ಜಾಗತಿಕ ಬಲಿಷ್ಠ ರಾಷ್ಟ್ರವಾಗಲಿದೆ ಭಾರತ


Team Udayavani, Nov 20, 2017, 10:51 AM IST

20-10.jpg

ಉಡುಪಿ: ಭಾರತ ಜಗತ್ತಿನಲ್ಲೇ ಅತೀ ಹೆಚ್ಚು ಯುವಜನತೆಯನ್ನು ಹೊಂದಿರುವ ದೇಶ. ಯುವಜನತೆ ಈ ದೇಶದ ಶಕ್ತಿ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ಜಾಗತಿಕ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಮೈನಿ ಗ್ರೂಪ್‌ ಅಧ್ಯಕ್ಷ ಸಂದೀಪ್‌ ಮೈನಿ ಹೇಳಿದರು. 

ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ರವಿವಾರ ನಡೆದ ಮಣಿಪಾಲ ವಿ.ವಿ. ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಯುವಜನತೆಯಲ್ಲಿ ಸಂಘಟನಾತ್ಮಕ ಮತ್ತು ಸಕಾರಾತ್ಮಕ ಬದಲಾವಣೆ ತರುವ ಅತ್ಯದ್ಭುತ ಶಕ್ತಿ ಇದೆ. ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಸಾಮಾ ಜಿಕವಾಗಿ ಸಕಾರಾತ್ಮಕ ಮತ್ತು ನಕಾರಾತ್ಮಕ ಎರಡೂ ರೀತಿಯ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ನಕಾರಾತ್ಮಕ ಪರಿಣಾಮಗಳನ್ನು ಪತ್ತೆಹಚ್ಚಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ. ರಾಜಕೀಯ, ಸಾಮಾ ಜಿಕ, ಆರ್ಥಿಕ ಹೀಗೆ ವಿವಿಧ ಸ್ತರಗಳಲ್ಲಿ ಬದ ಲಾವಣೆಯ ಪರ್ವ ಪ್ರಾರಂಭವಾಗಲಿದೆ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವಜನತೆ, ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಲಿದೆ ಎಂದರು.

ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು
ಭಾರತ ಐತಿಹಾಸಿಕವಾಗಿ ಸಾಂಸ್ಕೃತಿಕ, ಸಾಮಾ ಜಿಕ, ಪ್ರಬುದ್ಧ ಕುಟುಂಬ ಪದ್ಧತಿ ಹಾಗೂ ನೈತಿಕ ಮೌಲ್ಯ ಗಳನ್ನು ಬೆಳೆಸಿಕೊಂಡು ಬಂದಿರುವ ದೇಶ. ಆ ಮೌಲ್ಯಗಳನ್ನು ಯುವಜನತೆ ಪ್ರತಿ ಹಂತ ದಲ್ಲಿಯೂ ಕಾಪಾಡಿಕೊಂಡು ಮುಂದೆ ಸಾಗ ಬೇಕು. ದೇಶ ಸರ್ವರೀತಿಯಲ್ಲಿ ಅಭಿವೃದ್ಧಿ ಹೊಂದ ಬೇಕಾ ದರೆ ಅಲ್ಲಿನ ನೈತಿಕ ಮೌಲ್ಯವೂ ಪ್ರಮುಖ ಪಾತ್ರ ವಹಿಸು ತ್ತದೆ. ಆದರೆ ದೇಶದಲ್ಲಿ ಕೆಲ ವೊಂದು ಮೌಲ್ಯಗಳು ಕುಸಿಯುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಕಳೆದು ಹೋಗುತ್ತಿರುವ ಮೌಲ್ಯಗಳನ್ನು ಪುನರ್‌ ರೂಪಿಸುವ ಮತ್ತು ಬಿತ್ತರಿಸುವ ಜವಾಬ್ದಾರಿಯನ್ನು ಕೂಡ ನಾವು ಬೆಳೆಸಿಕೊಳ್ಳಬೇಕು ಎಂದರು.

ಫ‌ಲಾಪೇಕ್ಷೆ ರಹಿತ ಕೆಲಸ
ಬದುಕಿನಲ್ಲಿ ಎಂದಿಗೂ ನಮ್ಮ ಬಗ್ಗೆ ನಮಗೆ ತಿರಸ್ಕೃತ ಮನೋಭಾವ ಮೂಡಬಾರದು. ಅನೇಕ ಅವಕಾಶಗಳು ನಮ್ಮಿಂದ ಕೈತಪ್ಪಿ ಹೋಗುತ್ತವೆ. ಇದ ರಿಂದ ನಾವು ಧೃತಿಗೆಡಬಾರದು. ನಮ್ಮ ಕನಸು, ಗುರಿ ತಲುಪಬೇಕಾದರೆ ಮಾಡುವ ವೃತ್ತಿಯಲ್ಲಿ ಸಂತೃಪ್ತಿ ಮತ್ತು ಶ್ರಮ ಪಡಬೇಕು. ಫ‌ಲಾಪೇಕ್ಷೆ ಇಲ್ಲದೇ ನಾವು ಕಾರ್ಯಪ್ರವೃತ್ತರಾಗ ಬೇಕಾಗುತ್ತದೆ. ಭಗವದ್ಗೀತೆ ಕೂಡ ಇದನ್ನೇ ಹೇಳಿದೆ ಎಂದರು.

ಎರಡನೇ ದಿನದ ಘಟಿಕೋತ್ಸವದಲ್ಲಿ 1,264 ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಗಳಿಗೆ ಮತ್ತು 22 ಮಂದಿಗೆ ಪಿಎಚ್‌ಡಿ ಪದವಿ ನೀಡಲಾಯಿತು. 5 ಮಂದಿ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಮಣಿಪಾಲ ವಿ.ವಿ.ಯ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಡಾ| ಎಚ್‌. ವಿನೋದ್‌ ಭಟ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಸಹಕುಲಪತಿಗಳಾದ ಡಾ| ಪೂರ್ಣಿಮಾ ಬಾಳಿಗಾ, ಡಾ| ಜಿ.ಕೆ. ಪ್ರಭು, ಡಾ| ಅಬ್ದುಲ್‌ ರಜಾಕ್‌, ಡಾ| ವಿನೋದ್‌ ಥಾಮಸ್‌, ಡಾ| ಸುಮಾ ನಾಯರ್‌, ಡಾ| ಮಧುಕರ್‌ ಮಲ್ಯ ಉಪಸ್ಥಿತರಿದ್ದರು. ಸಹಕುಲಪತಿ ಡಾ| ವಿ. ಸುರೇಂದ್ರ ಶೆಟ್ಟಿ ಸ್ವಾಗತಿಸಿ, ಡಾ| ಬಿ. ರಾಜಶೇಖರ್‌ ವಂದಿಸಿದರು. ಡಾ| ಅನಿಲ್‌ ಭಟ್‌ ನಿರೂಪಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.