ನಗರದಲ್ಲಿ ಭಯ ಸೃಷ್ಟಿಸಿದ್ದ  ಮಾನಸಿಕ ರೋಗಿ ಸಂಪೂರ್ಣ ಗುಣಮುಖ


Team Udayavani, Jun 10, 2018, 6:15 AM IST

mano.jpg

ಉಡುಪಿ: ಮಲ್ಪೆ, ಹೂಡೆ, ವಡಭಾಂಡೇಶ್ವರ, ಆದಿಉಡುಪಿ ಮೊದಲಾದ ಸಾರ್ವಜನಿಕ ಸ್ಥಳಗಳಲ್ಲಿ 
ಅಪರಿಚಿತ ಮಾನಸಿಕ ಯುವಕನೋರ್ವ ಸಾರ್ವಜನಿಕರ ಮೇಲೆ ಕಲ್ಲು ಮೊದಲಾದ ಸಿಕ್ಕ ಸಿಕ್ಕ ವಸ್ತುಗಳನ್ನು ಎಸೆಯುತ್ತ, ಹಲ್ಲೆ ಮಾಡುತ್ತಾ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಯುವಕ ಸದ್ಯ ಸಂಪೂರ್ಣ ಗುಣಮುಖವಾಗಿದ್ದಾರೆ.

ಪರಿಸರದ ಜನರ ಮನವಿ ಮೇರೆಗೆ ನಾಲ್ಕು ತಿಂಗಳ ಹಿಂದೆ ಯುವಕನನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಮಲ್ಪೆ ಪೋಲಿಸರ ಸಹಾಯದಿಂದ ವಶಕ್ಕೆ ಪಡೆದು ವಿಶೇಷ ಆ್ಯಂಬು ಲೆನ್ಸ್‌ನಲ್ಲಿ ಸಹಾಯಕರನ್ನು ನೇಮಿಸಿ ಧಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ಸಾಗಿಸಿ ದಾಖಲು ಮಾಡಿದ್ದರು. ಸುಮಾರು 110 ದಿನಗಳ ಸುದೀರ್ಘ‌ ಚಿಕಿತ್ಸೆಗೆ ಸ್ಪಂದಿಸಿದ ಯುವಕ ಸಂಪೂರ್ಣ ಗುಣಮುಖಗೊಂಡಿದ್ದಾರೆ. ತನ್ನ ಹೆಸರು ಶಕ್ತಿವೇಲು, ಊರು ತಮಿಳುನಾಡು ಎನ್ನುವ ವಿಳಾಸ ನೀಡಿದ್ದಾರೆ. ಮಲ್ಪೆ ಪೊಲೀಸರು ತಮಿಳುನಾಡಿಗೆ ತೆರಳಿ ಯುವಕನ ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ. ಯುವಕನನ್ನು ಧಾರವಾಡದಿಂದ ಉಡುಪಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಾರಸು ದಾರರ ಸ್ಪಂದನೆ ಇಲ್ಲದ ಕಾರಣದಿಂದ ನ್ಯಾಯಾಲಯದ ಆದೇಶದಂತೆ ಯುವಕ ನನ್ನು ಮಂಗಳೂರಿನ ನಿರಾಶ್ರಿತರ ಕೇಂದ್ರಕ್ಕೆ ದಾಖಲಿಸಲಾಗಿದೆ.  ಯುವಕನ ರಕ್ಷಣಾ ಕಾರ್ಯಾಚರಣೆಗೆ ವಿಶು ಶೆಟ್ಟಿ ಅವರು 23 ಸಾವಿರ ರೂ. ಹಣ ವ್ಯಯಿಸಿದ್ದಾರೆ.

ಮನೋ ರೋಗಿಗಳನ್ನು ಹೀಯಾಳಿಸದಿರಿ
ಅಪರಿಚಿತ ಯುವಕ, ಯುವತಿಯರು ತಮ್ಮ ಜೀವನದಲ್ಲಿನ ನಾನಾ ಸಮಸ್ಯೆ ಗಳಿಂದ ಮನೋರೋಗಿಯಾಗಿ, ಅಸಹಾಯಕರಾಗಿ ಸಮಾಜದಲ್ಲಿ ಅಲೆದಾಡುತ್ತಿದ್ದಾರೆ. ಅಂತಹವರ ಸಮಸ್ಯೆಗಳ ನೆರವಿಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು, ವಿವಿಧ ಇಲಾಖೆಗಳು ತತ್‌ಕ್ಷಣ ಧಾವಿಸಿದಲ್ಲಿ ಮುಂದಾಗುವ ದೊಡ್ಡ ಅನಾಹುತ ತಪ್ಪಿಸಬಹುದಾಗಿದೆ. ಮಾನಸಿಕ ಅಸ್ವಸ್ಥರ ಮೇಲೆ ಹಲ್ಲೆ ನಡೆಸುವ , ಹಾಸ್ಯಾಸ್ಪದವಾಗಿ ಬಳಸಿಕೊಳ್ಳುವ ವಿಘ್ನ ಸಂತೋಷಕ್ಕೆ ಯಾರೂ ಮುಂದಾಗ ಬಾರದು. ಮಾನಸಿಕವಾಗಿ ನೊಂದು  ನಿರ್ಗತಿಕರಾಗಿರುವವರಿಗೆ ಉಡುಪಿ ಯಲ್ಲಿ ಸರಿಯಾದ ಪುನರ್ವಸತಿ ಕೇಂದ್ರ ಇಲ್ಲ. ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಬೇಕು.
 - ವಿಶು ಶೆಟ್ಟಿ , ಅಂಬಲಪಾಡಿ

ಸಿಕ್ಕ ಸಿಕ್ಕವರಿಗೆ ಕಲ್ಲು ಹೊಡೆಯುತ್ತಿದ್ದ.
ನಾಲ್ಕು ತಿಂಗಳ ಹಿಂದೆ ಮಲ್ಪೆ , ಆದಿ ಉಡುಪಿ ಪರಿಸರದಲ್ಲಿ ಜನರಿಗೆ ಕಲ್ಲು ಹೊಡೆದು ಆತಂಕ ಸೃಷ್ಟಿಸಿದ್ದವನನ್ನು ಸಮಾಜ ಸೇವಕ ವಿಶು ಶೆಟ್ಟಿ ಧಾರವಾಡದ ಮಾನಸಿಕ ಆಸ್ಪತ್ರೆಗೆ ದಾಖಲಿಸಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.