ಪವನ್ ಕುಮಾರ್ ಅತ್ತಾವರ ಅವರ 24 ಕಲಾಕೃತಿಗಳ ಪ್ರದರ್ಶನ
Team Udayavani, Jun 7, 2018, 2:20 AM IST
ಉಡುಪಿ: ಉಡುಪಿಯ ಆರ್ಟಿಸ್ಟ್ ಪೋರಂ ವತಿಯಿಂದ ಪವನ್ ಕುಮಾರ್ ಅತ್ತಾವರ ಅವರ ಏಕವ್ಯಕ್ತಿ ಕಲಾಪ್ರದರ್ಶನ ‘ಅನಿಕೇತನ’ ಜೂ.8ರಂದು ಸಂಜೆ 5.30ಕ್ಕೆ ಉಡುಪಿ ಅಲಂಕಾರ್ ಚಿತ್ರಮಂದಿರದ ಹಿಂಭಾಗದಲ್ಲಿರುವ ದೃಷ್ಟಿ ಗ್ಯಾಲರಿಯಲ್ಲಿ ಆರಂಭಗೊಳ್ಳಲಿದೆ.
ಅಕ್ರಲಿಕ್ ಮತ್ತು ತೈಲ ಮಾಧ್ಯಮದ 24 ಕಲಾಕೃತಿಗಳು ಪ್ರದರ್ಶನಗೊಳ್ಳಲಿದ್ದು ಕಲಾಪ್ರದರ್ಶನವನ್ನು ಮಂಗಳೂರಿನ ಎಕ್ಸ್ಪರ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ನ ಚೇರ್ ವೆುನ್ ಪ್ರೊ| ನರೇಂದ್ರ ನಾಯಕ್ ಉದ್ಘಾಟಿಸಲಿದ್ದಾರೆ. ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಸಿಇಒ ವಿನೋದ್ ಕುಮಾರ್, ಖ್ಯಾತ ಕಲಾವಿದ ಗಣೇಶ್ ಸೋಮಯಾಜಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಮೇಶ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರದರ್ಶನವು ಜೂ.9ರಿಂದ 11ರವರೆಗೆ ಬೆಳಗ್ಗೆ 10ರಿಂದ 7ರವರೆಗೆ ಇದೆ. ಕಲಾಸಕ್ತರಿಗೆ ಮುಕ್ತ ಪ್ರವೇಶವಿದೆ ಎಂದು ಮಣಿಪಾಲ್ ಟೆಕ್ನಾಲಜೀಸ್ನ ಪ್ರಾಜೆಕ್ಟ್ ಮ್ಯಾನೇಜರ್, ಆರ್ಟಿಸ್ಟ್ ಫೋರಂನ ಸದಸ್ಯ ಸತೀಶ್ಚಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಲಾವಿದ ಪವನ್ ಕುಮಾರ್ ಅತ್ತಾವರ ಉಪಸ್ಥಿತರಿದ್ದರು.
ಮಂಗಳೂರು ಇನ್ಫೋಸಿಸ್ ಉದ್ಯೋಗಿಯಾಗಿರುವ ಪವನ್ ಕುಮಾರ್ ಅತ್ತಾವರ ಅವರು ಫೈನ್ ಆರ್ಟ್ಸ್ನಲ್ಲಿ ಪದವೀಧರರು, ಅಡ್ವಾನ್ಸ್ಡ್ ಕಂಪ್ಯೂಟರ್ ಆರ್ಟ್ಸ್ನಲ್ಲಿ ಸ್ನಾತಕೋತ್ತರ ಪದವೀಧರರು. 2007ರಲ್ಲಿ ಪುಣೆಯ ರುದ್ರಾಕ್ಷ್ ಆರ್ಟ್ ಗ್ಯಾಲರಿಯಲ್ಲಿ ಏಕಕಲಾ ಪ್ರದರ್ಶನ ನೀಡಿದ್ದರು. ಉಡುಪಿ ಪರ್ಬ, ಮೂಡಬಿದಿರೆಯ ಆಳ್ವಾಸ ಚಿತ್ರಸಿರಿ, ಮೈಸೂರು ದಸರಾ, ಗೋವಾ, ಮಂಗಳೂರು, ಉಡುಪಿ, ಮಣಿಪಾಲ, ದಾವಣಗೆರೆ, ಬೆಂಗಳೂರು ಸೇರಿದಂತೆ ವಿವಿಧೆಡೆ ಕಲಾಪ್ರದರ್ಶನ ನೀಡಿದ್ದಾರೆ. ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು