ಪೊಲೀಸ್‌ ಪ್ರಸ್ತಾವನೆ, ತಾಂತ್ರಿಕ ತಜ್ಞರ ವರದಿ ಕಡತಕ್ಕೆ  ಸೀಮಿತವೇ?


Team Udayavani, Apr 9, 2018, 6:40 AM IST

040418Astro03.jpg

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಜಿಲ್ಲೆಯ ಅಪಾಯಕಾರಿ ಜಂಕ್ಷನ್‌ಗಳ ಬಗ್ಗೆ ಮಣಿಪಾಲದ ಖಾಸಗಿ ಎಂಜಿನಿಯರಿಂಗ್‌ ಸಂಸ್ಥೆಯ ತಜ್ಞರ ಮೂಲ ಸಿದ್ಧಪಡಿಸಿದ ವರದಿ ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವರದಿ ಕಡತಕ್ಕೆ ಮಾತ್ರ ಸೀಮಿತವಾಗುವುದೇ? ಎನ್ನುವ ಜಿಜ್ಞಾಸೆ ಹುಟ್ಟಿಕೊಂಡಿದೆ.

ಹೆದ್ದಾರಿ ಪ್ರಾಧಿಕಾರ ಮೂಲಕ ಖಾಸಗಿ ಸಂಸ್ಥೆ ಗುತ್ತಿಗೆ ವಹಿಸಿ ಕಾಮಗಾರಿ ನಡೆಸುತ್ತಿದೆ. ಜಂಕ್ಷನ್‌ಗಳಲ್ಲಿ ನಡೆದ ಕಾಮಗಾರಿಗಳು ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಂಟಕವಾಗಿದೆ ಎನ್ನುವುದನ್ನು 24 ಪುಟಗಳ ವರದಿಯಲ್ಲಿ ಹೇಳಲಾಗಿದೆ. ಈ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಿ ಜಂಕ್ಷನ್‌ಗಳಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಬೇಕು ಎನ್ನುವುದು ಪೊಲೀಸ್‌ ಇಲಾಖೆಯ ಇರಾದೆ.
 
ಹೆಚ್ಚಿದ ವಾಹನದೊತ್ತಡ
ಸಂತೆಕಟ್ಟೆ, ಅಂಬಲಪಾಡಿ, ಕಟಪಾಡಿ, ಉದ್ಯಾವರ ಈ ನಾಲ್ಕು ಜಂಕ್ಷನ್‌ಗಳಲ್ಲಿ ಹೆಚ್ಚಿನ ವಾಹನಗಳು ಒಳ ರಸ್ತೆಗಳಿಂದ ಬಂದು ರಾ.ಹೆ.ಯನ್ನು ಸಂಪರ್ಕಿಸುತ್ತವೆ. ಇಲ್ಲಿ ವಾಹನ ದಟ್ಟಣೆ ಬಹಳ ಹೆಚ್ಚಿದೆ. ದಿನವಿಡೀ ಪೊಲೀಸರು ಜಂಕ್ಷನ್‌ಗಳಲ್ಲಿ ಕಾರ್ಯನಿರ್ವಹಿಸಬೇಕಾದ ಅನಿವಾರ್ಯವಿದೆ.  ಒಂದು ವೇಳೆ ಇಲ್ಲಿ ಪೊಲೀಸರು ಇಲ್ಲದಿದ್ದರೆ ಟ್ರಾಫಿಕ್‌ ಜಾಂ ಉಂಟಾಗುತ್ತದೆ.

ಸರ್ವಿಸ್‌ ರಸ್ತೆ ಸದುಪಯೋಗವಾಗಲಿ
ಪ್ರಮುಖ ಜಂಕ್ಷನ್‌ಗಳಲ್ಲಿ ಸರ್ವಿಸ್‌ ರಸ್ತೆಗಳನ್ನು ಮಾಡಲಾಗಿದೆ. ಆದರೆ ಈ ರಸ್ತೆಗಳು ಸೂಕ್ತ ಉದ್ದೇಶಕ್ಕೆ ಬಳಕೆಯೇ ಆಗುತ್ತಿಲ್ಲ. ರಸ್ತೆಯಲ್ಲಿ  ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ. ಆಟೋ, ಟ್ಯಾಕ್ಸಿ ನಿಲ್ದಾಣವಾಗಿ, ಅಂಗಡಿ ಮಾಲಕರು, ಗ್ರಾಹಕರ ವಾಹನಗಳ ಪಾರ್ಕಿಂಗ್‌  ತೆಕ್ಕಟ್ಟೆ, ಸಾಲಿಗ್ರಾಮ, ಉದ್ಯಾವರ, ಪಾಂಗಾಳದಲ್ಲಿ ಒಳರಸ್ತೆಗಳು ನೇರವಾಗಿ ಹೆದ್ದಾರಿಯನ್ನು ಸಂಪರ್ಕಿಸುತ್ತವೆ. ಆದರೆ ಇಲ್ಲಿ ಸರ್ವಿಸ್‌ ರಸ್ತೆಗಳೇ ಆಗಿಲ್ಲ. ಇಲ್ಲಿಯೂ ಸರ್ವೀಸ್‌ ರಸ್ತೆ ಮಾಡಬೇಕು ಎನ್ನುವ ಅಂಶ ವರದಿಯಲ್ಲಿದೆ.

ವರದಿಯ ಅನ್ವಯ ಹೀಗೆ ಮಾಡಬೇಕು
–  ಬಸ್‌ ನಿಲುಗಡೆಗೆ ಬಸ್‌ ಬೇ ನಿರ್ಮಿಸಬೇಕು.
– ಜಂಕ್ಷನ್‌ಗೆ ಸಮೀಪವಿರುವ ಬಸ್‌ ನಿಲ್ದಾಣಗಳನ್ನು 100 ಮೀ. ದೂರಕ್ಕೆ ಸ್ಥಳಾಂತರಿಸಬೇಕು.
–  ಜೀಬ್ರಾ ಕ್ರಾಸ್‌ ಮತ್ತು ದೊಡ್ಡದಾದ ಸೂಚನಾ ಫ‌ಲಕ ಅತ್ಯಗತ್ಯ.
–  ಜಂಕ್ಷನ್‌ ಇರುವಲ್ಲಿ ಸರ್ವಿಸ್‌ ರಸ್ತೆಗಳು ಅಗತ್ಯವಾಗಿ ಆಗಬೇಕು.
–  ನಿರ್ಮಾಣವಾಗಿರುವ ಸರ್ವೀಸ್‌ ರಸ್ತೆಗಳಲ್ಲಿ ವಾಹನ ಪಾರ್ಕ್‌ ತೆರವು ಮಾಡಬೇಕು.
–  ಜಂಕ್ಷನ್‌ ರಸ್ತೆಯಲ್ಲಿ ರಾತ್ರಿ ವೇಳೆ ಹೆಚ್ಚು ಬೆಳಕಿನ ವ್ಯವಸ್ಥೆ ಮಾಡಬೇಕು.

ಡೇಂಜರಸ್‌ ಜಂಕ್ಷನ್‌ಗಳು
ಪಡುಬಿದ್ರಿ, ಕಾಪು, ಇನ್ನಂಜೆ (ಪಾಂಗಾಳ), ಕಟಪಾಡಿ, ಉದ್ಯಾವರ, ಅಂಬಲಪಾಡಿ, ಉಡುಪಿ ಕರಾವಳಿ, ಬಾಳಿಗಾ ಫಿಶ್‌ನೆಟ್‌ ಕ್ರಾಸ್‌, ಆಶೀರ್ವಾದ್‌, ಸಂತೆ ಕಟ್ಟೆ, ಮಹೇಶ್‌ ಆಸ್ಪತ್ರೆ ಕ್ರಾಸ್‌, ಬ್ರಹ್ಮಾವರ ಆಕಾಶವಾಣಿ, ಸಾಲಿ ಗ್ರಾಮ-ಗುಂಡ್ಮಿ, ಗುರು ನರಸಿಂಹ ಟೆಂಪಲ್‌, ತೆಕ್ಕಟ್ಟೆ, ಜಂಕ್ಷನ್‌ಗಳು ಅಪಾಯಕಾರಿಯಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

3 ವರ್ಷ- 402 ಸಾವು
ರಾ.ಹೆ. 66ರಲ್ಲಿ  ಹೆಜಮಾಡಿ ಯಿಂದ ತೆಕ್ಕಟ್ಟೆ ವರೆಗೆ 2015-17 ಅವಧಿಯಲ್ಲಿ  1,630 ಅಪಘಾತಗಳು ಸಂಭವಿಸಿವೆ. ಇದರಲ್ಲಿ  402 ಮಂದಿ ಮೃತಪಟ್ಟರೆ, 368 ಮಂದಿ ಗಂಭೀರ ಗಾಯ ಗೊಂಡವರೂ ಸೇರಿ 1,803 ಮಂದಿ ಗಾಯಗೊಂಡಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ.

ಸ್ಕೈವಾಕರ್‌ ಪ್ರಸ್ತಾವನೆಯೂ ನನೆಗುದಿಗೆ?
ರಾ.ಹೆ. 66ರ ಹೆಜಮಾಡಿಯಿಂದ ಬೈಂದೂರಿನವರೆಗಿನ ವರದಿ ತಯಾರಿಸಿ ಒಟ್ಟು 24 ಕಡೆಗಳಲ್ಲಿ ಪಾದಚಾರಿ ಮೇಲ್ಸೇತುವೆ (ಸ್ಕೈವಾಕರ್‌) ನಿರ್ಮಾಣ ಮಾಡಬೇಕು ಎನ್ನುವ ಪ್ರಸ್ತಾವನೆಯನ್ನು ಹಿಂದಿನ ಎಸ್‌ಪಿ ಡಾ| ಸಂಜೀವ ಎಂ. ಪಾಟೀಲ್‌ ಅವರು ಕಳೆದ ಅಕ್ಟೋಬರ್‌ನಲ್ಲಿಯೇ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಕೆ ಮಾಡಿದ್ದರು. ಆದರೆ ಆ ವರದಿ ಕೂಡ ಕಡತದಲ್ಲಿದೆ. ಜಾರಿಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಫಾಲೋಅಪ್‌ ಮಾಡ್ತೇವೆ
ರಸ್ತೆ ಸುರಕ್ಷೆ ಸಂಬಂಧ ಖಾಸಗಿ ಸಂಸ್ಥೆ ನೀಡಿದ ವರದಿಯನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ.  ಸದ್ಯ ಚುನಾವಣೆ ಒತ್ತಡಗಳಿವೆ. ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿಕೊಂಡು ರಾ.ಹೆ. ಪ್ರಾಧಿಕಾರದ ಅಧಿಕಾರಿಗಳ ಸಭೆ ಕರೆದು ಫಾಲೋ ಅಪ್‌ ಮಾಡಲಾಗುವುದು.
-ಲಕ್ಷ್ಮಣ ಬ. ನಿಂಬರಗಿ,  
ಉಡುಪಿ ಎಸ್‌ಪಿ

ಚಿತ್ರ: ಆಸ್ಟ್ರೋ ಮೋಹನ್‌

– ಚೇತನ್‌ ಪಡುಬಿದ್ರಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.