“ಎತ್ತಿನಹೊಳೆ ಯೋಜನೆಯಿಂದ ನೀರಿಗೆ ತತ್ವಾರ’
Team Udayavani, Aug 19, 2017, 6:30 AM IST
ಉಡುಪಿ: ಎತ್ತಿನಹೊಳೆ ಯೋಜನೆಯಿಂದ ಮುಂದಿನ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯಲು ನೀರು ಇಲ್ಲದೆ ಪರದಾಡಬೇಕಾದ ಪರಿಸ್ಥಿತಿ ಬರಬಹುದು ಜಯಶ್ರೀಕೃಷ್ಣ ಪರಿಸರ ಸಮಿತಿ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ಹೇಳಿದರು.
ಗುರುವಾರ ತೋನ್ಸೆಯಲ್ಲಿ ನಡೆದ ಜಯಶ್ರೀ ಕೃಷ್ಣ ಪರಿಸರ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಭೂಮಿಗಳು ಮುಕ್ತಾಯದ ಹಂತಕ್ಕೆ ತಲುಪಬಹುದು. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರ ಹೊಣೆಯಾಗುತ್ತವೆ. ಈಗಲಾದರೂ ಜನ ಎಚ್ಚೆತ್ತುಕೊಳ್ಳದೆ ಹೋದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ನಾಶವಾಗಿ ಹೋಗಲಿದೆ ಎಂದರು.
ಸಮಿತಿ ಅಧ್ಯಕ್ಷ ಧರ್ಮಪಾಲ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಮಚಂದ್ರ ಬೈಕಂಪಾಡಿ, ಕಾರ್ಯದರ್ಶಿ ಚಂದ್ರಶೇಖರ ಬೆಲ್ಚಡ, ಪದಾಧಿ ಕಾರಿಗಳಾದ ನಿತ್ಯಾನಂದ ಕೋಟ್ಯಾನ್, ಎಲ್.ಟಿ. ಅಮೀನ್, ಜಗದೀಶ ಅಧಿಕಾರಿ, ರಾಮಚಂದ್ರ ಗಾಣಿಗ ಉಪಸ್ಥಿತರಿದ್ದರು. ದಯಾಸಾಗರ ಚೌಟ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.