ಹೈಫಾ ಯುದ್ಧದ ಶತಮಾನೋತ್ಸವ ಸಂಭ್ರಮಾಚರಣೆ
Team Udayavani, Sep 24, 2018, 6:00 AM IST
ಮೈಸೂರು: ಐತಿಹಾಸಿಕ “ಹೈಫಾ’ ಯುದ್ಧದ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಇದೀಗ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೈಫಾ ಯುದ್ಧವನ್ನು ನೆನಪಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯಬೇಕಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.
ಹೈಫಾ ಶತಮಾನೋತ್ಸವ ಆಚರಣೆ ಸಮಿತಿ ವತಿಯಿಂದ ನಗರದ ರಾಜೇಂದ್ರ ಕಲಾಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಐತಿಹಾಸಿಕ ಹೈಫಾ ಯುದ್ಧದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹೈಫಾ ಯುದ್ಧದ ಸ್ಮರಣಾರ್ಥ ಅನೇಕ ಕಾರ್ಯಕ್ರಮಗಳನ್ನು ನಡೆಸಲು ಶತಮಾನೋತ್ಸವ ಆಚರಣಾ ಸಮಿತಿ ಮುಂದಾಗಬೇಕಿದೆ. ಇದಕ್ಕಾಗಿ ಮೈಸೂರು ರಾಜವಂಶದ ವತಿಯಿಂದ ಎಲ್ಲ ರೀತಿಯ ಸಹಕಾರ
ನೀಡಲಾಗುವುದು ಎಂದರು.
ಹೈಫಾ ಯುದ್ಧದ ಸ್ಮರಣಾರ್ಥ ಇತ್ತೀಚೆಗೆ ಇಂಗ್ಲೆಂಡಿನ ಲಾರ್ಡ್ಸ್ ಹಾಗೂ ದೆಹಲಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಈ ಕಾರ್ಯಕ್ರಮಗಳಲ್ಲಿ ಹೈಫಾ ಯುದಟಛಿದಲ್ಲಿ ಪಾಲ್ಗೊಂಡಿದ್ದ ಮೈಸೂರಿನ ಸೈನಿಕರ ಧೈರ್ಯ, ಶೌರ್ಯಗಳನ್ನು ಸ್ಮರಣೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಯುದ್ಧದ ಶತಮಾನೋತ್ಸವ ಆಚರಣೆಗಿಂತಲೂ ಮುಖ್ಯವಾಗಿ ಯುದಟಛಿದಲ್ಲಿ ಭಾಗವಹಿಸಿದ್ದ ನಮ್ಮ ಸೈನಿಕರ ಶೌರ್ಯವನ್ನು ಸ್ಮರಿಸಬೇಕಾದ ಅಗತ್ಯವಿದೆ ಎಂದರು.
ಸಂಸದ ಪ್ರತಾಪಸಿಂಹ ಮಾತನಾಡಿದರು. ಇದೇ ಸಂದರ್ಭದಲ್ಲಿ ಐತಿಹಾಸಿಕ ಹೈಫಾ ಯುದ್ಧದಲ್ಲಿ ಭಾಗವಹಿಸಿದ್ದ ಲಿಂಗರಾಜ ಅರಸ್ ಅವರ ಮೊಮ್ಮಗ ಟಿ.ಬಿ.ನಾಗಪ್ರಸನ್ನರಾಜೇ ಅರಸ್, ಕರ್ನಲ್ ದೇವರಾಜೇ ಅರಸ್ ಅವರ ಮೊಮ್ಮಗಳು ಚಿನ್ನಮಾಂಭ ಅರಸ್,ಕರ್ನಲ್ ಕೃಷ್ಣೇ ಅರಸ್ ಅವರ ಮೊಮ್ಮಕ್ಕಳಾದ ಜಯಂತಿ ಅರಸ್, ಮಂಜುಳಾ ಅರಸ್, ಲೆμrನೆಂಟ್ ಕರ್ನಲ್ ಅಬ್ದುಲ್ ಗಫರ್ ಅವರ ಮೊಮ್ಮಗ ಇμ¤ಯಾಜ್ ಅರಸ್ ಹಾಗೂ ಚಾಮರಾಜ ಅರಸ್ ಅವರ ಮೊಮ್ಮಗಳು ಯಶೋಮತಿ ಅರಸ್ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
MUST WATCH
ಹೊಸ ಸೇರ್ಪಡೆ
Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್
I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್
D. K. Shivakumar-ಎಚ್ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್.ಅಶೋಕ್
JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ
Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ