ಶಿರ್ವ:ಬೈಕಿನಲ್ಲಿ ಬಂದ ಅಪರಿಚಿತರಿಂದ ಹಲ್ಲೆ, ದರೋಡೆ
Team Udayavani, Jan 12, 2018, 12:09 PM IST
ಶಿರ್ವ: ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಯುವಕ ನೋರ್ವನಿಗೆ ಹಲ್ಲೆ ನಡೆಸಿ ಪರ್ಸ್, ಮೊಬೈಲ್, ಎಟಿಎಂ ಕಾರ್ಡ್ ದೋಚಿದ ಘಟನೆ ಶಿರ್ವ ಬಳಿಯ ಕಳತ್ತೂರು ಶಾಂತಿಗುಡ್ಡೆ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಸೊರ್ಪು ನಿವಾಸಿ ರಾಮ ಆಚಾರ್ಯ (36) ಹಲ್ಲೆಗೆ ಒಳಗಾದವರು.ರಾಮ ಆಚಾರ್ಯ ಅವರು ತನ್ನ ಮಾಲಕ ದಿನೇಶ್ ಆಚಾರ್ಯ ಅವರನ್ನು ಶಾಂತಿಗುಡ್ಡೆಯಲ್ಲಿ ಬಿಟ್ಟು ವಾಪಸ್ ಬರುವಾಗ ಶಾಂತಿಗುಡ್ಡೆ ಬಳಿ ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದರು. ಆಗ ಕಾಪು ಕಡೆಯಿಂದ ಬಂದ ಮೂವರು ಹೆಲ್ಮೆಟ್ಧಾರಿಗಳು ಹೆಲ್ಮೆಟ್ನಿಂದ ಹಲ್ಲೆ ನಡೆಸಿ ಸೊತ್ತುಗಳನ್ನು ದೋಚಿದ್ದಾರೆ.
ಹಲ್ಲೆಗೊಳಗಾದ ರಾಮ ಆಚಾರ್ಯ ಅವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.ಮೊಬೈಲ್ನಲ್ಲಿದ್ದ ಎಟಿಎಂ ಪಿನ್ ನಂಬರ್ ನೋಡಿ ಮೂಡುಬೆಳ್ಳೆಯಲ್ಲಿ ಹಣ ಡ್ರಾ ಮಾಡಿದ್ದಾರೆಂದು ತಿಳಿದು ಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳಿಂದ ಶಿರ್ವ, ಬೆಳ್ಮಣ್ ಆಸುಪಾಸಿನಲ್ಲಿ ಮೂವರು ಆಗಂತುಕರು ಭಯದ ವಾತಾವರಣ ಸೃಷ್ಟಿಸಿದ್ದು, ಇದು ಕೂಡ ಅವರದ್ದೇ ಕೃತ್ಯವಾಗಿರಬಹುದು ಎಂಬ ಅನುಮಾನ ಸಾರ್ವಜನಿಕರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು