ಇಂದು ಬಾಲಮಿತ್ರರ ಬೃಹತ್ ಮೊಸರು ಕುಡಿಕೆ ಉತ್ಸವ
Team Udayavani, Sep 14, 2017, 9:22 AM IST
ಉಡುಪಿ: ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ನಡೆಯುವ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳುವ ಮುಂಬಯಿಯ ಬಾಲಮಿತ್ರರ ತಂಡ ಕೃಷ್ಣನ ಲೀಲೋತ್ಸವದ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದೆ.
ಕೆ. ಉದಯ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಕಿದಿಯೂರು ಉದಯ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ನ ಅಂಗ ಸಂಸ್ಥೆಯಾಗಿರುವ “ಆಲಾರೆ ಗೋವಿಂದ’ ಸಾಂಸ್ಕೃತಿಕ ವೇದಿಕೆ ವತಿಯಿಂದ ಮುಂಬಯಿಯ ಬಾಲಮಿತ್ರ ವ್ಯಾಯಾಮ ಶಾಲೆಯ ಯುವಕರಿಂದ ಮಾನವ ಪಿರಮಿಡ್ ನಿರ್ಮಿಸಿ ಬೃಹತ್ ಮೊಸರು ಕುಡಿಕೆ ಒಡೆಯುವ ಕಾರ್ಯಕ್ರಮ ನಡೆಯಲಿದೆ.
ಕೃಷ್ಣಮಠದ ತಾತ್ಕಾಲಿಕ ರಾಜಾಂಗಣದಲ್ಲಿ ಸೆ. 14ರ ಬೆಳಗ್ಗೆ 9 ಗಂಟೆಗೆ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಚಾಲನೆ ನೀಡಲಿದ್ದು, ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ನಾಡೋಜ ಡಾ| ಜಿ. ಶಂಕರ್, ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ. ಆ ಬಳಿಕ ಶ್ಯಾಮಿಲಿ ಸಭಾಭವನ, ಮಲ್ಪೆ, ಬ್ರಹ್ಮಾವರ, ರಥಬೀದಿ, ರಾಧಾ ಮೆಡಿಕಲ್ ಹಾಗೂ ಕಿದಿಯೂರು ಹೊಟೇಲ್ ಮುಂಭಾಗ ಮೊಸರು ಕುಡಿಕೆ ಒಡೆಯಲಿದ್ದಾರೆ.
ಸಮಾಜಮುಖೀ ಕಾರ್ಯ
ಕಿದಿಯೂರು ಉದಯ ಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಹತ್ತು ಹಲವು ಸಾಂಸ್ಕೃತಿಕ, ಸಮಾಜಮುಖೀ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದೆ. ಯುವಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ, ಬಡವರಿಗೆ ಆರ್ಥಿಕ ಸಹಾಯದ ಜತೆಗೆ ಪ್ರಧಾನಮಂತ್ರಿ ಜೀವ ವಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ್ ಜ್ಯೋತಿ ಯೋಜನೆಯ 24,000 ಫಲಾನುಭವಿಗಳ ಸುಮಾರು 50 ಲಕ್ಷ ರೂ. ವರೆಗಿನ ವಿಮಾ ಕಂತನ್ನು ಟ್ರಸ್ಟ್ ಭರಿಸಲಿದೆ ಎಂದು ಕೆ. ಉದಯ ಕುಮಾರ್ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ