ಸೀತಾನದಿ ಹರಿದರೂ ಹೆಬ್ರಿಯಲ್ಲಿ ನೀರಿಗೆ ಬರ


Team Udayavani, Apr 11, 2018, 6:00 AM IST

1.jpg

ಹೆಬ್ರಿ: ಏರುತ್ತಿರುವ ಬಿಸಿಲಿನ ಬೇಗೆ ಹೆಬ್ರಿಗೆ ತೀವ್ರ ನೀರಿನ ಅಭಾವ ಸೃಷ್ಟಿಸಿದೆ. ಹೆಬ್ರಿ ಗ್ರಾ.ಪಂ. ವ್ಯಾಪ್ತಿಯ ಬಚ್ಚಪ್ಪು ಹಾಗೂ ಬಂಗಾರುಗುಡ್ಡೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದ್ದು, ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಗಿದೆ. 

ಸೀತಾನದಿಗೆ ಪಂಪ್‌!
ಹೆಬ್ರಿಯ ನೀರಿನ ಮೂಲ ಸೀತಾನದಿ. ಗ್ರಾಮದ ಕೆಲವು ಭಾಗಗಳಲ್ಲಿ ನೀರಿನ ಮೂಲ ಕಡಿಮೆಯಾಗುತ್ತಿದ್ದರೂ, ಇಲ್ಲಿನ ಜನ ಸೀತಾನದಿಗೆ ಪಂಪ್‌ ಅಳವಡಿಸಿ ಅವ್ಯಾಹತವಾಗಿ ನೀರು ತೆಗೆಯುತ್ತಿದ್ದಾರೆ. ಕೂಡ್ಲುವಿನಿಂದ ಕುಚ್ಚಾರು ತನಕ ಸುಮಾರು 110 ಪಂಪ್‌ ಸೆಟ್‌ ಅಳವಡಿಸಲಾಗಿದ್ದು, ದಿನವೀಡೀ ನೀರನ್ನು ತಮ್ಮ ಕೃಷಿ ಕಾರ್ಯಕ್ಕೆ, ಇತರ ಕೆಲಸಕ್ಕೆ ಉಪಯೋಗಿಸುತ್ತಿದ್ದಾರೆ. ಇದರಿಂದ ನೀರಿನ ಸೆಲೆ ಬತ್ತಿ ಹೋಗುತ್ತಿದ್ದು, ನೀರು ಇಲ್ಲದ ಕಡೆಗಳಲ್ಲಿ ಮತ್ತಷ್ಟು ಆತಂಕ ತಂದಿದೆ.  

 ಬಹುಗ್ರಾಮ ಯೋಜನೆ ವಿಳಂಬ 
ಹೆಬ್ರಿಯ ಸುಮಾರು 345 ಮನೆಗಳಿಗೆ ನಲ್ಲಿಗಳ ಮೂಲಕ ನೀರು ಪೂರೈಕೆಯಾಗುತ್ತಿವೆ. ನೀರಿನ ಅಭಾವ ಇದ್ದ ಗ್ರಾಮದ ಕೆಲ ಭಾಗಗಳು ಮತ್ತು ಸುತ್ತಲಿನ ಇತರ 5 ಗ್ರಾಮ ಪಂಚಾಯತ್‌ ವ್ಯಾಪ್ತಿಯ 1400 ಮನೆಗಳಿಗೆ ನೀರು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಮ್ಮಿಕೊಳ್ಳಲಾಗಿದೆ. ಆದರೆ 2006ರಲ್ಲಿ ಆರಂಭಗೊಂಡ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. 5 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಅಣೆಕಟ್ಟು ಕಾಮಗಾರಿ ಮುಕ್ತಾಯವಾಗಿದೆ. 2ನೇ ಹಂತದ ಕಾಮಗಾರಿಗೆ ಈಗಷ್ಟೇ ಚಾಲನೆ ಸಿಕ್ಕಿದೆ. ಬೇಸಗೆಯ ನೀರಿನ ಅಲಭ್ಯತೆ ಬಗೆಹರಿಸಲೆಂದೇ ಈ ಯೋಜನೆ ಮಂಜೂರಾಗಿದ್ದರೂ, ಯೋಜನೆ ಕುಂಟುತ್ತಾ ಸಾಗಿದೆ. ಈ ಯೋಜನೆ ಆದಷ್ಟು ಬೇಗ ಪೂರ್ಣಗೊಂಡಲ್ಲಿ ಹೆಬ್ರಿ ಪಂಚಾಯತ್‌ನ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ.  

ಶುದ್ಧ ಕುಡಿಯುವ ನೀರು ನಮ್ಮ ಹಕ್ಕು 
ಶುದ್ಧ ಕುಡಿಯುವ ನೀರಿನ ಅಲಭ್ಯತೆ ಇರುವುದರಿಂದ ಪ್ರತಿ ಗ್ರಾಮ ಮಟ್ಟದಲ್ಲಿ ನೀರು ನೈರ್ಮಲ್ಯ ಸಮಿತಿಗಳು ರಚನೆಯಾಗಬೇಕಿದೆ. ಇದರ ಹಿನ್ನೆಲೆಯಲ್ಲಿ ಪ್ರತಿ 15 ದಿನಕ್ಕೊಮ್ಮೆ ಸಭೆ ಸೇರಿ ಶುದ್ಧ ನೀರು, ನೈರ್ಮಲ್ಯದ ಬಗ್ಗ ಚರ್ಚಿಸುವ ಅಗತ್ಯವಿದೆ. 

ರೈತರಿಗೆ ಸೂಚನೆ
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಸುಮಾರು 5.5ಕೋಟಿ ವೆಚ್ಚದ 2ನೇ ಹಂತದ ಕಾಮಗಾರಿಗೆ ಚಾಲನೆ ದೊರೆತಿದೆ. ಆದರೆ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು ನದಿಗೆ ಅಳವಡಿಸಿದ ಪಂಪ್‌ಗ್ಳನ್ನು ಬೆಳಗ್ಗೆ 6ರಿಂದ 2ಗಂಟೆಯ ತನಕ ಮಾತ್ರ ಬಳಸುವಂತೆ ಮೆಸ್ಕಾಂ ಮೂಲಕ ರೈತರಿಗೆ ಸೂಚನೆ ನೀಡಲಾಗಿದೆ.
ವಿಜಯಾ,  ಪಿ.ಡಿ.ಒ., ಗ್ರಾ.ಪಂ. ಹೆಬ್ರಿ

 ಉದಯಕುಮಾರ್‌ ಶೆಟ್ಟಿ ಹೆಬ್ರಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.