ಪಲಿಮಾರು ಪರ್ಯಾಯ: ಪೈಂಟಿಂಗ್‌-ಸಿವಿಲ್‌ ಕೆಲಸ ಶೀಘ್ರವೇ ಪೂರ್ಣ


Team Udayavani, Jan 4, 2018, 12:04 PM IST

04-19.jpg

ಉಡುಪಿ: ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಪರ್ಯಾಯದ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠ ಹಾಗೂ ಪಲಿಮಾರು ಮಠದಲ್ಲಿ  ಪೈಂಟಿಂಗ್‌ ಕಾರ್ಯ ನಡೆಯುತ್ತಿದೆ. ಈಗಾಗಲೇ ಶೇ. 90 ರಷ್ಟು ಪೈಂಟಿಂಗ್‌ ಪೂರ್ಣಗೊಂಡಿದೆ. ಜ. 18ರ ಶ್ರೀಗಳ ಪರ್ಯಾಯ ಪೀಠಾರೋಹಣದ ದಿನ ಹಲವು ರೀತಿಯಲ್ಲಿ ಅಲಂಕಾರ ಗೊಳಿಸಲು ಸಿದ್ಧತೆ ನಡೆಯುತ್ತಿದೆ. 

ಎರಡು ತಿಂಗಳಿನಿಂದ ನಿರಂತರ ಕೆಲಸ 
ಪರ್ಯಾಯದ ಹಿನ್ನೆಲೆಯಲ್ಲಿ ಪೈಂಟಿಂಗ್‌ ಹಾಗೂ ಇತರ ಕೆಲವು ಸಿವಿಲ್‌ ಕಾಮಗಾರಿಗಳು ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದೆ. ಶ್ರೀಕೃಷ್ಣ ಮಠ, ಭೋಜನ ಶಾಲೆ, ಒಳಭಾಗದ ಕೆಲವು ಛತ್ರಗಳಲ್ಲಿ ಪೈಂಟಿಂಗ್‌ ಪೂರ್ಣಗೊಂಡಿದೆ. ಪಲಿಮಾರು ಮಠದ ಹಿಂಭಾಗದಲ್ಲಿ ಸಿವಿಲ್‌ ಕೆಲಸ ಹಾಗೂ ಪೈಂಟಿಂಗ್‌ ಬಾಕಿಯಿದೆ. ಮೂರ್‍ನಾಲ್ಕು ದಿನಗಳ ಒಳಗಾಗಿ ಎಲ್ಲ ಕೆಲಸಗಳು ಪೂರ್ಣಗೊಳ್ಳಲಿದೆ. ಪ್ರತಿದಿನ 15 ರಿಂದ 20 ಮಂದಿ ಕಾರ್ಮಿಕರು ಈ ಕೆಲಸದಲ್ಲಿ ತೊಡಗಿದ್ದಾರೆ.  25-30 ಲಕ್ಷ ರೂ. ವೆಚ್ಚದಲ್ಲಿ ಪೈಂಟಿಂಗ್‌ ನಡೆಸಲಾಗಿದೆ.  ವೆಂಕಟೇಶ್‌ ಶೇಟ್‌, ಆನಂದ್‌ ಹಾಗೂ ಜನಾರ್ದನ್‌ ಅವರ ನೇತೃತ್ವದಲ್ಲಿ ಪೈಂಟಿಂಗ್‌ ನಡೆಯುತ್ತಿದೆ.  

ಭಜನಾ ತಂಡದ ವಾಸ್ತವ್ಯಕ್ಕೆ ವ್ಯವಸ್ಥೆ
ಪರ್ಯಾಯದ ಎರಡು ವರ್ಷಗಳ ಅವಧಿಯಲ್ಲಿ ನಿರಂತರ ಭಜನಾ ಸೇವೆ ನಡೆಯಲಿದ್ದು, ಭಜನಾ ಸೇವೆ ನಡೆಸಿಕೊಡಲು ವಿವಿಧ ಭಾಗಗಳಿಂದ ಆಗಮಿಸುವವರಿಗೆ ವಾಸ್ತವ್ಯಕ್ಕಾಗಿ ಪಲಿಮಾರು ಮಠದ ಹಿಂಭಾಗದಲ್ಲಿರುವ ಸ್ಥಳವನ್ನು ವಾಸ್ತವ್ಯಕ್ಕೆ ಪೂರಕವಾಗುವಂತೆ ನಿರ್ಮಾಣ ಮಾಡಲಾಗುತ್ತಿದೆ. ಶೌಚಾ ಲಯ, ಸ್ನಾನಗೃಹ ನಿರ್ಮಾಣದ ಕಾಮ ಗಾರಿಯೂ ನಡೆಯುತ್ತಿದೆ. ವಿದ್ಯಾಮಾನ್ಯ ಸಭಾಗೃಹದಲ್ಲೂ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಕೆಲಸ ಶೀಘ್ರವೇ ಮುಗಿಯಲಿದೆ. ಸುಮಾರು 12 ಸಾವಿರ ಲೀ. ನೀರು ತುಂಬಿಸುವಂತಹ ನೀರಿನ ಟ್ಯಾಂಕ್‌ ಕೂಡ ಮಠದ ಹಿಂಭಾಗದಲ್ಲಿ ನಿರ್ಮಿಸಲಾಗುತ್ತಿದೆ. 

ಪಲಿಮಾರು ಮಠದ ಮುಂಭಾಗದ ದ್ವಾರದ ಎರಡು ಭಾಗಗಳಲ್ಲಿ  ಪುರುಷೋತ್ತಮ ಅಡ್ವೆ ಅವರಿಂದ ಜಯ-ವಿಜಯ ದ್ವಾರಪಾಲಕ ರಚನೆಯಾಗಲಿದೆ. ವಿಜಯ ನಗರದ ಕಾವಿ ಚಿತ್ರಕಲಾ ಶೈಲಿಯಲ್ಲಿ ಇದು ಮೂಡಿಬರಲಿದೆ. ಮೂರ್‍ನಾಲ್ಕು ದಿನದ ಒಳಗಾಗಿ ಚಿತ್ರಕಲಾ ರಚನೆ ಮುಗಿಯಲಿದೆ. 

14 ವರ್ಷಗಳ ಹಿಂದೆ ನಡೆದ ಪಲಿಮಾರು ಶ್ರೀಗಳ ಮೊದಲ ಪರ್ಯಾಯದ ಅವಧಿಯಲ್ಲಿ ಪೈಂಟಿಂಗ್‌ ಹಾಗೂ ಇತರ ಕೆಲವು ಸಿವಿಲ್‌ ಕಾಮಗಾರಿಯನ್ನೂ ನಾವೇ ನಡೆಸಿದ್ದೇವೆ. ಈ ಬಾರಿಯೂ ನಮಗೆ ಜವಾಬ್ದಾರಿ ನೀಡಿದ್ದಾರೆ. ಎರಡು ತಿಂಗಳಿನಿಂದ ಕೆಲಸ ನಡೆಯುತ್ತಿದ್ದು, ಕೆಲವು ದಿನ ರಾತ್ರಿಯೂ ಕೆಲಸ ನಡೆಸಿದ್ದೇವೆ. ಹೆಚ್ಚಿನ ಕೆಲಸ ಮುಗಿದಿದೆ. 
ವೆಂಕಟೇಶ್‌ ಶೇಟ್‌, ಪೈಂಟಿಂಗ್‌ ಉಸ್ತುವಾರಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.