ಕಚ್ಚಾರು ದೇಗುಲ ಅಭಿವೃದ್ಧಿ: ಪ್ರಮೋದ್ ಮಧ್ವರಾಜ್
Team Udayavani, Jan 22, 2018, 11:33 AM IST
ಬ್ರಹ್ಮಾವರ: ಕಚ್ಚಾರು ಮಾಲ್ತಿದೇವಿ ಹಾಗೂ ಬಬ್ಬುಸ್ವಾಮಿ ಮೂಲಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿ ನಿಲಯ ಸ್ಥಾಪನೆ ಹಾಗೂ ಒಂದು ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಮುಂತಾದ ಅಭಿವೃದ್ಧಿ ಕಾರ್ಯಗಳಿಗಾಗಿ ಸರಕಾರಕ್ಕೆ ಪ್ರಸ್ತಾವನೆ ಹಾಗೂ ಮನವಿ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಬೇಡಿಕೆ ಈಡೇರುವ ನಿರೀಕ್ಷೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ರವಿವಾರ ಬಾರ್ಕೂರು ಕಚ್ಚಾರು ಮಾಲ್ತಿ ದೇವಿ ಹಾಗೂ ಬಬ್ಬುಸ್ವಾಮಿ ಮೂಲಕ್ಷೇತ್ರದಲ್ಲಿ ಜಾತ್ರೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣಕ್ಕೆ ಎಲ್ಲದಕ್ಕಿಂತ ಹೆಚ್ಚಿನ ಶಕ್ತಿ ಇದೆ. ಆದ್ದರಿಂದ ನಿಮ್ಮ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ನೀಡಿ. ನಿಮ್ಮ ಎಲ್ಲ ಅಭಿವೃದ್ಧಿ ಕಾರ್ಯಗಳಲ್ಲೂ ಕೈ ಜೋಡಿಸುತ್ತೇನೆ ಎಂದರು.
ಕ್ಷೇತ್ರದ ಇನ್ನಷ್ಟು ಅಭಿವೃದ್ಧಿ ಅಗತ್ಯ
ನನ್ನ ಶಾಸಕತ್ವದ ಅವಧಿಯಲ್ಲಿ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಲವು ರೀತಿಯಲ್ಲಿ ಸಹಕಾರ ನೀಡಿದ್ದೇನೆ. ವಸತಿ ನಿಲಯ, ಶಿಕ್ಷಣ ಸಂಸ್ಥೆ, ಕ್ಷೇತ್ರದ ಅಭಿವೃದ್ಧಿ ಹೀಗೆ ಹಲವಾರು ಕಾರ್ಯಗಳು ಇಲ್ಲಿ ನಡೆಯಬೇಕಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಪಿ. ಬಾಬು ಮಲ್ಲಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಧಕರಿಗೆ ಸಮ್ಮಾನ
ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರಾದ ನಿವೃತ್ತ ಸೈನಿಕ ಬಿ. ಸಂಜೀವ ರಾವ್, ರವಿ ಎಸ್. ಕಟಪಾಡಿ, ನಿಖೀತ, ಸಂಚಲನ ತಂಡ ಹಾಗೂ ಮುರುಳಿ ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಗಳೂರು ಮನಪಾ ಉಪ ಮೇಯರ್ ರಜನೀಶ್ ಅವರನ್ನು ಗೌರವಿಸಲಾಯಿತು ಹಾಗೂ ಸಮಾಜದ ಶೈಕ್ಷಣಿಕ ಸಾಧಕರನ್ನು ಸಮ್ಮಾನಿಸಲಾಯಿತು.
ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ಎಸ್. ನಾರಾಯಣ, ನಿವೃತ್ತ ಅಧಿಕಾರಿಗಳಾದ ಗುರುವಪ್ಪ, ಹರಿಶ್ಚಂದ್ರ ಹೊಗೆ ಬಜಾರ್, ಎಂ.ಬಿ. ಜಯ, ಗುರಿಕಾರರಾದ ಹರಿಶ್ಚಂದ್ರ ಪಿಲಾರ್, ಶಂಕರಪ್ಪ, ಸುಂದರ್ ಎನ್., ವೆಂಕಪ್ಪ, ಬಾಲಕೃಷ್ಣ ಎಸ್., ಪೂವಪ್ಪ ಅಮೀನ್, ಕೃಷ್ಣಪ್ಪ, ಕಾಡ್ಯಾ, ಸತೀಶ್ ಬಿ. ಅಮೀನ್, ವಸಂತ್, ಮಂಜುನಾಥ, ಆನಂದ್, ಶಂಕರ ಬಿ.ಎಮ್., ನಾಗೇಶ್, ನರಸಿಂಹ ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಕಾರ್ಯದರ್ಶಿ ಗೋಕುಲ್ದಾಸ್ ಸ್ವಾಗತಿಸಿ, ಉಪನ್ಯಾಸಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ