ಮೋದಿ ಕಾರ್ಯಕ್ರಮ ರದ್ದುಗೊಳಿಸಿ: ಕಾಂಗ್ರೆಸ್
Team Udayavani, Apr 30, 2018, 9:39 AM IST
ಉಡುಪಿ: ಮೋದಿ ಉಡುಪಿ ಪ್ರಚಾರ ಸಭೆಗೆ ವೇದಿಕೆ ನಿರ್ಮಿಸಲು ಪೆಂಡಾಲ್ ಸಾಮಗ್ರಿ ತರುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಮೂವರು ಕಾರ್ಮಿಕರು ಮೃತಪಟ್ಟಿರುವ ನೆಲೆಯಲ್ಲಿ ಬಿಜೆಪಿ ಸಮಾವೇಶವನ್ನು ರದ್ದುಪಡಿಸು ವಂತೆ ಕಾಂಗ್ರೆಸ್ ಆಗ್ರಹಿಸಿದೆ. ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜನಾರ್ದನ ತೋನ್ಸೆ ಅಧ್ಯಕ್ಷತೆಯಲ್ಲಿ ರವಿವಾರ ಜರಗಿದ ಜಿಲ್ಲಾ ಕಾಂಗ್ರೆಸ್ ತುರ್ತು ಸಭೆಯಲ್ಲಿ ಮೋದಿ ಕಾರ್ಯಕ್ರಮ ರದ್ದುಪಡಿಸುವುದೇ ಇದಕ್ಕೆ ಪರಿಹಾರವೆಂದು ಅಭಿಪ್ರಾಯ ವ್ಯಕ್ತವಾಗಿದೆ.
ಬಿಜೆಪಿಯು ಮೃತ ಕಾರ್ಮಿಕರಿಗೆ ಸಂತಾಪ ಸೂಚಿಸಿ, ಬಡ ಕಾರ್ಮಿಕರ ಕುಟುಂಬಕ್ಕೆ ಭದ್ರತೆ ಒದಗಿಸಬೇಕಾಗಿದೆ. ಹಿಂದೆ ಇಂತಹ ದುರಂತಗಳು ಸಂಭವಿಸಿ ದಾಗ ಕಾಂಗ್ರೆಸ್ ತನ್ನ ಕಾರ್ಯಕ್ರಮ ರದ್ದು ಪಡಿಸಿದ ಸಾಕಷ್ಟು ನಿದರ್ಶನಗಳಿವೆ. ಮೋದಿ ಉಡುಪಿ ಆಗಮನ ಈ ಅವಘಡದಿಂದ ಕರಾಳವಾಗಿದೆ ಎಂದರು.
ನಿಧನ ಹೊಂದಿದ ಕಾರ್ಮಿಕರಿಗೆ ಸಭೆ ಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಗಳಾದ ಬಿ. ನರಸಿಂಹ ಮೂರ್ತಿ, ಹರೀಶ್ ಕಿಣಿ, ದಿವಾಕರ ಕುಂದರ್, ಜನಾರ್ದನ ಭಂಡಾರ್ಕಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ನಿತ್ಯಾನಂದ ಶೆಟ್ಟಿ, ಸತೀಶ್ ಅಮೀನ್ ಪಡುಕರೆ ಮುಖಂಡರು ಉಪಸ್ಥಿತರಿದ್ದರು. ಭಾಸ್ಕರ್ ರಾವ್ ಕಿದಿಯೂರು ನಿರೂಪಿಸಿ, ವಂದಿಸಿದರು.
ಸಚಿವರ ಆಗ್ರಹ: ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿ ವಾಹನ ಅಪಘಾತಕ್ಕೀ ಡಾದ್ದರಿಂದ ಕಾರ್ಯಕ್ರಮ ರದ್ದುಪಡಿಸಬೇಕು. ಒಂದುವೇಳೆ ನಡೆಸಿದರೆ ಬಿಜೆಪಿಯ ವರು ಸಂವೇದನಾ ರಹಿತರು ಎಂದರ್ಥ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ವರಾದರೆ ಕಾರ್ಯಕ್ರಮ ರದ್ದುಪಡಿಸುತ್ತಿದ್ದರು ಎಂದು ಸಚಿವ ಪ್ರಮೋದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು