ಆಧಾರ್ ಅದಾಲತ್: ಮುಗಿಬಿದ್ದ ಜನ
Team Udayavani, Dec 28, 2017, 12:11 PM IST
ಉಡುಪಿ: ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗಾಗಿ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಡಿ.26ರಂದು ಆರಂಭಿಸಲಾಗಿರುವ “ಆಧಾರ್ ಅದಾಲತ್’ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಹಲವು ಮಂದಿ ಆಧಾರ್ ತಿದ್ದುಪಡಿ, ನೋಂದಣಿ ಮಾಡಿಕೊಳ್ಳಲಾಗದೆ ವಾಪಸಾಗಿದ್ದಾರೆ.
5 ದಿನಗಳ ಕಾಲ ನಡೆಯಲಿರುವ ಈ ಅದಾಲತ್ನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಎರಡು ಕಂಪ್ಯೂಟರ್ಗಳನ್ನು ಅಳವಡಿಸಿ ದಿನಕ್ಕೆ 70 ಮಂದಿ ನೋಂದಣಿ/ತಿದ್ದುಪಡಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಮೊದಲ ದಿನ ಮತ್ತು ಡಿ.27ರಂದು ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದರು. ಡಿ.27ರಂದು 300ಕ್ಕೂ ಅಧಿಕ ಮಂದಿ ಆಗಮಿಸಿದ್ದರು. ಕಂಪ್ಯೂಟರ್ಗಳ ಸಂಖ್ಯೆಯನ್ನು ನಾಲ್ಕಕ್ಕೆ ಹೆಚ್ಚಿಸಲಾಯಿತಾದರೂ ಆಗಮಿಸಿದವರೆಲ್ಲರಿಗೂ ಅವಕಾಶ ದೊರೆಯಲಿಲ್ಲ. ಹಾಗಾಗಿ ಬಾಕಿ ಉಳಿದವರಿಗೆ ಟೋಕನ್
ಸಂಖ್ಯೆ ನೀಡಿ ವಾಪಸ್ಸು ಕಳುಹಿಸಲಾಯಿತು.
ತಾಂತ್ರಿಕ ತೊಡಕು: ನಿಗದಿತವಾದ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ತಿದ್ದುಪಡಿ/ನೋಂದಣಿ ಮಾಡಿದ್ದೇವೆ. ಡಿ.27ರಂದು 175 ತಿದ್ದುಪಡಿ ಮತ್ತು 48 ಹೊಸ ನೋಂದಣಿ ಆಗಿದೆ. ಮಕ್ಕಳು ಮತ್ತು ಹಿರಿಯರ ಬೆರಳಚ್ಚು ಪಡೆಯುವಾಗ ವಿಳಂಬ ಆಗು ವುದರಿಂದ ಸ್ವಲ್ಪ ತೊಂದರೆಯಾಗಿದೆ. ಕೆಲವು ಮಂದಿ ಪೂರಕವಾದ ದಾಖಲೆಗಳನ್ನು ಒದಗಿಸದೆ ಇದ್ದುದರಿಂದಲೂ ಪ್ರಕ್ರಿಯೆ ವಿಳಂಬವಾಗಿದೆ. 180 ಮಂದಿಗೆ ಟೋಕನ್ ನೀಡಲಾಗಿದೆ. ಅವರು ಮುಂದೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ “ಸ್ಪಂದನ’ ಕೇಂದ್ರದಲ್ಲಿ ಆಧಾರ್ ತಿದ್ದುಪಡಿ/ ನೋಂದಣಿ ಮಾಡಿಕೊಳ್ಳಬಹುದು. ಇಲ್ಲಿ ದೊರೆ ತಿರುವ ಪ್ರತಿಕ್ರಿಯೆ ಕುರಿತು ಬೆಂಗಳೂರಿನ ಇ-ಆಡಳಿತ ಕೇಂದ್ರಕ್ಕೆ ಮಾಹಿತಿ ನೀಡಲಾಗುವುದು. ತಾಲೂಕು ಮಟ್ಟದಲ್ಲಿ ಆಧಾರ್ ಅದಾಲತ್ ನಡೆಸಲು ಪ್ರಸ್ತಾವನೆ ಸಲ್ಲಿಸ ಲಾಗುವುದು ಎಂದು ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
“ಆಧಾರ್ ನೋಂದಣಿ/ತಿದ್ದುಪಡಿಗೆ ಅವಕಾಶವಿದೆ ಎಂದು ಸಾರ್ವಜನಿಕರನ್ನು ಆಹ್ವಾನಿಸಿ ಅನಂತರ ಅವಕಾಶ ನೀಡದೆ ಇರುವುದು ಸರಿಯಲ್ಲ. ಅಗತ್ಯವಿರುವಷ್ಟು ಸಿಸ್ಟಂ ಮತ್ತು ಸಿಬಂದಿಯನ್ನು ನೇಮಿಸಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ