ವೀರಶೈವ, ಲಿಂಗಾಯತ ಹಿಂದೂ ಧರ್ಮದ ಅಂಗ: ಪೇಜಾವರ ಶ್ರೀ


Team Udayavani, Jul 25, 2017, 11:15 AM IST

Pejawara-Swamiji-650.jpg

ಉಡುಪಿ: ಹಿಂದೂ ದೇವತೆಗಳನ್ನು ಒಪ್ಪಿ ಆರಾಧಿಸುವವರು ಹಿಂದೂಗಳೇ ಆಗಿದ್ದಾರೆ. ಆದ್ದರಿಂದ ಲಿಂಗಾಯತರು ತಾವು ಹಿಂದೂ ಧರ್ಮದ ಭಾಗವಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ವೀರಶೈವ, ಲಿಂಗಾಯತ ಸಮಾಜದ ಹೊರಗಿನವನಾದರೂ ಈ ಸಮಾಜದ ಅನೇಕ ಮಠಾಧೀಶರೊಂದಿಗೆ ಆತ್ಮೀಯ ಒಡನಾಟವಿದ್ದ ಕಾರಣ ಇದನ್ನು ಹೇಳುತ್ತಿದ್ದೇನೆ. ಯಾರೂ ವಿಘಟನೆಗೆ ಅವಕಾಶ ಕೊಡದೆ ಸಂಘಟಿತರಾಗಬೇಕು ಎಂದರು.

ಶಿವ ಹಿಂದೂ ಧರ್ಮದ ದೇವತೆ ಹೌದೋ ಅಲ್ಲವೋ? ವೀರಶೈವರೂ, ಲಿಂಗಾಯತರೂ, ಬಸವಣ್ಣನವರೂ ಶಿವ ಪಾರಮ್ಯವನ್ನು ಒಪ್ಪಿದವರು. ಲಿಂಗಾಯತ ಧರ್ಮವು ವರ್ಣಾಶ್ರಮ ಮತ್ತು ಜಾತಿ ವ್ಯವಸ್ಥೆಯನ್ನು ಒಪ್ಪದಿರಬಹುದು. ಈ ಕಾರಣಕ್ಕಾಗಿಯೇ ಹಿಂದೂ ಧರ್ಮದ ಭಾಗವಲ್ಲ ಎಂದು ಹೇಳುವುದು ಸರಿಯಾಗದು. ಜಾತಿ ವ್ಯವಸ್ಥೆಯನ್ನು ಒಪ್ಪದ ರಾಮಕೃಷ್ಣ ಆಶ್ರಮ, ಆರ್ಯ ಸಮಾಜ, ಸ್ವಾಮಿ ನಾರಾಯಣ ಪಂಥ, ಚೈತನ್ಯ ಪಂಥಗಳು ಹಿಂದೂ ಧರ್ಮದ ಭಾಗವೇ ಆಗಿಲ್ಲವೆ? ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೊಡ್ಡ ಸಂಖ್ಯೆಯಲ್ಲಿ ಶಿವನೇ ಪರದೈವವೆಂದು ನಂಬುವ ಹಿಂದೂಗಳಿರುವಾಗ ಶಿವಭಕ್ತರಾದ ಲಿಂಗಾಯತರು ಮಾತ್ರ ಹಿಂದೂಗಳಲ್ಲ ಎಂದು ಹೇಳುವುದು ಹೇಗೆ? ಶಿವಭಕ್ತರು, ವಿಷ್ಣು ಭಕ್ತರು ಹಿಂದೂಗಳಲ್ಲವಾದರೆ ಹಿಂದೂಗಳು ಯಾರು? ಆದ್ದರಿಂದ ಜಾತಿ ವ್ಯವಸ್ಥೆ ಒಪ್ಪಲಿ, ಒಪ್ಪದೆ ಇರಲಿ ಶಿವಭಕ್ತರೆಲ್ಲ ಹಿಂದೂಗಳೇ ಎಂದರು.

ಹಿಂದಿನ ಅನುಭವ…
ಹಿಂದೆ ಅಲ್ಪಸಂಖ್ಯಾಕರೆಂದು ಘೋಷಿಸಿಕೊಳ್ಳಲು ರಾಮ ಕೃಷ್ಣಾಶ್ರಮದವರು ಪ್ರಯತ್ನಿಸಿದಾಗ ಅದನ್ನು ಸರ್ವೋಚ್ಚ ನ್ಯಾಯಾಲಯ ಒಪ್ಪಲಿಲ್ಲ. ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಇಂತಹ ಪ್ರಯತ್ನ ನಡೆದಿದೆ ಎಂದು ಅವರಲ್ಲಿಯೇ ಬಹಿರಂಗ ಹೇಳಿಕೆ ನೀಡಿದವರೂ ಇದ್ದಾರೆ ಎಂದರು.

ಸ್ವಲ್ಪ ವ್ಯತ್ಯಾಸ ಇದ್ದದ್ದೇ…
ವೀರಶೈವ ಮತ್ತು ಲಿಂಗಾಯತ ಮತಗಳಲ್ಲಿ ಸ್ವಲ್ಪ ವ್ಯತ್ಯಾಸಗಳಿರಬಹುದು. ಬಸವಣ್ಣನವರು ವೇದವನ್ನು ಒಪ್ಪದಿದ್ದರೂ ಪುರಾಣಗಳ ವಾಕ್ಯಗಳನ್ನು ಉಲ್ಲೇಖೀಸಿಯೇ ಶಿವ ಪಾರಮ್ಯವನ್ನು ಪ್ರತಿಪಾದಿಸಿದ್ದಾರೆ. ವೀರಶೈವರಿಗೂ, ಲಿಂಗಾಯತರಿಗೂ ಇಷ್ಟಲಿಂಗ ಪೂಜೆ ಮುಖ್ಯ. ಬಸವಣ್ಣನವರನ್ನು ಶಿವಭಕ್ತಿ ಭಂಡಾರಿ ಎನಿಸಿಕೊಂಡಿದ್ದಾರೆ. ಆದ್ದರಿಂದ ವೀರಶೈವ ಅಥವಾ ಲಿಂಗಾಯತರ ಹೆಸರಿನಲ್ಲಿ ಒಂದಾಗಬೇಕು ಎಂದು ಪೇಜಾವರ ಶ್ರೀಗಳು ಹೇಳಿದರು.

ಜಾತಿಗಳೊಳಗೆ ಸಾಮರಸ್ಯ
ಜಾತಿ ವ್ಯವಸ್ಥೆಯನ್ನು ಎಷ್ಟು ಮಟ್ಟಿಗೆ ತೊಡೆದು ಹಾಕುತ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ ಜಾತಿ ವ್ಯವಸ್ಥೆಯನ್ನು ನಾನೊಬ್ಬನೇ ತೊಡೆದು ಹಾಕಲಾಗುವುದಿಲ್ಲ. ಜಾತಿ ವ್ಯವಸ್ಥೆಯೂ ಅಷ್ಟು ಬಲವಾಗಿದೆ. ನಾವು ಜಾತಿಗಳೊಳಗೆ ಸಾಮರಸ್ಯವನ್ನು ತರಲು ಪ್ರಯತ್ನಿಸುತ್ತೇನೆ ಎಂದರು.

ಧಾರ್ಮಿಕ ಸ್ವಾತಂತ್ರ್ಯವೂ ಇದೆ
ದಲಿತರನ್ನು ಗರ್ಭಗುಡಿಗೆ ಬಿಡುತ್ತೀರಾ? ನಿಮ್ಮೊಳಗೆ ಸಾಮರಸ್ಯ ಎಷ್ಟಿದೆ? ಏಕಾದಶಿ ಬೇರೆ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನಾವು ದಲಿತರಿಗೂ ದೀಕ್ಷೆಯನ್ನು ಕೊಡುತ್ತಿದ್ದೇವೆ. ಮಠ, ದೇವಸ್ಥಾನಗಳೊಳಗಿನ ವ್ಯವಸ್ಥೆ ಬೇರೆ ಇರುತ್ತದೆ. ಇದು ಧಾರ್ಮಿಕ ವಿಚಾರ. ಪ್ರತಿಯೊಂದು ಸಮಾಜದಲ್ಲಿಯೂ ತಾತ್ವಿಕ ವಿಚಾರಗಳು ಬೇರೆ ಇರುತ್ತವೆ. ಪ್ರಾಚೀನ ಗಣಿತ ಸರಿಯೋ? ದೃಗ್ಗಣಿತ ಸರಿಯೋ ಎಂಬ ಜಿಜ್ಞಾಸೆ ಇರುವಾಗ ಬಲಾತ್ಕಾರ ಮಾಡಲು ಸಾಧ್ಯವಿಲ್ಲ. ಏಕಾದಶಿ ಬೇರೆ ಮಾಡಿದರೂ ತಣ್ತೀ ಸಿದ್ಧಾಂತಕ್ಕೆ ತೊಂದರೆ ಇಲ್ಲ, ನಾವು ಸಾಮಾಜಿಕವಾಗಿ ಒಂದಾಗಿದ್ದೇವೆ  ಎಂದರು.

ಅಹಿಂದಕ್ಕೆ ವಿರೋಧವಿಲ್ಲ, ಆದರೆ…
ಸಿದ್ದರಾಮಯ್ಯನವರು ಅಹಿಂದವನ್ನು ಬಲಪಡಿಸುವ ಜತೆಗೆ ಹಿಂದುತ್ವದ ಪರವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರಲ್ಲ? ಎಂಬ ಪ್ರಶ್ನೆಗೆ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ನಾವು ಅಹಿಂದಕ್ಕೆ ವಿರೋಧಿಯಲ್ಲ. ಯಾರಿಗೂ ಅನ್ಯಾಯವಾಗಬಾರದು. ಅಧಿಕಾರಿಗಳು ತಪ್ಪು ಮಾಡಿದರೆ ಶಿಕ್ಷೆ ಕೊಡಬಹುದೆ ವಿನಾ ಧೋರಣೆ ಅನುಸರಿಸಿ ಶಿಕ್ಷೆ ಕೊಡುವುದು ತಪ್ಪು ಎಂದರು.

ಪಾಕ್‌ ಸೌಹಾರ್ದಕ್ಕೆ ಕಾಶ್ಮೀರ ಬಿಡಬೇಕೆ?
ಈದ್‌ ಉಪಾಹಾರ ಕೂಟಕ್ಕೆ ಸಂಬಂಧಿಸಿ, ಶಾಂತಿ ಸೌಹಾರ್ದದಲ್ಲಿ ಕಳಕಳಿ ಇದ್ದರೆ ರಾಮಮಂದಿರ ಚಳವಳಿಯಿಂದ ಹಿಂದೆ ಸರಿಯಬೇಕೆಂದು ಕೆಲವು ಬುದ್ಧಿಜೀವಿಗಳು ಹೇಳುತ್ತಿದ್ದಾರೆ. ಸೌಹಾರ್ದವೆಂದರೆ ನಮ್ಮ ಸಿದ್ಧಾಂತ, ಧೋರಣೆಯನ್ನು ತೊರೆದು ಶರಣಾಗತಿಯಲ್ಲ. ಪಾಕಿಸ್ಥಾನ, ಚೀನ ಜತೆಗೆ ಸೌಹಾರ್ದದಿಂದ ಇರಬೇಕಾದರೆ ಗಡಿ ಪ್ರದೇಶವನ್ನು ಬಿಟ್ಟುಕೊಡಬೇಕೆಂದು ಅರ್ಥವೆ? ನಮ್ಮ ಸಿದ್ಧಾಂತವನ್ನು ಇಟ್ಟುಕೊಂಡೇ ಸೌಹಾರ್ದಕ್ಕೆ ಪ್ರಯತ್ನ ಮಾಡಬಹುದು. ವಿ.ಪಿ.ಸಿಂಗ್‌, ಪಿ.ವಿ.ನರಸಿಂಹ ರಾವ್‌ ಅವರ ಕಾಲದಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಯಲು ಪ್ರಯತ್ನಿಸಿದ್ದೆ. ಮಂದಿರ ನಿರ್ಮಾಣ ಚಳವಳಿಗೆ ಈಗಲೂ ಬದ್ಧ ಎಂದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.