“ಒಂದು ಓಟು ಕೂಡ ಹಾಳು ಮಾಡೋದಿಲ್ಲ, ನಾವು ರೆಡಿ’
Team Udayavani, May 6, 2018, 6:25 AM IST
ಉಡುಪಿ: ಇಲ್ಲಿನ ರಾಜಕೀಯ ಆಡುಂಬೊಲ ಎಂಬಂಥ ಪ್ರದೇಶಗಳಲ್ಲಿ ಒಂದಾಗಿರುವ ಉಪ್ಪೂರಿನ ಮತದಾರರು ಮತದಾನದ ದಿನಕ್ಕಾಗಿ ಕಾಯುತ್ತಿದ್ದಾರೆ ಎಂಬುದು ಉಪ್ಪೂರು ತೆಂಕಬೆಟ್ಟಿನ ಹಿರಿಯ ವ್ಯಾಪಾರಿ ಕೃಷ್ಣ ನಾಯಕ್ ಅವರ ಮಾತುಗಳಿಂದಲೇ ವೇದ್ಯವಾಯಿತು.
“ಇಲ್ಲಿಯವರು ಹಿಂದಿನಿಂದಲೂ ಹಾಗೆಯೇ. ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕುತ್ತಾರೆ. ಬೆಳಗ್ಗೆ 7 ಗಂಟೆಗೇ ರೆಡಿಯಾಗ್ತಾರೆ. ಕೂಲಿಗೆ ಹೋಗುವವರು ಕೂಡ ಓಟ್ ಹಾಕಿಯೇ ಹೋಗುತ್ತಾರೆ. ಪರವೂರಿನಲ್ಲಿರುವವರು ಮಾತ್ರ ಓಟು ಹಾಕದಿರಬಹುದಷ್ಟೆ’ ಎನ್ನುತ್ತಾರೆ ಅವರು. ಈ ಭಾಗದಲ್ಲಿ ಕೃಷಿಕರು ಇದ್ದಾರೆ. ಗೇರು ಬೀಜ ಫ್ಯಾಕ್ಟರಿಯೂ ಇದೆ. ನಗರಕ್ಕೆ ಕೆಲಸಕ್ಕೆ ಹೋಗುವ ಯುವಕರು ಕೂಡ ಅನೇಕರಿದ್ದಾರೆ. ಉಪ್ಪೂರು ಪರಿಸರ ರಾಜಕೀಯವಾಗಿ ಹೆಚ್ಚು ಜಾಗೃತವಾಗಿರುವುದು ಸ್ಪಷ್ಟವಾಗುತ್ತದೆ.
ಓಟು ಕೇಳಲು ಯಾರೂ ಬಂದಿಲ್ಲ
ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಲಕ್ಷ್ಮೀನಗರ ನಾರ್ನಾಡ್ನ ಪದ್ಮಾ ಅವರಿಗೂ ಮತದಾನದ ಉತ್ಸಾಹವಿದೆ. “ನಾವು ಮನೆಯಲ್ಲಿ ನಾಲ್ಕು ಮಂದಿ ಇದ್ದೇವೆ. ಎಲ್ಲರೂ ಓಟು ಹಾಕುತ್ತೇವೆ. ಬೇಗ ಓಟು ಹಾಕಿ ಅನಂತರ ಕೆಲಸಕ್ಕೆ ಹೋಗುತ್ತೇನೆ. ನಮ್ಮ ಮನೆಗೆ ಇದುವರೆಗೆ ಓಟು ಕೇಳಲು ಯಾರೂ ಬಂದಿಲ್ಲ’ ಎನ್ನುತ್ತಾರೆ ಪದ್ಮಾ.
ಚುನಾವಣೆಗೆ ಸಿದ್ಧ
ನಮ್ಮೂರಿನಲ್ಲಿ ಅಂತಹ ಸಮಸ್ಯೆ ಇಲ್ಲ. ಈ ಬಾರಿ ಕುಡಿಯುವ ನೀರು ಕೂಡ ಪಂಚಾಯತ್ನಿಂದ ದೊರೆಯುತ್ತಿದೆ. ನಮ್ಮೂರಿನ ಜನ ಚುನಾವಣೆಗೆ ಸಿದ್ಧರಾಗಿದ್ದಾರೆ ಎನ್ನುತ್ತಾರೆ ಗುತ್ತಿಗೆದಾರರೊಂದಿಗೆ ಕೆಲಸ ಮಾಡುತ್ತಿರುವ ಹಾವಂಜೆಯ ಸುರೇಶ್ ಅವರು.
ಇವರದ್ದು ಸದ್ದಿಲ್ಲದ ಜಾಗೃತಿ
ಕೊಳಲಗಿರಿ ಪರಿಸರದಲ್ಲಿ 1994ರಿಂದಲೂ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ರೇಖಾ ಜಿ. ಮರಾಠೆಯವರು ಮತದಾರರನ್ನು ಜಾಗೃತಿಗೊಳಿಸುವ ಕೆಲಸವನ್ನು ಸದ್ದಿಲ್ಲದೆ ಮಾಡುತ್ತಿದ್ದಾರೆ. ಸಮೀಕ್ಷೆಯಲ್ಲಿ ತೊಡಗಿದ್ದ ಉದಯವಾಣಿ ಪ್ರತಿನಿಧಿಗಳಿಗೆ ಎದುರಾದ ರೇಖಾ ಆಗ ತಾನೇ ಓರ್ವ ವಿಶಿಷ್ಟಚೇತನ, ಕಾರ್ತಿಬೈಲಿನ ಅನಿಲ್ ಡಿ’ಸೋಜಾ ಎಂಬವರ ಮನೆಗೆ ತೆರಳಿ ಮತ ಹಾಕುವಂತೆ ಕೋರಿ ವಾಪಸಾಗಿದ್ದರು. “ನಾನು ಅನಿಲ್ ಅವರನ್ನು ಮಾತನಾಡಿಸಿದೆ. ಅವರಿಗೆ ಮತಕೇಂದ್ರಕ್ಕೆ ಹೋಗಲು ಪಂಚಾಯತ್ ವ್ಯವಸ್ಥೆ ಕೂಡ ಕಲ್ಪಿಸುತ್ತದೆ ಎಂದು ತಿಳಿಸಿದೆ. ಅದಕ್ಕೆ ಖುಷಿಪಟ್ಟು ನನ್ನನ್ನು ಕರೆದುಕೊಂಡು ಹೋಗುವುದಿದ್ದರೆ ಹೋಗುತ್ತೇನೆ ಎಂದ. ನಾನು ಯಾರಿಗೂ ಇಂತಹದೇ ಪಕ್ಷಕ್ಕೆ ಮತ ಹಾಕಿ ಎಂದು ಹೇಳುವುದಿಲ್ಲ. ಆದರೆ ಮತದಾನ ಮಾಡಲೇಬೇಕು ಎಂದು ಜಾಗೃತಿ ಮೂಡಿಸುತ್ತಿದ್ದೇನೆ. ನನಗೆ ಎಲ್ಲ ಪಕ್ಷಗಳ ಒಡನಾಟವಿದೆ’ ಎಂದರು ರೇಖಾ.
ಯುವಕರು ಸಿದ್ಧ
ಮರಳು ಸಮಸ್ಯೆ ಇದೆ.ಇತರ ಕೆಲವು ಸಮಸ್ಯೆಗಳು ಕೂಡ ಇವೆ.ಯುವಕರಲ್ಲಿ ರಾಜಕೀಯದ ವಿಚಾರಗಳು ಹೆಚ್ಚು ಚರ್ಚೆಯಾಗುತ್ತಿದೆ. ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಿದ್ದೇವೆ. ಕಳೆದ ಬಾರಿಗಿಂತ ಈ ಬಾರಿ ಪೈಪೋಟಿ ಇದೆ.
– ಹರೀಶ್, ರಿಕ್ಷಾ ಚಾಲಕ ಕೆ.ಜಿ.ರೋಡ್ ರಿಕ್ಷಾ ನಿಲ್ದಾಣ
ಯುವಕರು ಸಿದ್ಧ
“ನೀರಿನ ಸಮಸ್ಯೆ ಇದೆ. ಆದರೆ ಅದು ಮಾಮೂಲು. ಅದನ್ನು ಅಷ್ಟು ಸುಲಭವಾಗಿ ಪರಿಹರಿಸಲಾಗದು. ಹಾಗಂತ ಯಾರು ಕೂಡ ಓಟು ಹಾಕದೆ ಇರುವುದಿಲ್ಲ. ಒಂದೇ ಒಂದು ಓಟು ಹಾಳು ಮಾಡುವುದಿಲ್ಲ’
– ರಂಗನಾಥ್, ಅಮ್ಮುಂಜೆ ಸಾಲ್ಮರ
– ಸಂತೋಷ್ ಬೊಳ್ಳೆಟ್ಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ