ಪ್ರಮೋದ್ ಗೊಂದಲ ಸೃಷ್ಟಿಸಿಲ್ಲ: ಕಾಂಗ್ರೆಸ್
Team Udayavani, Mar 25, 2018, 6:00 AM IST
ಉಡುಪಿ: ಬಿಜೆಪಿಗೆ ಹೋಗುವ ಅನಿವಾರ್ಯತೆ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಇಲ್ಲ. ಅವರು ಕಾಂಗ್ರೆಸ್ನಲ್ಲಿಯೇ ಇರುತ್ತಾರೆ. ಕಾಂಗ್ರೆಸ್ನಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಎಐಸಿಸಿ ಸದಸ್ಯ, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಅಮೃತ್ ಶೆಣೈ ಸ್ಪಷ್ಟಪಡಿಸಿದ್ದಾರೆ.
ಮಾ. 24ರಂದು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗ ಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಹೋಗುವುದಿಲ್ಲ ಎಂಬುದನ್ನು ಪ್ರಮೋದ್ ಅವರೇ ಮಾಧ್ಯಮಗಳಿಗೆ ಸ್ಪಷ್ಟ ಪಡಿಸಿದ್ದಾರೆ. ಅವರು ಬಿಜೆಪಿ ಬಾಗಿಲಿಗೆ ಹೋಗಿಲ್ಲ. ಹೋಗ ದಂತೆ ನಾವು ಕೂಡ ಬೀಗ ಹಾಕಿದ್ದೇವೆ. ಅವರೇ ನಮ್ಮ ಅಭ್ಯರ್ಥಿ. ಗೊಂದಲಗಳಿರುವುದು ಬಿಜೆಪಿಯಲ್ಲಿಯೇ ಹೊರತು ನಮ್ಮಲ್ಲಿ ಅಲ್ಲ. ಬಿಜೆಪಿಯವರು ಹೇಳುವಂತೆ ಸಚಿವರು ಕಾಂಗ್ರೆಸ್ಗೆ ಮೋಸ ಮಾಡಿಲ್ಲ. ಇತ್ತೀಚೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಅವರು ಪಡುಬಿದ್ರಿಗೆ ಭೇಟಿ ನೀಡಿದಾಗಲೂ ಪ್ರಮೋದ್ ಅವರೊಂದಿಗೆ ಪಾಲ್ಗೊಂಡಿದ್ದರು. ಕ್ಷೇತ್ರದ ಪ್ರತಿ ಬೂತ್ಗಳಿಗೂ ಎರಡು ಬಾರಿ ಭೇಟಿ ನೀಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್