ಕಾಣಿಕೆ ಹುಂಡಿ ಕಳ್ಳರಿಂದಲೇ ದರೋಡೆ ಕೃತ್ಯ


Team Udayavani, Jan 22, 2018, 12:05 PM IST

22-26.jpg

ಕಾಪು: ಶನಿವಾರ ಪೊಲೀಸರು ಬಂಧಿಸಿರುವ ಕಳವು ಆರೋಪಿಗಳು ದರೋಡೆ ಪ್ರಕರಣದಲ್ಲೂ ಭಾಗಿಯಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಶಿರ್ವ, ಕಾಪು ಮತ್ತು ಕಾರ್ಕಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ  ನಡೆದಿದ್ದ ಹಲವು  ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ  ಮಟ್ಟಾರು ಜನತಾ ಕಾಲನಿ ಪರಿಸರದ ನಿವಾಸಿ ಗುರುಪ್ರಸಾದ್‌ (22) ಮತ್ತು ಮಲ್ಲಾರು ನಿವಾಸಿ 17 ವರ್ಷದ ಬಾಲಕನನ್ನು ಬಂಧಿಸಿದ್ದು,  ಅವಿನಾಶ್‌ ಅಲಿಯಾಸ್‌ ಅಬಿ ಎಂಬಾತ ತಲೆಮರೆಸಿಕೊಂಡಿದ್ದಾನೆ.

ದರೋಡೆ ಪ್ರಕರಣ ಬಯಲು
ಜ. 10ರಂದು ನಡೆದಿದ್ದ ಕಳತ್ತೂರು ಶಾಂತಿಗುಡ್ಡೆ ಬಳಿ  ದಿನೇಶ್‌ ಆಚಾರ್ಯ  ಅವರ ಮೇಲಿನ ಹಲ್ಲೆ ಮತ್ತು  ಎಟಿಎಂ ಕಾರ್ಡ್‌  ಲೂಟಿ ಮಾಡಿ  6 ಸಾ.ರೂ.  ಲಪಟಾಯಿಸಿದ್ದು  ಇದೇ ತಂಡದ ಕೃತ್ಯ ಎಂಬುದು ತಿಳಿದು ಬಂದಿದೆ. 

ಕಾಣಿಕೆ ಡಬ್ಬಿ ಕಳವು
ಕಾರ್ಕಳ ಉಪ ವಿಭಾಗದ ವ್ಯಾಪ್ತಿಯ ಸೂಡ ಸುಬ್ರಹ್ಮಣ್ಯ ದೇವಸ್ಥಾನ, ಕಾಪು ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಲಕ್ಷ್ಮೀ  ನಾರಾಯಣ ಭಜನ ಮಂದಿರ ಸಹಿತ ಇನ್ನಂಜೆ ಮತ್ತು ಪಳ್ಳಿ ಸಮೀಪದ ದೇವ ಸ್ಥಾನವೊಂದರ ಕಾಣಿಕೆ ಡಬ್ಬಿ ಕಳವು ಪ್ರಕರಣದಲ್ಲೂ ಇವರ ಪಾತ್ರವಿದೆ. ಇವರು  ಪೊಲಿಪುನಲ್ಲಿ ಕಾಣಿಕೆ ಡಬ್ಬಿ ಕದಿಯಲು ಯತ್ನಿಸುತ್ತಿರುವಾಗಲೇ ಸಾರ್ವಜನಿಕರ ಮೂಲಕ  ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ದರೋಡೆ ಪ್ರಕರಣದ ಬಗ್ಗೆ ಸಂಶಯ ಬಂದು ವೃತ್ತ ನಿರೀಕ್ಷಕರ ಮೂಲಕ ತನಿಖೆ ನಡೆಸಿದಾಗ ಇವರು ಮಾಡಿರುವ ಹಲವು ಕುಕೃತ್ಯಗಳು ಬಯಲಿಗೆ ಬಂದವು.

ರಿಕ್ಷಾದ ಸಾಲ ಕಟ್ಟಲು ಕಳವು
ಆರೋಪಿಗಳ ಪೈಕಿ ಮೂಲತಃ ಮಟ್ಟಾರು ನಿವಾಸಿಯಾಗಿದ್ದು, ಪ್ರಸ್ತುತ ಮಲ್ಲಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಗುರುಪ್ರಸಾದ್‌  ರಿಕ್ಷಾ ಚಾಲಕನಾಗಿದ್ದಾನೆ. ರಿಕ್ಷಾದ  ಬ್ಯಾಂಕ್‌ ಸಾಲದ ಕಂತು ಕಟ್ಟಲು  ಪರದಾಡುತ್ತಿದ್ದ ಆತ ಕಳವು ಮಾಡಲು ತೊಡಗಿದ್ದ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್‌ ನೇತೃತ್ವದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.