ಬಡವರನ್ನು ಬೀದಿಯಲ್ಲಿ ನಿಲ್ಲಿಸಿದರೆ ಹೋರಾಟ: ಕೋಟ
Team Udayavani, Sep 12, 2017, 8:10 AM IST
ಕಾಪು: ತಾನು ಅಹಿಂದ ಪರ ಎಂದು ಬಿಂಬಿಸುತ್ತಿರುವ ರಾಜ್ಯ ಸರಕಾರ ಕರಾವಳಿ ಜಿಲ್ಲೆಯಲ್ಲಿರುವ ಅಹಿಂದ ವರ್ಗದ ಸುಮಾರು 27,000 ಬಡವರಿಗೆ ಹಕ್ಕು ಪತ್ರ ವಿತರಿಸಲು ಮೀನ ಮೇಷ ಎಣಿಸುತ್ತಿದೆ. ಬಡವರನ್ನು ಬೀದಿಯಲ್ಲಿ ನಿಲ್ಲಿಸುವ ಪ್ರಯತ್ನ ಮುಂದುವರಿದರೆ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿ ಸದಾ ಸಿದ್ಧವಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾಪು ಕ್ಷೇತ್ರ ಬಿಜೆಪಿ ಮತ್ತು ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ವಿವಿಧ ಮೋರ್ಚಾಗಳ ಸಹಭಾಗಿತ್ವ ದೊಂದಿಗೆ ಸೋಮವಾರ ನಡೆದ ಹೆಜಮಾಡಿಯಿಂದ ಕಾಪು ವರೆಗಿನ ಬೃಹತ್ ಕಾಲ್ನಡಿಗೆ ಜಾಥಾದ ಪ್ರಯುಕ್ತ ಕಾಪು ಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಉಪಾ ಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಜಿ.ಪಂ.
ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಉದಯ ಕುಮಾರ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ