ಅಸಾಂಪ್ರದಾಯಿಕ ಮೀನುಗಾರಿಕೆ ತಡೆ, ಸೀಮೆಎಣ್ಣೆ ಬಿಡುಗಡೆಗೆ ಆಗ್ರಹ


Team Udayavani, Mar 13, 2018, 6:20 AM IST

120318Astro01.jpg

ಉಡುಪಿ: ಬುಲ್‌ಟ್ರಾಲ್‌, ಬೆಳಕು ಮೀನುಗಾರಿಕೆ, ಕಪ್ಪೆ ಬೊಂಡಾಸ್‌, ಪಚ್ಚಿಲೆ ತೆಗೆಯುವುದು ಮೊದಲಾದ ಅಸಾಂಪ್ರದಾಯಿಕ ಮೀನುಗಾರಿಕೆಯನ್ನು ನಿಷೇಧಿಸಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ನಾಡದೋಣಿ ಮೀನುಗಾರರಿಗೆ ಎಪ್ರಿಲ್‌ ಮತ್ತು ಮೇ ತಿಂಗಳ ಸೀಮೆ ಎಣ್ಣೆ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಮಾ. 12ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಾಡದೋಣಿ ಮೀನುಗಾರರ ಒಕ್ಕೂಟದ ಗೌರವ ಸಲಹೆಗಾರ ನವೀನ್‌ಚಂದ್ರ ಉಪ್ಪುಂದ ಅವರು ಮಾತನಾಡಿ, ಬೇರೆ ರಾಜ್ಯಗಳಲ್ಲಿ ಅಸಾಂಪ್ರದಾಯಿಕ ಮೀನುಗಾರಿಕೆ ನಿಂತಿದೆ. ಕರ್ನಾಟಕ ಕರಾವಳಿಯಲ್ಲಿ ಮಾತ್ರ ಇದೆ. ಮೀನುಗಾರಿಕಾ ಸಚಿವರು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ದನಿ ಆಗಿಲ್ಲ. ಪದೇ ಪದೇ ಭರವಸೆಗಳನ್ನು ಮಾತ್ರ ನೀಡ ಲಾಗುತ್ತಿದೆ. ಸೀಮೆಎಣ್ಣೆ ಬಿಡುಗಡೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. 4,000ಕ್ಕೂ ಅಧಿಕ ರಹದಾರಿ ಹೊಂದಿರುವ ನಾಡದೋಣಿಗಳಿಗೆ ಸೀಮೆಎಣ್ಣೆ ಬಿಡುಗಡೆಯಾಗಿಲ್ಲ. ಇದು ಯಾವುದೇ ಸರಕಾರ, ಜನಪ್ರತಿನಿಧಿಗಳ ವಿರುದ್ಧದ ಹೋರಾಟವಲ್ಲ; ಸರಕಾರದಿಂದ ಮೀನುಗಾರರಿಗೆ ದೊರೆಯುವ ಸೌಲಭ್ಯವನ್ನು ಸಮರ್ಪಕವಾಗಿ ನೀಡಬೇಕು ಎಂದು ಆಗ್ರಹಿಸುವ ಹೋರಾಟ. ಶಾಂತಿಯುತ ಹೋರಾಟಕ್ಕೆ ಸ್ಪಂದಿಸದಿದ್ದರೆ ಬೀದಿಗಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

ಮೀನುಗಾರರೇ ನಿರ್ಧರಿಸಲಿ
ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಗೌರವ ಸಲಹೆಗಾರ ಮದನ್‌ ಕುಮಾರ್‌ ಮಾತನಾಡಿ, ದೋಣಿಯ ಗಾತ್ರದಿಂದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರನ್ನು ಗುರುತಿಸುವುದಲ್ಲ. ಕುಲಕಸುಬುಗಳನ್ನು ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬಂದವರು ಸಾಂಪ್ರದಾಯಿಕ ನಾಡದೋಣಿ ಮೀನುಗಾರರು. ಅವರು ಇಂತಹುದೇ ದೋಣಿಯನ್ನು ಹೊಂದಿರ ಬೇಕೆಂದೇನಿಲ್ಲ. ಅಸಾಂಪ್ರದಾಯಿಕ ಮೀನುಗಾರಿಕೆ ನಿಲ್ಲಬೇಕು. ಮೀನು ಗಾರಿಕೆ ಉಳಿಯಬೇಕು. ಈ ಕುರಿತು ರಾಜಕೀಯ ಪಕ್ಷಗಳು ಗಮನ ಹರಿಸಬೇಕು. ಮೀನುಗಾರರು ಕೂಡ ಒಟ್ಟಾಗಿ ತಾವೇ ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

ತಪ್ಪಿಸಿಕೊಂಡ ಆಹಾರ ಇಲಾಖೆ
ಪ್ರತಿಭಟನ ಸ್ಥಳಕ್ಕೆ ಆಗಮಿಸಿ ಮೀನುಗಾರರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಮಾಜಿ ಶಾಸಕ ಕೆ.ರಘುಪತಿ ಭಟ್‌ ಅವರು, ಕಳೆದ ಬಾರಿ ಪ್ರತಿಭಟನೆ ನಡೆಸಿದ ಅನಂತರ ಸರಕಾರ ಮಾರ್ಚ್‌ವರೆಗೆ ಆಹಾರ ಇಲಾಖೆಯಿಂದ ನೀಡಲು ಆದೇಶ ಹೊರಡಿಸಿದೆ. ಎಪ್ರಿಲ್‌ನಿಂದ ಮೀನುಗಾರಿಕಾ ಇಲಾಖೆಯೇ ನೀಡಬೇಕು ಎಂಬ ಅಂಶ ಆದೇಶದಲ್ಲಿದೆ. ಹಾಗಾಗಿ ಮಾರ್ಚ್‌ ನಿಂದ ಆಹಾರ ಇಲಾಖೆ ಈ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತದೆ. ಮೀನುಗಾರಿಕೆ ಇಲಾಖೆ ಸೀಮೆಎಣ್ಣೆ ನೀಡಬೇಕಾದರೆ 2 ತಿಂಗಳುಗಳಿಗೆ ಹೆಚ್ಚುವರಿ 20 ಕೋ. ರೂ. ಮೀಸಲಿಡಬೇಕಿತ್ತು. ಇದನ್ನು ಬಜೆಟ್‌ನಲ್ಲಿ ಸರಕಾರ ಮೀಸಲಿಟ್ಟಿಲ್ಲ. ಈ ಕುರಿತು ಕೂಡಲೇ ಮೀನುಗಾರಿಕಾ ಸಚಿವರ ಮೇಲೆ ಒತ್ತಡ ತರಬೇಕಾಗಿದೆ. ಅವರು ಕೂಡ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತತ್‌ಕ್ಷಣ ಆದೇಶ ಹೊರಡಿಸಬೇಕು ಎಂದರು. 

ನಾಡದೋಣಿ ಮೀನುಗಾರರ ಸಂಘ ಬೈಂದೂರು ವಲಯದ ಅಧ್ಯಕ್ಷ ಸೋಮಶೇಖರ್‌, ಡೀಪ್‌ಸೀ ಟ್ರಾಲ್‌ಬೋಟ್‌ ಸಂಘದ ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ, ಬೇಸಗೆ ನಾಡದೋಣಿ ಮೀನುಗಾರರ ಸಂಘ ಮಲ್ಪೆ ವಲಯದ ಅಧ್ಯಕ್ಷ ಚಂದ್ರಕಾಂತ ಕರ್ಕೇರ, ಉಪಾಧ್ಯಕ್ಷ ಪ್ರವೀಣ್‌ ಶ್ರೀಯಾನ್‌, ಮಲ್ಪೆ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಜನಾರ್ದನ ತಿಂಗಳಾಯ, ಗಂಗೊಳ್ಳಿ ವಲಯ ನಾಡದೋಣಿ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ನೆಲಜಲ ಪರಿಸರ ವೇದಿಕೆಯ ಲತಾ ಶೆಟ್ಟಿ ಪಾಲ್ಗೊಂಡಿದ್ದರು.

60 ಬೋಟ್‌ಗಳ ಲೈಸನ್ಸ್‌ ರದ್ದು : ಡಿಸಿ 
ಪ್ರತಿಭಟನ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರು, ಅಸಾಂಪ್ರದಾಯಿಕ ರೀತಿಯ ಮೀನುಗಾರಿಕೆ ನಡೆಸುತ್ತಿದ್ದ 60 ಬೋಟ್‌ಗಳನ್ನು ವಶಕ್ಕೆ ಪಡೆದು ಅವುಗಳ ಪರವಾನಿಗೆ ರದ್ದು ಮಾಡಲಾಗಿದೆ, ಅವುಗಳ ಡೀಸೆಲ್‌ ಸಬ್ಸಿಡಿ ಕೂಡ ನಿಲ್ಲಿಸಲಾಗಿದೆ. ಜನರೇಟರ್‌ ಬಳಸಿ ಲೈಟ್‌ ಫಿಶಿಂಗ್‌ ಮಾಡುವ ದೋಣಿಗಳನ್ನು ಪೊಲೀಸರ ನೆರವಿನಿಂದ ವಶಕ್ಕೆ ಪಡೆದು ಕೊಳ್ಳಲಾಗುತ್ತಿದೆ. ಫೆಬ್ರವರಿ ತಿಂಗಳ ಸೀಮೆಎಣ್ಣೆ ಬಿಡುಗಡೆ ತಡವಾಗಿತ್ತು. ಜನವರಿಯ ಸೀಮೆಎಣ್ಣೆ ಕೂಡ ಮಾರ್ಚ್‌ನಲ್ಲೇ ಬಿಡುಗಡೆಯಾಗಿದೆ. ಅದನ್ನು ಈಗ ವಿತರಿಸಲಾಗುತ್ತಿದೆ. ಕೇಂದ್ರದಿಂದ ಸೀಮೆಎಣ್ಣೆ ನೀಡಿಲ್ಲ ಎಂಬುದಾಗಿ ಪೆಟ್ರೋಲಿಯಂ ಕಂಪೆನಿಗಳು ಹೇಳುತ್ತಿವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಜತೆ ಮಾತನಾಡುತ್ತೇನೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.