ಸಂತ್ರಸ್ತರಿಗೆ ಪರಿಹಾರ ದೇಶಕ್ಕೆ ಮಾದರಿ: ಸೊರಕೆ


Team Udayavani, May 10, 2018, 6:00 AM IST

14.jpg

ಕಾಪು: ಉಡುಪಿ ಜಿಲ್ಲೆಯ ಪಾದೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಐಎಸ್‌ಪಿಆರ್‌ಎಲ್‌ ಕಚ್ಚಾ ತೈಲ ಶೇಖರಣಾ ಘಟಕಕ್ಕೆ ಮಂಗಳೂರಿನ ತೋಕೂರಿನಿಂದ ಪಾದೂರಿನವರೆಗೆ ಸುಮಾರು 24 ಗ್ರಾಮಗಳ ರೈತರ ಭೂಮಿಯ ಮಧ್ಯೆ ಹಾದು ಹೋಗುವ ಪೈಪ್‌ಲೈನ್‌ ಯೋಜನೆಯಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡ ಕಾರ್ಯ ದೇಶಕ್ಕೆ ಮಾದರಿ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ. ಕಾಪು ಮೂಬೂರು ಉಳಿಯಾರ ಗೋಳಿಯಲ್ಲಿ ನಡೆದ ಪಂಚಾಯತ್‌ ಮಟ್ಟದ ಮತ ಪ್ರಚಾರ ಮತ್ತು ಮನೆಮನೆ ಮತಪ್ರಚಾರ ಸಂದರ್ಭ ಅವರು ಮಾತನಾಡಿದರು. 

ಹೋರಾಟಕ್ಕೆ ಸಂದ ಜಯ: ಉಭಯ ಜಿಲ್ಲೆಗಳ 24 ಗ್ರಾಮಗಳ ಜನರನ್ನು ರಾಜಕೀಯ ರಹಿತವಾಗಿ ಸಂಘಟಿಸಿ ಪೈಪ್‌ಲೈನ್‌ ಯೋಜನೆಯಿಂದ ರೈತರಿಗಾಗುವ ಅನ್ಯಾಯದ ವಿರುದ್ಧ ಜನಜಾಗೃತಿ ಮಾಡಲಾಗಿತ್ತು. ಕೇಂದ್ರ ಸರಕಾರದ 1962 ಪೈಪ್‌ಲೈನ್‌ ಕಾಯ್ದೆ ಅನ್ವಯ ರೈತರಿಗೆ ಭೂಮಿಯ ಸರಕಾರಿ ಮೌಲ್ಯದ ಕೇವಲ ಶೇ.10 ಮಾತ್ರ ಪರಿಹಾರ ನೀಡಲಾಗುವುದೆಂದು ಸೂಚಿಸಿದ್ದರು. ಆದರೆ ಇದನ್ನು ವಿರೋಧಿಸಿ ಬೃಹತ್‌ ಹೋರಾಟ  ಆಯೋಜಿಸಲಾಗಿತ್ತು. ನಮ್ಮಲ್ಲಿ ಸಣ್ಣ ಹಿಡುವಳಿದಾರರೇ ಹೆಚ್ಚಿರುವುದರಿಂದ ಭೂಮಿ ಎರಡು ಹೋಳಾಗಲಿದ್ದು, ನಿಷ್ಪ್ರಯೋಜಕವಾಗಲಿದೆ. ನಮ್ಮ ಭೂಮಿಗೆ ಸೂಕ್ತ ಪರಿ ಹಾರ ನೀಡಬೇಕೆಂಬ ಬೇಡಿಕೆ ಸಲ್ಲಿಸ ಲಾಗಿತ್ತು. ನಾನು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಈ ಬಗ್ಗೆ ಹೋರಾಟ ನಡೆಸಿ ನ್ಯಾಯ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಇದು ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಿಂದ ಅನುಷ್ಠಾನಗೊಳ್ಳು ವುದರಿಂದ ನಮ್ಮ ರೈತಪರವಾದ ಹೋರಾಟ ಸಮಿತಿ ರೈತರ ಅನುಕೂಲಕ್ಕಾಗಿ ಕೆಲವು ಸರಳ ಬೇಡಿಕೆಗೆ ಸ್ಪಂದಿಸುವಂತೆ ಒತ್ತಾಯಿ ಸಿತ್ತು. ಕೇಂದ್ರ ಸರಕಾರಿ ಸ್ವಾಮ್ಯದ ಯೋಜನೆ ಇದಾಗಿರುವುದರಿಂದ ಬಲಾತ್ಕಾರದಿಂದ ಹೋರಾಟ ಮಾಡಿ ರಾಜ್ಯ ಸರಕಾರದ ಅತೀ ಹೆಚ್ಚು ಪರಿಹಾರ ಮಾರುಕಟ್ಟೆ ಮೌಲ್ಯಧಾರಣೆ ಮೂಲಕ ರೈತರಿಗೆ ಮತ್ತು ಸಂತ್ರಸ್ತರಿಗೆ ಕೊಡಿಸಿದ ಪರಿಹಾರ ಕಾರ್ಯ ದೇಶಕ್ಕೆ ಮಾದರಿಯಾಗಿದೆ ಎಂದು ಸೊರಕೆ ಹೇಳಿದರು.

ಸಂತ್ರಸ್ತರ ಬೇಡಿಕೆ: ಪೈಪ್‌ಲೈನ್‌ ಹಾದುಹೋಗುವ ಕೃಷಿಭೂಮಿಗೆ 2014ರ ಡಿ. 31ರ ವರೆಗೆ ಅತೀ ಹೆಚ್ಚು ಮಾರಾಟವಾಗಿರುವ ಮೌಲ್ಯ ನಿಗದಿಪಡಿಸಬೇಕು. ಪೈಪ್‌ಲೈನ್‌ ಅಳವಡಿಸಿದ ಅನಂತರ ಎರಡು ಬದಿಗಳಲ್ಲೂ ಭೂಪರಿವರ್ತ ನೆಗೆ ಲಿಖೀತ ಅನುಮತಿ ನೀಡಬೇಕು. ಪೈಪ್‌ಲೈನ್‌ ಕಾಮಗಾರಿ ನಡೆಸುವ ಸಂದರ್ಭ ಗಡಿಗುರುತು ಗೊತ್ತು ಪಡಿಸಿದ ಭೂಮಿ ಹೊರತುಪಡಿಸಿ ಕೃಷಿ ನಾಶವಾದರೆ, ನೀರಾವರಿ ತೋಡುಗಳು ಮುಚ್ಚಿದರೆ ಮತ್ತೆ ಸರಿಪಡಿಸಿ ಕೃಷಿಯ ಪರಿಹಾರ ಒದಗಿಸಬೇಕು. 10ರಿಂದ 15 ಸೆಂಟ್ಸ್‌ ಜಾಗ ಅಥವಾ ಹೆಚ್ಚುವರಿ ಭೂಮಿಗಳ ಮಧ್ಯ ಭಾಗದಲ್ಲಿ ಹಾದುಹೋಗ ದಂತೆ ರೈತರಿಗೆ ಅನುಕೂಲವಾಗುವಂತೆ ಸಹಕರಿಸುವ ಬಗ್ಗೆ ವಿನಯ್‌ ಕುಮಾರ್‌ ಸೊರಕೆಯವರ ಮಧ್ಯಸ್ಥಿಕೆ ಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸ ಲಾಗಿತ್ತು. ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ದಿವಾಕರ ಶೆಟ್ಟಿ, ಪ್ರಭಾಕರ, ಫ‌ಝಾìನ, ಸೌಮ್ಯಾ, ರೇಶ್ಮಾ, ಸಾಧಿಕ್‌ ಮಲ್ಲಾರು ಉಪಸ್ಥಿತ ರಿದ್ದರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.