“ಕಲಶಾಭಿಷೇಕದಿಂದ ವರುಣಾಭಿಷೇಕ!’


Team Udayavani, May 16, 2017, 4:55 PM IST

kashabisheka.jpg

ಉಡುಪಿ: ಭಗವಂತ ಶ್ರೀಕೃಷ್ಣನಿಗೆ ಬ್ರಹ್ಮಕಲಶಾಭಿಷೇಕ ನಡೆಸಿದರೆ ಭಗವಂತ ವರುಣಾಭಿಷೇಕ ನಡೆಸಿ ಮಳೆ, ಬೆಳೆ ಬರುವಂತೆ ಮಾಡುತ್ತಾನೆ ಎಂದು ವಿದ್ವಾಂಸ ಹಿರಣ್ಯ ವೆಂಕಟೇಶ ಭಟ್‌ ಹೇಳಿದರು.

ಶ್ರೀಕೃಷ್ಣಮಠದ ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಬ್ರಹ್ಮಕಲಶಾಭಿಷೇಕ ಎಂಬ ಹೆಸರು ಇದ್ದರೆ, ಇತರೆಡೆ ಕುಂಭಾಭಿಷೇಕ ಎಂಬ ಹೆಸರು ಇದೆ. ಬ್ರಹ್ಮ ಶಬ್ದದ ಹಿಂದೆ ಸಾಕಷ್ಟು ಅರ್ಥವಿಸ್ತಾರಗಳಿರುವುದರಿಂದ ಈ ಹೆಸರೇ ಸಮುಚಿತ ಎಂದರು. 

ಪಾಂಚರಾತ್ರ ಆಗಮದಿಂದ ಆಗಮಶಾಸ್ತ್ರಗಳು ವಿಸ್ತಾರ ವಾಗುತ್ತಾ ಬಂದಿವೆ ಎಂದು ಶ್ರೀಮದ್ಭಾಗವತ ಪುರಾಣದಲ್ಲಿದೆ. ಇದು ಆಚಾರ್ಯತ್ರಯರಿಗೂ ಸಮ್ಮತವಾಗಿದೆ. ಧರ್ಮ ಶಬ್ದವನ್ನು ವಿಷ್ಣುಸಹಸ್ರನಾಮದಲ್ಲಿ ಭಗವಂತ ಎಂದು ಕರೆಯಲಾಗಿದೆ. ದೇಹಧರ್ಮ ಮತ್ತು ಜೀವಧರ್ಮ ಎಂಬ ಪ್ರಕಾರವೂ ಇದೆ. ಒಂದು ಶರೀರದಿಂದ ತನ್ನ ಉದ್ದೇಶ ಈಡೇರಲು ಸಾಧ್ಯವಿಲ್ಲವೆ ಎನ್ನುವಾಗ ಜೀವ ಅದನ್ನು ಬಿಟ್ಟು ಇನ್ನೊಂದು ಶರೀರ ಪ್ರವೇಶಿಸುತ್ತದೆ ಎಂದು ಗೀತೆಯಲ್ಲಿ ವರ್ಣಿಸಲಾಗಿದೆ. ಆದ್ದರಿಂದ ದೇಹಕ್ಕೆ ಅಲಂಕಾರ ಮಾಡುವುದೇ ಮೊದಲಾದ ದೇಹಧರ್ಮ ಭಯಂಕರವೂ, ಜೀವದ ವಿಕಾಸಕ್ಕಾಗಿ ಮಾಡುವ ಜೀವಧರ್ಮ ಶ್ರೇಯಸ್ಕರವೂ ಆಗಿದೆ ಎಂದು ಭಟ್‌ ವಿಶ್ಲೇಷಿಸಿದರು. 

ಶಾಸಕ ವಿನಯಕುಮಾರ ಸೊರಕೆ ಅವರು ಪೇಜಾವರ ಶ್ರೀ ನಡೆಸಿದ ಶ್ರೀಕೃಷ್ಣಮಠದ ನವೀಕರಣ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು. ಶ್ರೀಸೋದೆ ಶ್ರೀ ಅಧ್ಯಕ್ಷತೆ ವಹಿಸಿದ್ದರು. ಪರ್ಯಾಯ ಶ್ರೀ ಪೇಜಾವರ ಉಭಯ ಶ್ರೀಗಳು, ಪ್ರಯಾಗ ಶ್ರೀ ಆಶೀರ್ವಚನ ನೀಡಿದರು. ಸಿ.ಎಚ್‌. ಬದರೀನಾಥಾಚಾರ್ಯ ನಿರ್ವಹಿಸಿದರು. 

ಕಲಶ, ಹೊರೆಕಾಣಿಕೆ ಮೆರವಣಿಗೆ
ಮಂಗಳವಾರ ಅಪರಾಹ್ನ ಬ್ರಹ್ಮಕಲಶೋತ್ಸವದ ಕಲಶ, ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಬಳಿಕ ನಡೆಯುವ ಸಭೆಯಲ್ಲಿ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ, ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ, ಸಚಿವ ಯು.ಟಿ. ಖಾದರ್‌ ಪಾಲ್ಗೊಳ್ಳುವರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.