ವಿತರಣೆಗಾಗಿ ಕಾದಿವೆ 2 ಲಕ್ಷ  ಸಸಿಗಳು


Team Udayavani, Jun 7, 2018, 2:35 AM IST

ಉಡುಪಿ: ಗಿಡ-ಮರಗಳನ್ನು ನೆಟ್ಟು ಪರಿಸರ ಸಮೃದ್ಧಿಗೆ ಉತ್ತೇಜನ ನೀಡಲು ಸರಕಾರ ಅರಣ್ಯ ಇಲಾಖೆ ಮೂಲಕ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ವಿತರಿಸುತ್ತಿದೆ. ಕುಂದಾಪುರ ವಿಭಾಗದ ಎಂಟು ವಲಯಗಳಲ್ಲಿ ತಲಾ ಒಂದು ನರ್ಸರಿಗಳಿದ್ದು ಇವುಗಳಲ್ಲಿ ಸಾರ್ವಜನಿಕ ವಿತರಣೆಗಾಗಿ ಹಾಗೂ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ 1.45 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ. ರೆಗ್ಯುಲರ್‌ ಅರಣ್ಯ ವಿಭಾಗವಲ್ಲದೆ ಉಡುಪಿ ಜಿ.ಪಂ. ಸಾಮಾಜಿಕ ಅರಣ್ಯ ವಿಭಾಗದಲ್ಲಿ ಸಾರ್ವಜನಿಕ ವಿತರಣೆಗಾಗಿ 65,000 ಗಿಡಗಳನ್ನು ಬೆಳೆಸಲಾಗಿದೆ.


ಯಾವೆಲ್ಲ ಸಸಿಗಳು?

ನೇರಳೆ, ಬೆತ್ತ, ಸಾಗುವಾನಿ, ರಕ್ತಚಂದನ, ಮಹಾಗನಿ, ದಾಲಿcನಿ, ಹಲಸು, ಬಾದಾಮಿ, ಕಿರಾಲುಬೋಗಿ, ರಾಂಪತ್ರೆ, ಹೆಬ್ಬೇವು, ಅಂಟುವಾಳ, ಬೆಂಗ, ಹೊಂಗೆ, ನಾಗಲಿಂಗ ಪುಷ್ಪ, ಹೊಳೆ ದಾಸವಾಳ, ಕಕ್ಕೆ, ಬೀಟೆ, ಮಾವು, ಅಶೋಕ, ಬಿಲ್ವಪತ್ರೆ, ನೆಲ್ಲಿ, ಪುನರ್‌ಪುಳಿ, ಮುತ್ತುಗ, ಶ್ರೀಗಂಧ, ಸಂಪಿಗೆ, ಶಿವಾನಿ, ಬಿಲ್ವಾರ, ಮುರಿಯ, ಸೆಳ್ಳೆ, ರೆಂಜ ಇತ್ಯಾದಿ ಗಿಡಗಳನ್ನು ಬೆಳೆಸಲಾಗಿದೆ. ಇದರಲ್ಲಿ ಹಣ್ಣು- ಹೂವು ಬಿಡುವ, ಉರುವಲು ಆಗುವ, ಗೃಹೋಪಯೋಗಿ ಗಿಡಗಳಿವೆ.

ರಿಯಾಯಿತಿ ದರ
ವಿತರಣೆಗಾಗಿ ಬೆಳೆಸಿದ ಸಸಿಗಳನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವುದು.(58 ಗಾತ್ರದ ಸಸಿಗೆ 1 ರೂ., 812 ಗಾತ್ರದ ಸಸಿಗೆ 3 ರೂ. ನಿಗದಿಪಡಿಸಲಾಗಿದೆ. )


ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ 

ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಸಸಿಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಸಸಿ ಇಚ್ಛಿಸುವ ರೈತರು ಸಸಿ ನೆಡಲು ಲಭ್ಯವಿರುವ ಸ್ಥಳಕ್ಕೆ ಸಂಬಂಧಿಸಿದ ಪಹಣಿ ಪತ್ರದೊಂದಿಗೆ ಸಮೀಪದ ವಲಯ ಕಚೇರಿಗೆ ತಾವು ಇಚ್ಛಿಸಿದ ಸಸಿಗಳ ವಿವರದೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ಸಸಿ ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯಡಿ ಸಸಿ ನೆಟ್ಟ ರೈತರಿಗೆ 1 ವರ್ಷದ ತರುವಾಯ ಪ್ರತಿ ಜೀವಿತ ಸಸಿಗೆ ಮೊದಲ ವರ್ಷದಲ್ಲಿ 40 ರೂ., ಎರಡನೇ ವರ್ಷದಲ್ಲಿ 30 ರೂ., 3ನೇ ವರ್ಷದಲ್ಲಿ 30 ರೂ. ಸಹಾಯಧನ ನೀಡಲಾಗುವುದು. ಯೋಜನೆಯಡಿ ಹೆಕ್ಟೇರ್‌ ಗೆ ಗರಿಷ್ಠ 400 ಸಸಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅವಕಾಶ ಇದೆ. 2 ವರ್ಷಗಳ ಹಿಂದೆ ಈ ಯೋಜನೆಯಡಿ ಒಂದು ಸಸಿಗೆ 40 ರೂ. ಇತ್ತು, ಹೋದ ವರ್ಷದಿಂದ 100 ರೂ.ಗೆ ಏರಿಕೆಯಾಗಿದೆ. ಇದು ಪಾಳುಬೀಳುವ ಜಾಗದಲ್ಲಿ ಸುಲಭದಲ್ಲಿ ಆದಾಯ ತರುವ ಯೋಜನೆಯಾಗಿದೆ.


ಸಬ್ಸಿಡಿ ದರ

ಒಂದು ಗಿಡ ಬೆಳೆಸಲು ಇಲಾಖೆಗೆ ಸುಮಾರು 30 ರೂ. ಖರ್ಚಾಗುತ್ತದೆ. ಸರಕಾರ ಸಬ್ಸಿಡಿ ದರದಲ್ಲಿ ಗಿಡಗಳನ್ನು ರೈತರಿಗೆ ವಿತರಿಸುತ್ತಿದೆ.  ಮೂರು ವರ್ಷಗಳಲ್ಲಿ 100 ರೂ. ಕೊಡಲಾಗುತ್ತದೆ. ರೈತರು ತಮ್ಮ ಜಾಗದಲ್ಲಿ ಗಿಡಗಳನ್ನು ನೆಟ್ಟು ಪರಿಸರಕ್ಕೂ ಸ್ವಂತಕ್ಕೂ ಪ್ರಯೋಜನ ಪಡೆದುಕೊಳ್ಳಬೇಕು.
– ಪ್ರಭಾಕರನ್‌, ಉಪ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.