ಜಾಗೃತ ಮತದಾರರಿಂದ ಬಿಜೆಪಿಗೆ ಬಹುಪರಾಕ್‌ : ಕೋಟ ಶ್ರೀನಿವಾಸ ಪೂಜಾರಿ


Team Udayavani, May 5, 2018, 7:55 AM IST

Kota-Srinivas-Poojary–88.jpg

ಕಾಪು: ಕೇಂದ್ರದ ಅನುದಾನವನ್ನು ಬಳಸಿಕೊಂಡು ನಡೆಸುವ ಎಲ್ಲಾ ಕಾರ್ಯಕ್ರಮ ಗಳನ್ನೂ ರಾಜ್ಯ ಸರಕಾರ ಮತ್ತು ಹಾಲಿ ಶಾಸಕರು ಕಾಂಗ್ರೆಸ್‌ ಸರಕಾರದ್ದೇ ಸಾಧನೆ ಎಂಬಂತೆ ಬಿಂಬಿಸುತ್ತಿದ್ದಾರೆ. ಪ್ರತೀ ಯೋಜನೆ ಗಳಲ್ಲೂ ಕೇಂದ್ರದ ಬಹುಪಾಲು ಇದೆ ಎನ್ನುವುದನ್ನು ಅರ್ಥೈಸಿಕೊಂಡಿರುವ ಜಾಗೃತ ಮತದಾರರು ಎಲ್ಲಾ ಕಡೆಯಲ್ಲೂ ಕೂಡಾ ಬಿಜೆಪಿಗೆ ಬಹುಪರಾಕ್‌ ಎನ್ನುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ / ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರ ಪರವಾಗಿ ಕಾಪು ಪೇಟೆಯಲ್ಲಿ ಶುಕ್ರವಾರ ಮತ ಯಾಚನೆ ನಡೆಸಿ ಅವರು ಮಾತನಾಡಿದರು.ಕರಾವಳಿ ಜಿಲ್ಲೆಗಳು ಮತ್ತು ರಾಜ್ಯದಲ್ಲಿ ಬಿಜೆಪಿಯ ಗೆಲುವನ್ನು ತಡೆಯಲು ಯಾರಿದಂಲೂ ಸಾಧ್ಯವಿಲ್ಲ. ಕಳೆದ ವಿಧಾನ ಸಭೆಯ ಬಳಿಕದ ಪ್ರತೀ ಚುನಾವಣೆಯಲ್ಲೂ ನಾವು ನಮ್ಮ ಮತಗಳನ್ನು ಏರಿಸಿಕೊಂಡು ಹೋಗಿದ್ದೇವೆ. ಅಷ್ಟು ಗೊತ್ತಿದ್ದರೂ ಮತ್ತೆ ಮತ್ತೆ ನಾವೇ ಗೆಲ್ಲುವುದು ಎಂದು ಬೀಗುತ್ತಿರುವ ಕಾಂಗ್ರೆಸ್‌ ಪಕ್ಷ ಮೇ 15ರ ನಂತರ ತನ್ನ ದುರಾಡಳಿತವನ್ನು ನೆನೆ ನೆನೆದು ಪಶ್ಚಾತ್ತಾಪ ಪಡಲಿದೆ ಎಂದರು.

ಮತದಾರರ ಬೆಂಬಲ ನಮಗೆ ಸ್ಪೂರ್ತಿ : ಲಾಲಾಜಿ ಮೆಂಡನ್‌
ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ, ಈ ಬಾರಿ ಬಿಜೆಪಿ ಎಂಬ ಘೋಷಣೆಯೊಂದಿಗೆ ನಾವು ಚುನಾವಣೆಯನ್ನು ಎದುರಿಸುತ್ತಿದ್ದು, ಕ್ಷೇತ್ರದ ಎಲ್ಲಾ ಕಡೆಗಳಲ್ಲೂ ಬಿಜೆಪಿಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ನಮ್ಮ ಜೊತೆಗೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮಾತ್ರವಲ್ಲದೇ ಮತದಾರರು ಕೂಡಾ ಮತಯಾಚನೆಗೆ ಬರುತ್ತಿರುವುದು ನಮಗೆ ವಿಶೇಷ ಸ್ಪೂರ್ತಿಯನ್ನು ನೀಡುತ್ತಿದೆ ಎಂದರು.

ಜನಾಭಿಪ್ರಾಯಕ್ಕೆ ವಿರುದ್ಧವಾದ ಆಡಳಿತ ಪ್ರಚಾರ ಸಮಿತಿ ಅಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರಕಾರದ ಸಾಧನೆ ಮತ್ತು ಜನಪ್ರಿಯತೆಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದ್ದು, ಇದರ ನಡುವೆ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಸಾಧನೆ ಸಂಪೂರ್ಣ ಗೌಣವಾಗಿದೆ. ಎಲ್ಲವನ್ನೂ ನಾವೇ ಮಾಡಿದ್ದು ಎಂದು ಹೇಳುವ ಕಾಪು ಶಾಸಕರು ಹಿಂದಿನ ಶಾಸಕರುಗಳು ಹಾಕಿಕೊಟ್ಟಿದ್ದ ಅಭಿವೃದ್ಧಿಯ ಅಡಿಪಾಯದ ಬಗ್ಗೆ ಎಲ್ಲೂ ಹೇಳುತ್ತಿಲ್ಲ. ಅವರ ಆಡಳಿತ ವೈಖರಿ ಸಂಪೂರ್ಣ ಜನಾಭಿಪ್ರಾಯಕ್ಕೆ ವಿರುದ್ಧವಾಗಿ ನಡೆಯುತ್ತಿದೆ ಎಂದರು.

ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಎರ್ಮಾಳ್‌, ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಪುರಸಭೆ ವಿಪಕ್ಷ ನಾಯಕ ಅರುಣ್‌ ಶೆಟ್ಟಿ ಪಾದೂರು, ಬಿಜೆಪಿ ಮುಖಂಡರಾದ ವಿಜಯ ಕರ್ಕೇರ, ವಿಜಯ್‌ ಕುಮಾರ್‌ ಉದ್ಯಾವರ, ಅನಿಲ್‌ ಕುಮಾರ್‌, ಕೇಸರಿ ಯುವರಾಜ್‌, ಪ್ರವೀಣ್‌ ಕುಮಾರ್‌, ಸತೀಶ್‌ ಉದ್ಯಾವರ, ಕಿರಣ್‌ ಆಳ್ವ, ರಮೇಶ್‌ ಶೆಟ್ಟಿ, ಪ್ರದೀಪ್‌ ಯು., ಸುಧಾಮ ಶೆಟ್ಟಿ, ರತ್ನಾಕರ ಶೆಟ್ಟಿ, ಸುಮಾ ಯು. ಶೆಟ್ಟಿ, ಸಂದೀಪ್‌ ಶೆಟ್ಟಿ, ಪವಿತ್ರಾ ಶೆಟ್ಟಿ, ಮಾಲಿನಿ ಶೆಟ್ಟಿ, ಸಶಿಪ್ರಬಾ ಶೆಟ್ಟಿ, ರಮಾ ಶೆಟ್ಟಿ, ಸುರೇಂದ್ರ ಪಣಿಯೂರು, ನವೀನ್‌ ಎಸ್‌.ಕೆ. ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.