ಹೆಬ್ರಿಯಲ್ಲಿ ತಲೆ ಎತ್ತಲಿದೆ ತಿಮ್ಮಕ್ಕ ಟ್ರೀ ಪಾರ್ಕ್‌


Team Udayavani, Apr 6, 2018, 7:00 AM IST

280318hbre2b.jpg

ಹೆಬ್ರಿ: ನೂತನ ತಾಲೂಕು ಆಗಿ ಘೋಷಣೆಯಾದ ಹೆಬ್ರಿಯಲ್ಲಿ ಸಸ್ಯ ಸಂಪತ್ತಿನ ಕಣಜ, ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಟ್ರೀ ಪಾರ್ಕ್‌ ನಿಮಾರ್ಣಗೊಳ್ಳುತ್ತಿದೆ.  

ಜನರಲ್ಲಿ ಸಸ್ಯ ಸಂಪತ್ತು ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯದ ವಿವಿಧೆಡೆ 27 ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣವಾಗಲಿದ್ದು, ಅದರಲ್ಲಿ  ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೆಬ್ರಿ ಅರಣ್ಯ ಇಲಾಖೆಯ ಕಚೇರಿ ಹೆಬ್ರಿ ವಲಯ ಅರಣ್ಯಾಧಿಕಾರಿ ಅವರ ಉಸ್ತುವಾರಿಯಲ್ಲಿ  ಪಾರ್ಕ್‌ ತಲೆ ಎತ್ತಲಿದೆ. 

2009ರಲ್ಲಿ ಉದ್ಯಾನವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದ್ದರೂ, ಯೋಜನೆ ಬಳಿಕ ನೆನೆಗುದಿಗೆ ಬಿದ್ದಿತ್ತು. ಬಳಿಕ ಗ್ರಾಮ ಅರಣ್ಯ ಸಮಿತಿ ವಿವಿಧ ಸ್ವಸಹಾಯ ಸಂಘಗಳ ಸದಸ್ಯರ ಜತೆಗೂಡಿ ಶ್ರಮದಾನ ನಡೆಸುತ್ತ ಯೋಜನೆಯನ್ನು ಚಾಲ್ತಿಯಲ್ಲಿರಿಸಿತ್ತು. 2016ರಲ್ಲಿ ಜಿ.ಪಂ.ಅನುದಾನದಲ್ಲಿ ಕುಡಿಯುವ ನೀರಿಗೆ ಬಾವಿ ನಿರ್ಮಾಣ, ಪಂಪ್‌ ಶೆಡ್‌,ಅರಣ್ಯ ಸಮಿತಿಯ ಆಶ್ರಯದಲ್ಲಿ ಎದುರಿನ ಆವರಣಗೊಡೆ ನಿರ್ಮಾಣವಾಗಿತ್ತು. ಈಗ ಅದೇ ಸ್ಥಳ ಅರಣ್ಯ ಇಲಾಖೆ ಮೂಲಕ ತಿಮ್ಮಕ್ಕ ಟ್ರೀಪಾರ್ಕ್‌ ಆಗಿ ರೂಪುಗೊಳ್ಳಲಿದೆ. 
 
ಪಾರ್ಕ್‌ನಲ್ಲಿ ಏನೇನಿವೆ? 
ಆಕರ್ಷಕ ಮಹಾದ್ವಾರ ,ಪಕ್ಷಿ ವೀಕ್ಷಣೆ ಪಥ, ನೈಸರ್ಗಿಕ ಪಥ, ಔಷಧ ಸಸ್ಯಗಳ ವನ, ಪಾರ್ಕಿಂಗ್‌ ವ್ಯವಸ್ಥೆ, ಟಿಕೆಟ್‌ ಕೌಂಟರ್‌, ವಾಚ್‌ಮ್ಯಾನ್‌ ಶೆಡ್‌, ಪಾರಾಗೋಲಾ, ರಾತ್ರಿಗೆ ವರ್ಣರಂಜಿತ ಬೆಳಕು, ಟೆಂಟ್‌ ಹೌಸ್‌, 1600 ಮೀಟರ್‌ ಉದ್ದದ ಸಣ್ಣ ಮತ್ತು ದೊಡ್ಡದಾದ ಎರಡು ವಾಕಿಂಗ್‌ ಟ್ರಾÂಕ್‌, ಪ್ರಾಕೃತಿಕ ವನ , ಪ್ರವಾಸಿಗರಿಗೆ ಕುಳಿತುಕೊಳ್ಳಲು ಬೆಂಚ್‌ಗಳು, ವಾಯು ವಿಹಾರದ ರಸ್ತೆ ಹಾಗೂ ಅಲ್ಲಲ್ಲಿ ಕುಳಿತು ವಿಶ್ರಾಂತಿ ಪಡೆಯಲು ಅತ್ಯಂತ ಆಕರ್ಷಣೀಯ ಗೋಪುರ ಮಾದರಿಯ ಸಭಾಂಗಣ, ವೀಕ್ಷಣಾ ಗೋಪುರ, ಮುಕ್ತ ಸಭಾಂಗಣ ಪಕ್ಷಿಗಳ ವೀಕ್ಷಣೆ ಸ್ಥಳ ಸಹಿತ ವಿವಿಧ ಸೌಲಭ್ಯಗಳು ಇರಲಿವೆ. ಮುಂದಿನ ಐದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
  
ಮೂಲಸೌಕರ್ಯ
ಪುರುಷ, ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪಾರ್ಕಿಂಗ್‌ ವ್ಯವಸ್ಥೆ ಈಗಾಗಲೇ ಪೂರ್ಣಗೊಂಡಿದೆ. ಯಾವುದೇ ಇತರ ಚಟುವಟಿಕೆಗಳಿಗೆ ಅವಕಾಶವಿಲ್ಲದಂತೆ ನಿರ್ವಹಣೆಗೆ ಸಿಬ್ಬಂದಿ ನೇಮಿಸಿ ಕಟ್ಟೆಚ್ಚರ ವಹಿಸಲಾಗುತ್ತಿದ್ದು ಸ್ವತ್ಛತೆಗೆ ವಿಶೇಷ ಆದ್ಯತೆ ನೀಡಲಾತ್ತದೆ. ಉದ್ಯಾನವನ ಪ್ರವೇಶಿಸುವಲ್ಲಿ ಕೌಂಟರ್‌ ತೆರೆಯಲಾಗುತ್ತಿದ್ದು ನಿರ್ವಹಣೆಗಾಗಿ ಹೆಬ್ರಿ ವಲಯ ಅರಣ್ಯ ಸಮಿತಿಗೆ ಜವಬ್ದಾರಿ ನೀಡಲಾಗಿದೆ.

600 ಗಿಡಗಳ ನಾಟಿ
ಪ್ರಕೃತಿ ಸೊಬಗಿನ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಟ್ರೀ ಪಾರ್ಕ್‌ ನಿರ್ಮಾಣಗೊಳ್ಳುತ್ತಿದೆ.  ಮೀಸಲು ಅರಣ್ಯದ ಯಾವುದೇ ಗಿಡ-ಮರಗಳಿಗೆ ಹಾನಿ ಮಾಡದೇ ಸಸ್ಯ ರಾಶಿಗಳ ಮಧ್ಯೆ ಮಳೆಗಾಲದಲ್ಲಿ ಔಷಧೀಯ ಸಸ್ಯಗಳು ಸೇರಿದಂತೆ ಸುಮಾರು 600 ಗಿಡಗಳನ್ನು ನೆಡುವ ಉದ್ದೇಶವನ್ನು ಹೆಬ್ರಿ ಅರಣ್ಯ ಇಲಾಖೆ ಹೊಂದಿದೆ. ಬಣ್ಣಬಣ್ಣದ ಹೂವು ಹಾಗೂ ಪಶ್ಚಿಮ ಘಟ್ಟದ ಅಮೂಲ್ಯ ಮರಗಳನ್ನು ಬೆಳೆದು ಸುಂದರ ಉದ್ಯಾನವನ ಸ್ಥಾಪಿಸಲಾಗುತ್ತಿದೆ.

2019ಕ್ಕೆ ಕಾಮಗಾರಿ ಪೂರ್ಣ
ಮೊದಲ ಹಂತ ಕಾಮಗಾರಿ 2019ರ ಮಾರ್ಚ್‌ ವೇಳೆಗೆ  ಪೂರ್ಣವಾಗಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮಳೆಗಾಲದಲ್ಲಿ ಹೂ ಗಿಡಗಳು, ಔಷದೀಯ ಸಸ್ಯಗಳನ್ನು ನೆಡಲಾಗುವುದು. ಮುಂದಿನ ಐದು ವರ್ಷದಲ್ಲಿ ಪೂರ್ಣ ಪ್ರಮಾಣದ ವೃಕ್ಷೋದ್ಯಾನವನ ಸಿದ್ಧಗೊಳ್ಳಲಿದೆ.
– ಸುಬ್ರಹ್ಮಣ್ಯ ಆಚಾರ್ಯ
ವಲಯ ಅರಣ್ಯ ಅಧಿಕಾರಿ, ಹೆಬ್ರಿ

ಕೊರತೆ ನೀಗಿದೆ
ಈಗಾಗಲೇ ಕೂಡ್ಲು ತೀರ್ಥ,ಜೋಮ್ಲು ತೀರ್ಥ,ವರಂಗ ಕೆರೆ ಬಸದಿ ಮೂಲಕ ಪ್ರವಾಸಿತಾಣವಾಗಿ ಗುರುತಿಸಿಕೊಂಡ ಹೆಬ್ರಿಯಲ್ಲಿ ವೃಕ್ಷೋದ್ಯಾನವನದ ಕೊರತೆಯಿತ್ತು . ಅದು ನಿರಂತರ ಪ್ರಯತ್ನದ ಮೂಲಕ ಪೂರ್ಣ ಗೊಂಡಿದೆ. 
– ಜಯಕರ ಪೂಜಾರಿ
ಅಧ್ಯಕ್ಷರು, ಗ್ರಾಮ ಅರಣ್ಯ ಸಮಿತಿ

– ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.