ರಾಜೇಶ್ವರಿ ಶೆಟ್ಟಿಗೆ ಸುಪ್ರೀಂ ಕೋರ್ಟ್ ಜಾಮೀನು
Team Udayavani, Apr 24, 2018, 11:53 AM IST
ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಗೆ ಇರುವ 36 ಪ್ರಮುಖ ಸಾಕ್ಷಿಗಳ ವಿಚಾರಣೆ ಶೀಘ್ರವಾಗಿ ನಡೆಸಿದ ಅನಂತರದಲ್ಲಿ ರಾಜೇಶ್ವರಿಯನ್ನು ಜೈಲಿನಿಂದ ಬಿಡುಗಡೆಗೊಳಿಸಬಹುದು ಎನ್ನುವ ಷರತ್ತನ್ನು ಸುಪ್ರೀಂ ಕೋರ್ಟ್ ವಿಧಿಸಿದೆ.
ವಿಚಾರಣೆಗೆ ಹಲವು ಸಮಯ ತಗಲುವ ಕಾರಣ ಜಾಮೀನು ಮಂಜೂರಾದರೂ ಸದ್ಯಕ್ಕೆ ರಾಜೇಶ್ವರಿ ಜೈಲಿನಿಂದ ಬಿಡುಗಡೆ ಆಗುವುದಿಲ್ಲ. ವಿಚಾರಣೆ ಯಾದ ಬಳಿಕ ಅವರಿಗೆ ಬಿಡುಗಡೆಯಾಗಲಿದೆ.