಾವಳಿಯಿಂದ ಅಮೆರಿಕದ ಪೂರ್ವ ಕರಾವಳಿಯಲ್ಲಿರುವ ನ್ಯೂಜೆರ್ಸಿಗೆ ಕೃಷ್ಣನ ವಿಗ್ರಹ ಹೊರಟಿದೆ. ಎಲ್ಲೆಡೆ ಕೃಷ್ಣಪ್ರಜ್ಞೆ ಜಾಗೃತವಾಗಲಿ ಎಂದು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹಾರೈಸಿದರು.

ಇದೊಂದು ಐತಿಹಾಸಿಕ ಕ್ಷಣ ಎಂದು ಶ್ರೀಪುತ್ತಿಗೆ ಶ್ರೀಪಾದರು ನುಡಿದರು. ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶುಭಕೋರಿದರು. ಬಳಿಕ ರಥಬೀದಿಯಲ್ಲಿ ನವರತ್ನ ರಥದಲ್ಲಿ ವಿಗ್ರಹದ ಮೆರವಣಿಗೆ ನಡೆದು ಪುತ್ತಿಗೆ ಮಠಕ್ಕೆ ತಂದಿರಿಸಲಾಯಿತು.

ಒಬ್ಬ ಕುಶಲಕರ್ಮಿಯ ಆರು ತಿಂಗಳ ಕೆಲಸ: ಕೃಷ್ಣ ವಿಗ್ರಹ ಗುರುವಾರ ನ್ಯೂಜೆರ್ಸಿಗೆ ತೆರಳಲಿದ್ದು, ಜೂ. 8ರಂದು ವಿಗ್ರಹದ ಪ್ರತಿಷ್ಠೆ ನಡೆಯಲಿದೆ. ಸಾಲಿಗ್ರಾಮ ಶಿಲೆ ನೇಪಾಳದ ಗಂಡಕಿ ನದಿಯಲ್ಲಿ ಸಿಗುತ್ತದೆ. ಈ ಶಿಲೆಯಿಂದ 19 ಇಂಚು (ಒಂದೂವರೆ ಅಡಿ) ಎತ್ತರದ ವಿಗ್ರಹವನ್ನು ನಿರ್ಮಿಸಿದವರು ಶಿರಸಿಯ ಹರೀಶ ಆಚಾರ್ಯರು. ಇವರೊಬ್ಬರೇ ಸುಮಾರು ಆರು ತಿಂಗಳು ನೇಪಾಲದಲ್ಲಿ ನಿಂತು ವಿಗ್ರಹ ನಿರ್ಮಿಸಿದ್ದರು. ಒಬ್ಬರೇ ನಿರ್ಮಿಸಿದ ಕಾರಣವೆಂದರೆ ಶಿಲೆಯ ಕುಸುರಿ ಕೆಲಸವನ್ನು ಒಬ್ಬರೇ ಮಾಡಿದರೆ ಹೆಚ್ಚು ಅನುಕೂಲ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.