ವಿವಾಹ ತಡೆದ ಅಧಿಕಾರಿಗಳು: ಬಾಲಕಿಯ ರಕ್ಷಣೆ


Team Udayavani, Dec 12, 2017, 10:42 AM IST

12-12.jpg

ಉಡುಪಿ: ಮಣಿಪಾಲದ ಪೆರಂಪಳ್ಳಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಗೆ ಮದುವೆ ಮಾಡಲು ಸಿದ್ಧತೆ ನಡೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಮನೆಗೆ ಭೇಟಿ ನೀಡಿ ಬಾಲ್ಯ ವಿವಾಹವನ್ನು ತಡೆದು ಬಾಲಕಿಯನ್ನು ರಕ್ಷಿಸಿದ್ದಾರೆ.

ಪ್ರಭಾವತಿಯವರ ಅಪ್ರಾಪ್ತ ವಯಸ್ಕ ಪುತ್ರಿಗೆ ಡಿ. 11ರ ಬೆಳಗ್ಗೆ 11 ಗಂಟೆಗೆ ಶ್ರೀಶ ಭಟ್‌ ಅವರ ಮನೆಯಲ್ಲಿ ಮದುವೆ ಕಾರ್ಯ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳ ಲಾಗಿತ್ತು. ಖಚಿತ ಮಾಹಿತಿ  ಹಾಗೂ ಜಿಲ್ಲಾಧಿಕಾರಿ‌ ಆದೇಶದಂತೆ ಬಾಲ್ಯ ವಿವಾಹವನ್ನು ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ತಹಶೀಲ್ದಾರರು ಮತ್ತು ಪೊಲೀಸ್‌ ಇಲಾಖೆಯ ವೃತ್ತ ನೀರೀಕ್ಷರು, ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿ ಚಾರಕಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹಾಗೂ ಸಿಬಂದಿ ಬೆಳಗ್ಗೆ 8 ಗಂಟೆಗೆ ಮನೆಗೆ ಭೇಟಿ ನೀಡಿದರು.

ಭೇಟಿಯ ಸಮಯದಲ್ಲಿ ತಾಯಿ ಪ್ರಭಾವತಿ ಹಾಗೂ ಅವರ ಕುಟುಂಬ ಸಂಬಂಧಿಕರು ಇದ್ದರು. ಅವರೊಂದಿಗೆ ಚರ್ಚಿಸಿ 18 ವರ್ಷಕ್ಕೆ ಮುಂಚಿತವಾಗಿ ಮದುವೆ ಮಾಡಿದಲ್ಲಿ ಅದು ಬಾಲ್ಯ ವಿವಾಹವಾಗುವುದಾಗಿ, ಇದು ಕಾನೂನು ರೀತಿ ಅಪರಾಧ ಎನ್ನುವ ಬಗ್ಗೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಅವರಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟರು.

ಅಪ್ರಾಪ್ತ ವಯ ಸ್ಕಳೆಂಬುದು ದೃಢ
ಬಾಲಕಿಯ ಜನ್ಮದಿನಾಂಕ, ಆಧಾರ್‌ಕಾರ್ಡ್‌ ದಾಖಲಾತಿ ಪರಿ ಶೀಲಿಸಿದಾಗ ಜನ್ಮ ದಿನಾಂಕವು 2001ರ ಜ. 7 ಆಗಿತ್ತು. ಇದರಿಂದ ಆಕೆ ಅಪ್ರಾಪ್ತ ವಯಸ್ಕಳೆಂಬುದನ್ನು ದೃಢಪಡಿಸಿಕೊಳ್ಳಲಾಯಿತು.

ಹೆತ್ತವರು, ಪುರೋಹಿತರಿಂದ ಮುಚ್ಚಳಿಕೆ
ಬಾಲಕಿಗೆ 18 ವರ್ಷ ಪೂರ್ತಿಯಾಗದೆ ವಿವಾಹ ಮಾಡಿಸುವುದಿಲ್ಲ ಎನ್ನುವ ಬಗ್ಗೆ ಆಕೆಯ ತಾಯಿಯಿಂದ ಮುಚ್ಚಳಿಕೆ ಪಡೆಯಲಾಯಿತು. ಅನಂತರ ವಿವಾಹ ನಡೆಸಿಕೊಡುವ ಪುರೋಹಿತ ಶ್ರೀಶ ಭಟ್‌ ಅವರನ್ನು ಭೇಟಿ ಮಾಡಿ ಈ ಮದುವೆಯ ಬಗ್ಗೆ ಅಧಿಕಾರಿಗಳು ವಿಚಾರಿಸಿದ್ದು, ವಧುವಿನ ತಾಯಿ ಮದುವೆ ಮಾಡಿಸಲು ತಿಳಿಸಿದ್ದು, ವಯಸ್ಸಿನ ಬಗ್ಗೆ ಹೆತ್ತ ವರಲ್ಲಿ ಕೇಳಿದಾಗ ಮದುವೆ ವಯಸ್ಸಾಗಿದೆ ಎಂದಿದ್ದರು. ಹೀಗಾಗಿ ನಾನು ಮದುವೆ ಮಾಡಿಸಲು ಒಪ್ಪಿ ಕೊಂಡಿರುತ್ತೇನೆ. ಈಗ ಆಕೆಗೆ 18 ವರ್ಷ ಪೂರ್ತಿಯಾಗದೇ ಇರುವುದು ತಿಳಿದುಬಂದಿದೆ. ಇದು ಕಾನೂನು ರೀತಿ ತಪ್ಪೆಂದು ಗೊತ್ತಾಗಿದೆ. ಇನ್ನು ಮುಂದೆ ದಾಖಲೆಯನ್ನು ಪರಿಶೀಲಿಸಿ, ವಯಸ್ಸನ್ನು ಖಚಿತಪಡಿಸಿಕೊಂಡೇ ವಿವಾಹ ಮಾಡಿಸುವುದಾಗಿ ಲಿಖೀತ ಮುಚ್ಚಳಿಕೆ ನೀಡಿದರು. ಬಳಿಕ ಅಧಿಕಾರಿಗಳು ತೆರಳಿದ್ದಾರೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.