ಪೂರ್ಣಗೊಳಿಸುವತ್ತ ಗುತ್ತಿಗೆದಾರರ ದೃಷ್ಟಿ!
Team Udayavani, May 20, 2018, 6:45 AM IST
ಕಾಪು: ಚುನಾವಣೆಯ ಕಾರಣದಿಂದಾಗಿ ಕಾಪು ಮತ್ತು ಪಡುಬಿದ್ರಿ ವ್ಯಾಪ್ತಿಯಲ್ಲಿ ಕುಂಟುತ್ತಾ ಸಾಗುತ್ತಿದ್ದ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಯೋಜನೆಯ ಕಾಮಗಾರಿ ಮತ್ತೆ ಚುರುಕುಗೊಂಡಿದೆ.
ಮಳೆಗಾಲದ ಮುನ್ಸೂಚನೆ ದೊರ ಕುತ್ತಿದ್ದಂತೆಯೇ ಹೆದ್ದಾರಿ ಪ್ರಾಧಿಕಾರ ಮತ್ತು ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಎಚ್ಚೆತ್ತುಕೊಂಡಿದ್ದಾರೆ. ಹೆದ್ದಾರಿ ಚತುಷ್ಪಥ ಯೋಜನೆಯ ಕಾಮಗಾರಿಯಲ್ಲಿ ಅರೆಬರೆಯಾಗಿ ಉಳಿಸಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವತ್ತ ದೃಷ್ಟಿ ಹಾಯಿಸಿದ್ದಾರೆ.
ಹಿಂದಿನ ಸಮಸ್ಯೆಗೆ ಮುಕ್ತಿ
ನೀಡುವ ಪ್ರಯತ್ನವೇ ?
ಕೆಲವು ಸಮಯಗಳಿಂದ ಬಾಕಿಯುಳಿಸಿ ರುವ ಅರೆಬರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಹೆದ್ದಾರಿ ಕಾಮಗಾರಿಯ ಗುತ್ತಿಗೆದಾರ ಕಂಪೆನಿ ನವಯುಗ್ ಪ್ರೈ. ಲಿ. ನ ಅಧಿಕಾರಿಗಳು ಕಳೆದ 2-3 ದಿನಗಳಿಂದ ಗಂಭೀರ ಚಿಂತನೆ ನಡೆಸಿದ್ದಾರೆ. ಆ ಮೂಲಕ ಹಿಂದಿನ ವರ್ಷಗಳಲ್ಲಿ ಜನತೆ ಎದುರಿಸಿದ್ದ ಸಮಸ್ಯೆಗಳಿಂದ ಮುಕ್ತಿ ದೊರಕಿಸಿಕೊಡುವ ಪ್ರಯತ್ನ ನಡೆಸುತ್ತಿದ್ದಾರೆ.
ಬೀಚ್ ರಸ್ತೆಯಲ್ಲಿ ಚರಂಡಿ ನಿರ್ಮಾಣ
ಕಾಪು ಹೊಸ ಮಾರಿಗುಡಿ ಬಳಿಯ ಸರ್ವೀಸ್ ರಸ್ತೆಯಿಂದ ಬೀಚ್ ರಸ್ತೆಯ ದ್ವಾರದ ಬಳಿ ಜೆಸಿಬಿ ಮೂಲಕ ಅಗೆದು ಕಾಂಕೀÅಟ್ ಚರಂಡಿ ರಚನೆಯ ಕಾಮಗಾರಿ ಭರದಿಂದ ಸಾಗುತ್ತಿದೆ. ಅದರೊಂದಿಗೆ ಮಾರಿಗುಡಿ ಬಳಿಯಿಂದ ಪೆಟ್ರೋಲ್ ಬಂಕ್ ಬಳಿಯವರೆಗೆ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಗಿದೆ.
ಕಾಪು ಪೆಟ್ರೋಲ್ ಬಂಕ್ನಿಂದ ಮಾರಿಗುಡಿಯವರೆಗಿನ ಸರ್ವೀಸ್ ರಸ್ತೆ ಪಕ್ಕದ ಚರಂಡಿಯಲ್ಲಿರುವ ಮಣ್ಣನ್ನು ಮೇಲೆತ್ತಿ ಸ್ಥಳಾಂತರಿಸುವ ಪ್ರಕ್ರಿಯೆಗೂ ಚಾಲನೆ ನೀಡಿದ್ದು, ಗುತ್ತಿಗೆದಾರರು ಮಳೆಗಾಲಕ್ಕೆ ಮೊದಲೇ ಮುತುವರ್ಜಿ ವಹಿಸಿ ಕಾಮಗಾರಿ ನಡೆಸಲು ಮುಂದಾಗಿರುವುದನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.
ಸರ್ವೀಸ್ ರಸ್ತೆ ಬಳಿಯ
ಸಮಸ್ಯೆ ಪರಿಹಾರಕ್ಕೆ ಪ್ರಥಮ ಆದ್ಯತೆ
ಕಾಪು ಮತ್ತು ಪಡುಬಿದ್ರಿಯಲ್ಲಿ ಬಾಕಿಯುಳಿಸಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ನವಯುಗ ಕಂಪೆನಿಗೆ ಅನುಮೋದನೆ ದೊರಕಿದೆ. ಮಳೆಗಾಲಕ್ಕೆ ಮೊದಲು ಸರ್ವೀಸ್ ರಸ್ತೆ ಬಳಿಯ ಸಮಸ್ಯೆಗಳನ್ನು, ಚರಂಡಿ ನಿರ್ಮಾಣ ಕಾಮಗಾರಿಯನ್ನು ಪೂರ್ಣ ಗೊಳಿಸಲಾಗುವುದು. ಅದರ ಜೊತೆ ಪಡುಬಿದ್ರಿಯಲ್ಲೂ ಹೆದ್ದಾರಿ ರಚನೆ ಕಾಮಗಾರಿ ಭರದಿಂದ ಸಾಗುತ್ತಿದೆ ಎಂದು ನವಯುಗ ಕಂಪೆನಿಯ ಚರಂಡಿ ಕಾಮಗಾರಿ ಉಸ್ತುವಾರಿ ಮಹೇಶ್ ಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್