ನರ್ಮ್ ಲೈಸನ್ಸ್‌ ರದ್ದತಿಗೆ ಜಿಲ್ಲಾಡಳಿತ ಹೊಣೆ: ರಾಜವರ್ಮ ಬಲ್ಲಾಳ್‌


Team Udayavani, Jul 11, 2017, 3:45 AM IST

bus-city-udupi.jpg

ಉಡುಪಿ: ಜಿಲ್ಲೆಯಲ್ಲಿ ನರ್ಮ್ ಬಸ್‌ಗಳ ಮಂಜೂರಾತಿ ಉಸ್ತುವಾರಿ ಸಚಿವರ ಒತ್ತಡದ ಮೇಲೆ ಆಗಿದೆ ವಿನಾ ಕಾನೂನು ರೀತಿಯಲ್ಲಿ ಆಗಿಲ್ಲ. ಆದುದರಿಂದ ಈ ಮಂಜೂರಾತಿಯಲ್ಲಿ ಆಗಿರುವ ಲೋಪದಿಂದಾಗಿಯೇ ಪರವಾನಿಗೆಗಳನ್ನು ಉಚ್ಚ ನ್ಯಾಯಾಲಯ ರದ್ದು ಮಾಡಿದೆ ಎಂದು ರಾಜ್ಯ ಬಸ್‌ ಮಾಲಕರ ಒಕ್ಕೂಟದ ಅಧ್ಯಕ್ಷ ರಾಜವರ್ಮ ಬಲ್ಲಾಳ್‌ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ನರ್ಮ್ ಬಸ್‌ಗಳಿಗೆ ಡಿಪಿಆರ್‌ ಮಾಡುವಾಗ ತೋರಿಸಿರುವ ಮಾರ್ಗ ಮತ್ತು ಈಗ ಬಸ್‌ ಹಾಕಿರುವ ಮಾರ್ಗ ಗಳಿಗೆ ಒಂದಕ್ಕೊಂದು ತಾಳೆ ಆಗುತ್ತಿಲ್ಲ. ಜಿಲ್ಲಾಡಳಿತ ಕಾನೂನು ಪ್ರಕಾರ ಪರವಾನಿಗೆ ನೀಡಲು ಹೊರ ಟರೆ ಸಚಿವರ ಒತ್ತಡದಿಂದ ಕಾನೂನು ಮುರಿದು ಪರವಾನಿಗೆ ನೀಡಿರುವುದು ನರ್ಮ್ ಬಸ್‌ಗಳು ನಿಲ್ಲಲು ಕಾರಣ. ಎಲ್ಲದಕ್ಕೂ ಕಾನೂನು ಇದೆ. ಕಾನೂನಿಗಿಂತ ಯಾರೂ ಮೇಲಲ್ಲ ಎಂದು ಬಲ್ಲಾಳ್‌ ಹೇಳಿದ್ದಾರೆ.

ಖಾಸಗಿ ಮೇಲೆ ಕೋಪವೇಕೋ?
ಹಿರಿಯ ಕಾಂಗ್ರೆಸ್‌ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌, ಅಂದಿನ ಸಚಿವರಾದ ಅಭಯಚಂದ್ರ ಜೈನ್‌ ಹಾಗೂ ವಿನಯ ಕುಮಾರ ಸೊರಕೆಯವರಲ್ಲಿ ನಮ್ಮ ಸಮಸ್ಯೆ ಮತ್ತು ಗಂಭೀರತೆಯನ್ನು ಹೇಳಿದಾಗ ಸೂಕ್ತ ಪರಿಹಾರ ಹಾಗೂ ಸೌಹಾರ್ದ ಸ್ಪರ್ಧೆಗೆ ಅವಕಾಶ ಮಾಡಿಕೊಡುವ ಬಗ್ಗೆ ಭರವಸೆ ನೀಡಿದ್ದರು. ಈಗಿನ ಉಸ್ತುವಾರಿ ಸಚಿವರಲ್ಲಿ ಕೂಡ ನಮ್ಮ ಸಂಘದ ನಿಯೋಗ 8 ಬಾರಿ ಹೋಗಿ ಮನವರಿಕೆ ಮಾಡಿದ್ದರೂ ಯಾವುದೇ ಪರಿಹಾರ ಸಿಕ್ಕಿಲ್ಲ. ಒಂದು ಕಡೆ ನಮಗೆ ಭರವಸೆ ನೀಡಿ ಕೆಎಸ್ಸಾರ್ಟಿಸಿಯವರಿಗೆ ಹೊಸ ಪರವಾನಿಗೆಗೆ ಅರ್ಜಿ ಹಾಕಲು ಹೇಳುತ್ತಾರೆ. ಜಿಲ್ಲಾಧಿಕಾರಿಗಳಿಗೆ ಪರವಾ ನಿಗೆ ಮಂಜೂರು ಮಾಡಲು ಒತ್ತಡ ಹೇರುತ್ತಾರೆ. ಇದರ ಹಿಂದಿ ರುವ ಕಾರಣ ಏನು? ಕೋರ್ಟ್‌ಗೆ ಹೋಗಬಾರದು, ನಾನು ಎಲ್ಲವನ್ನೂ ಸರಿ ಮಾಡಿಕೊಡುತ್ತೇನೆ ಎಂದು ಉಸ್ತು ವಾರಿ ಸಚಿವರು ಹೇಳುತ್ತಾರೆ ವಿನಾ ಪರಿಹಾರ ಕೊಟ್ಟಿಲ್ಲ. ಆದ ಕಾರಣ ಕೋರ್ಟ್‌ಗೆ ಹೋಗಬೇಕಾಯಿತು. ಜಿಲ್ಲೆಯಲ್ಲಿ ಖಾಸಗಿ ಬಸ್‌ ಓಡಿಸಲೇ ಬಾರ ದೆಂಬ ಉದ್ದೇಶ ಯಾಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಕಳೆದ ನೂರು ವರ್ಷಗಳಿಂದ ಸಾರಿಗೆ ಸೇವೆ ನೀಡುತ್ತಿರುವ ಖಾಸಗಿ ಸಾರಿಗೆಯ ಹಿಂದೆ 6ರಿಂದ 7 ಸಾವಿರ ಕುಟುಂಬಗಳಿವೆ. ಒಂದೊಂದು ಬಸ್ಸನ್ನೇನಂಬಿರುವ ಅದೆಷ್ಟೋ ಕುಟುಂಬಗಳಿವೆ. ಅವರ ಪರಿಸ್ಥಿತಿ ಏನು? ಖಾಸಗಿ ಬಸ್‌ಗಳನ್ನು ತಪಾಸಣೆ ಮಾಡಲು ಆದೇಶ ನೀಡಿ ರುವ ವಿಚಾರ ಸ್ವಾಗತ. ಆದರೆ ಸಚಿವರು ಒಬ್ಬೊ
ಬ್ಬರಿಗೆ ಒಂದೊಂದು ಕಾನೂನು ಮಾಡದೇ ಎಲ್ಲರಿಗೂ ಒಂದೇ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ಸಚಿವರಿಗೆ ಖಾಸಗಿ ಬಸ್‌ ಮಾಲಕರ ಪ್ರಶ್ನೆ
– ಉಚ್ಚ ನ್ಯಾಯಾಲಯ ನರ್ಮ್ ಬಸ್‌ಗಳ ಪರವಾನಿಗೆ ರದ್ದು ಪಡಿಸಿದರೂಇಂದಿಗೂ ಬಸ್‌ಗಳು ನಿರಾತಂಕವಾಗಿ ಓಡುತ್ತಿವೆ. ಇದು ಕಾನೂನಿನ ಉಲ್ಲಂಘನೆಯಲ್ಲವೇ? ಸಾರಿಗೆ ಅಧಿಕಾರಿಗಳು ನಿಮಗೆ ಹೆದರಿ ಸುಮ್ಮನಿರುವುದು ಯಾಕೆ? 

– ಕೆಎಸ್ಸಾರ್ಟಿಸಿಯವರು ನ್ಯಾಯಾಲಯದ ಆದೇಶ ಸಿಕ್ಕಿಲ್ಲ ಎನ್ನುತ್ತಾರೆ. ಆದರೆ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಆದೇಶ ಓದುವಾಗ ಅವರ ವಕೀಲರು ಮತ್ತು ಅಧಿಕಾರಿಗಳು ಹಾಜರಿದ್ದೂ ಕೂಡ ಆದೇಶದ ಬಗ್ಗೆ ಗೊತ್ತಿಲ್ಲ ಎಂದರೆ ಸಚಿವರ ಕುಮ್ಮಕ್ಕು ಕಾರಣವಲ್ಲವೇ? ಆದೇಶ ಉಲ್ಲಂಘನೆಗೆ ಮಾಡಲು ಹೇಳುತ್ತಿರುವುದು ಎಷ್ಟರ ಮಟ್ಟಿಗೆ ಸರಿ?

– ಕೇಂದ್ರ ಸರಕಾರ ನರ್ಮ್ ಬಸ್‌ಗಳಿಗೆ ಹಾಕಿರುವ ನಿಬಂಧನೆಗಳನ್ನು ಉಲ್ಲಂ ಸಿ ಜಿಲ್ಲಾಧಿಕಾರಿಗಳಿಗೆ ಒತ್ತಡದ ಪರವಾನಿಗೆ ಪಡೆದು ಖಾಸಗಿ ಬಸ್‌ಗಳನ್ನು ಮುಗಿಸುವ ಹುನ್ನಾರ ಯಾಕೆ? ನಗರ ಪರಿಮಿತಿ ಬಿಟ್ಟು ಉಡುಪಿಯಿಂದ ಶಿವಮೊಗ್ಗ, ಕಾರ್ಕಳ, ಭಟ್ಕಳ, ಕುಂದಾಪುರ, ಕೆಳಸುಂಕ, ಕೊಳಲಗಿರಿ ಪೆರ್ಡೂರು, ಹೆಬ್ರಿಗೆ ಬಸ್‌ ಹಾಕುವುದು ನಿಬಂಧನೆ ಉಲ್ಲಂಘನೆಯಲ್ಲವೆ?

– ಒಂದೇ ಸಮಯದಲ್ಲಿ ಬಸ್‌ ಓಡಿಸಿ ಅಪಘಾತ ಸಂಭವಿಸಿದರೆ ಯಾರು ಜವಾಬ್ದಾರಿ?

– ಪರವಾನಿಗೆ ಪಡೆದ ಬಸ್‌ಗಳು ಕೂಡ ಸಮಯಕ್ಕೆ ಸರಿಯಾಗಿ ಓಡುತ್ತಿಲ್ಲ. ಪರವಾನಿಗೆ ಮಾರ್ಗದಂತೆ ಓಡುತ್ತಿಲ್ಲ. ಇದರ ಬಗ್ಗೆ ಆರ್‌ಟಿಒ ಅಧಿಕಾರಿಗಳಿಗೆ ದೂರು ನೀಡಿದರೆ ಯಾವುದೇ ಕಾನೂನು ಕ್ರಮ ಇಲ್ಲ. ಕೂಡಲೇ ಉಸ್ತುವಾರಿ ಸಚಿವರ ಫೋನ್‌ ಬಂದು ವಿಷಯ ಅಲ್ಲೇಧೂಳು ತಿನ್ನುತ್ತದೆ. 

– ಸಚಿವರ ಧೋರಣೆಯಿಂದ ಖಾಸಗಿ ಸಾರಿಗೆ ವಲಯ ಎಷ್ಟು ದಿನ ನಡೆಯಬಹುದು?

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.