ಉಡುಪಿ: ಬಜೆ ಜಲಾಶಯದಲ್ಲಿ ನೀರಿನ ಕೊರತೆ: 4 ದಿನಕ್ಕೊಮ್ಮೆ ನೀರು


Team Udayavani, May 24, 2017, 3:36 PM IST

Baje.jpg

ಉಡುಪಿ: ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಬಜೆ ಜಲಾಶಯದಲ್ಲಿ ನೀರಿನ ಸಂಗ್ರಹ ಬರಿದಾಗಿದ್ದು, ಅಣೆಕಟ್ಟು ಪ್ರದೇಶದ ಅಲ್ಲಲ್ಲಿ ಹೊಂಡದಲ್ಲಿರುವ ನೀರು ಉಡುಪಿ ನಗರಕ್ಕೆ ಕೇವಲ 7 ದಿನಗಳಿಗೆ ಮಾತ್ರ ಇರುವುದರಿಂದ ಮಳೆಯ ಆಗಮನ ಕೂಡ ತಡವಾಗಿರುವ ಕಾರಣ ನೀರಿನ ಪೂರೈಕೆಯಲ್ಲಿ ಇನ್ನಷ್ಟು ಕಡಿತ ಅನಿವಾರ್ಯವಾಗಿದ್ದು, 35 ವಾರ್ಡ್‌ಗಳನ್ನು 2 ವಿಭಾಗಗಳನ್ನಾಗಿ ವಿಂಗಡಿಸಿ 4 ದಿನಕ್ಕೊಮ್ಮೆ ಸಂಬಂಧಪಟ್ಟ ವಾರ್ಡ್‌ಗಳಿಗೆ ನೀರು ಪೂರೈಸಲಾಗುವುದು.

ಎಪ್ರಿಲ್‌ 29ರಿಂದ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಬರಿದಾಗಿದ್ದು, ಶೀರೂರು, ಮಾಣೈ ಮಠದ ಗುಂಡಿ, ಭಂಡಾರಿಬೆಟ್ಟು, ಪುತ್ತಿಗೆ ಮಠದ ಪ್ರದೇಶದಲ್ಲಿ ಸಂಗ್ರಹವಿರುವ ನೀರನ್ನು ಬೋಟ್‌ ಪಂಪ್‌ಗ್ಳ ಮೂಲಕ ಪಂಪಿಂಗ್‌ ಮಾಡಿ ಜಲಾಶಯಕ್ಕೆ ನೀರು ಹಾಯಿಸಿ ಶುದ್ಧೀಕರಣಗೊಳಿಸಿ ದಿನ ಬಿಟ್ಟು ದಿನ ಮೇ 23ರ ತನಕ ನೀಡಲಾಗುತ್ತಿದೆ. ಆದರೆ ಈಗ ನೀರಿನ ಆ ಹೊಂಡಗಳಲ್ಲಿಯೂ ನೀರಿನ ಪ್ರಮಾಣ ಕಡಿಮೆ ಇರುವುದರಿಂದ 4 ದಿನಕ್ಕೊಮ್ಮೆ ನೀರು ಪೂರೈಕೆ ಮಾಡುವುದು ಅನಿವಾರ್ಯವಾಗಿದೆ. 

ಮಳೆ ಬಂದರೆ ಸಮಸ್ಯೆಯಿಲ್ಲ
ಮಳೆಗಾಲ ಪ್ರಾರಂಭವಾದರೆ ಕುಡಿಯುವ ನೀರನ್ನು ಹಿಂದಿನಂತೆ ಪ್ರತಿದಿನ ಪೂರೈಸಲಾಗುವುದು. ನೀರು ಪೂರೈಸಲು ನಿಗದಿಪಡಿಸಿದ ದಿನ ಸಂಬಂಧಪಟ್ಟ ವಾರ್ಡಿನಲ್ಲಿ ನೀರು ಬಾರದ ಪ್ರದೇಶದಲ್ಲಿ ಆ ದಿನ ಮಾತ್ರ ಆ ಭಾಗದಲ್ಲಿ ಟ್ಯಾಂಕರ್‌ ನೀರನ್ನು ಪೂರೈಸಲಾಗುವುದು. ಕುಡಿಯುವ ನೀರಿಗಾಗಿ ಬಹುಮಹಡಿ ಕಟ್ಟಡಗಳನ್ನು ಹೊರತುಪಡಿಸಿ ಗೃಹಬಳಕೆಯವರು ಮಾತ್ರ ದೂರವಾಣಿ ಸಂಖ್ಯೆ 8496989248, 8496989166, 8496989184, 8496989122ನ್ನು ಅಥವಾ ಸಹಾಯಕ ಕಾರ್ಯಪಾಲಕ ಅಭಿಯಂತರ ಗಣೇಶ್‌ (8496989759), ಪರಿಸರ ಅಭಿಯಂತರ ಬಿ. ರಾಘವೇಂದ್ರ (9448507244) ಅವರನ್ನು ಸಂಪರ್ಕಿಸಬಹುದು. 

ಬಜೆ ಜಲಾಶಯದಲ್ಲಿ ನೀರಿನ ಸಂಗ್ರಹ ಬರಿದಾಗಿರುವುದರಿಂದ ನಾಗರಿಕರು ನೀರನ್ನು ಮಿತಧಿವಾಗಿ ಬಳಸಿ ಸಹಕರಿಸಬೇಕಾಗಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಹಾಗೂ ಪೌರಾಯುಕ್ತ ಡಿ. ಮಂಜುಧಿನಾಥಯ್ಯ ಪ್ರಕಟನೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ವಾರ್ಡ್‌ವಾರು ವಿಂಗಡಣೆ
ಮೇ 24, ಮೇ 28, ಜೂ. 1 ಹಾಗೂ ಜೂ. 5ರಂದು ಕೊಳ, ವಡಭಾಂಡೇಶ್ವರ, ಮಲ್ಪೆ ಸೆಂಟ್ರಲ್‌, ಕೊಡವೂರು, ಕಲ್ಮಾಡಿ, ಕಸ್ತೂರ್ಬಾನಗರ, ಸಗ್ರಿ, ಮೂಡುಪೆರಂಪಳ್ಳಿ, ಇಂದಿರಾನಗರ, ಬಡಗುಧಿಬೆಟ್ಟು, ಇಂದ್ರಾಳಿ, ಶಿರಿಬೀಡು, ಬನ್ನಂಜೆ, ಅಂಬಲಪಾಡಿ, ಅಜ್ಜರಕಾಡು, ಕಿನ್ನಿಮೂಲ್ಕಿ, ಬೈಲೂರು, ಒಳಕಾಡು, ತೆಂಕಪೇಟೆ, ಕುಂಜಿಬೆಟ್ಟು ವಾರ್ಡುಗಳಿಗೆ ಮೊದಲ ಹಂತದಲ್ಲಿ ನೀರು ಪೂರೈಸಲಾಗುವುದು. 

ಮೇ 24ರಂದು ಸಂಜೆ 4 ಗಂಟೆ ಅನಂತರ ನೀರು ಪೂರೈಸಲಿದ್ದು, ಬಾಕಿ ದಿನಗಳಲ್ಲಿ ನೀರಿನ ಸಂಗ್ರಹ ನೋಡಿ ಸಮಯ ನಿರ್ಧರಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಹಂತದಲ್ಲಿ ಮೇ 27, ಮೇ 31, ಜೂ. 4 ಹಾಗೂ ಜೂ. 8ರಂದು ಸರಳೇಬೆಟ್ಟು, ಈಶ್ವರನಗರ, ಮಣಿಪಾಲ, ಕಕ್ಕುಂಜೆ, ಕರಂಬಳ್ಳಿ, ಮೂಡುಬೆಟ್ಟು, ಕೊಡಂಕೂರು, ನಿಟ್ಟೂರು, ಸುಬ್ರಹ್ಮಣ್ಯ ನಗರ, ಗೋಪಾಲಪುರ, ಕಡಿಯಾಳಿ, ಗುಂಡಿಬೈಲು, ಸೆಟ್ಟಿಬೆಟ್ಟು, ಪರ್ಕಳ ವಾರ್ಡುಗಳಿಗೆ ನೀರು ಪೂರೈಕೆಯಾಗಲಿದೆ. 

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.