ಕುಂದಾಪುರ ತಾ| ಆಸ್ಪತ್ರೆ: ಎಲ್ಲ ಔಷಧ ಲಭ್ಯ, ವೈದ್ಯರ ಕೊರತೆಯಿಲ್ಲ


Team Udayavani, Jun 17, 2018, 6:10 AM IST

1506kdpp8.jpg

ಕುಂದಾಪುರ: ಮುಂಗಾರು ಚುರುಕುಗೊಂಡಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಕಾಲವೂ ಆಗಿದೆ. ಇದಕ್ಕಾಗಿ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಸಾಕಷ್ಟು ಔಷಧ ತರಿಸಲಾಗಿದೆ. ವೈದ್ಯರ ಕೊರತೆಯೂ ಇಲ್ಲ. ಆದರೆ ನರ್ಸ್‌ ಹಾಗೂ ಸಿಬಂದಿ ಕೊರತೆ ಸೇವೆಗೆ ತೊಡಕಾಗುವ ಸಾಧ್ಯತೆಯಿದೆ.

ಮಹಡಿಯ ದುರಸ್ತಿ ಪೂರ್ಣ
ಆಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಮಹಡಿಯಲ್ಲಿ ಬಿರುಕು ಬಿಟ್ಟಿದ್ದರಿಂದ ಕಳೆದ ಬಾರಿಯ ಮಳೆಗಾಲದಲ್ಲಿ ಆಸ್ಪತ್ರೆಯ ಅನೇಕ ಕಡೆ ಸೋರಿಕೆಯಿಂದಾಗಿ ಚಿಕಿತ್ಸೆಗೆ ಬಂದ ರೋಗಿಗಳು ತೊಂದರೆ ಅನುಭವಿಸಿದ್ದರು. ಆದರೆ ಈ ಬಾರಿ ದ್ರವ ತ್ಯಾಜ್ಯ ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ಸುಮಾರು 35 ಲಕ್ಷ ರೂ. ಬಿಡುಗಡೆಯಾಗಿದ್ದು, ಅದರ ಅನುದಾನದಲ್ಲಿ ಆಸ್ಪತ್ರೆ ದುರಸ್ತಿ ಮಾಡಲಾಗಿದೆ.  

ಹೊಸ ಸೌಲಭ್ಯಗಳು
ಈಗಾಗಲೇ ತಾಲೂಕು ಆಸ್ಪತ್ರೆ ಪಕ್ಕದಲ್ಲೇ ಹೊಸದಾಗಿ 100 ಬೆಡ್‌ಗಳಿರುವ ಸುಸಜ್ಜಿತ ಹೆರಿಗೆ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಡಿಸೆಂಬರ್‌ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಹೊಸದಾಗಿ 3 ಬೆಡ್‌ಗಳಿರುವ ತೀವ್ರ ನಿಗಾ ಘಟಕ, ಡಯಾಲಿಸೀಸ್‌ ಕೇಂದ್ರ, ನಿಫಾ ಕಾಯಿಲೆಯ ಚಿಕಿತೆಗಾಗಿ 6 ಬೆಡ್‌ಗಳ ನಿಫಾ ವಾರ್ಡನ್ನು ಆರಂಭಿಸಲಾಗಿದೆ.

ಬೇಡಿಕೆಯಷ್ಟು ಔಷಧ ಲಭ್ಯ
ಸಾಂಕ್ರಾಮಿಕ ರೋಗ, ಮಳೆಗಾಲ ಸಂಬಂಧಿ ಕಾಯಿಲೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ತರಿಸಲಾಗಿದೆ. ಅಗತ್ಯಬಿದ್ದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಮೂಲಕ ಜನೌಷಧ ಕೇಂದ್ರದಿಂದ ತರಿಸಲಾಗುವುದು ಎಂದು ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ರೋಬರ್ಟ್‌ ರೆಬೆಲ್ಲೋ ತಿಳಿಸಿದ್ದಾರೆ.

10 ತಜ್ಞ ವೈದ್ಯರು ಲಭ್ಯ
ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ತಜ್ಞರು, ಜನರಲ್‌ ಸರ್ಜನ್‌, ಜನರಲ್‌ ಫಿಸೀಶಿಯನ್‌, ಸ್ತ್ರೀರೋಗ ತಜ್ಞರು, ಎಲುಬು -ಕೀಲು ರೋಗ ತಜ್ಞರು, ಮಕ್ಕಳ ತಜ್ಞರು, ಕ್ಷ-ಕಿರಣ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ದಂತ ವೈದ್ಯಾಧಿಕಾರಿ ಲಭ್ಯವಿದ್ದಾರೆ. ಆದರೆ ಕಿವಿ- ಮೂಗು, ಗಂಟಲು ರೋಗ ತಜ್ಞ ವೈದ್ಯರ ಕೊರತೆಯಿದೆ. 

24 ಬೆಡ್‌ಗಳ ಕೊರತೆ
ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು 100 ಬೆಡ್‌ಗಳು ಇರಬೇಕಿದ್ದು, ಆದರೆ ಈಗ ಇರುವುದು ಕೇವಲ 76 ಮಾತ್ರ. ಕೊರತೆ ಹಿನ್ನೆಲೆಯಲ್ಲಿ 12 ಬೆಡ್‌ಗಳನ್ನು ಹೆಚ್ಚುವರಿಯಾಗಿ ತರಿಸಲಾಗಿದೆ. ಈಗ 24 ಬೆಡ್‌ಗಳ ಕೊರತೆಯಿದೆ.

ತುರ್ತಾಗಿ ಬೇಕಾಗಿರುವುದು
ಸದ್ಯ 3 ಆ್ಯಂಬುಲೆನ್ಸ್‌ ಚಾಲಕರಿದ್ದು, ನಿರಂತರ 24 ಗಂಟೆಗಳ ಕಾಲ ಸೇವೆ ನೀಡಲು ಒಟ್ಟು 4 ಚಾಲಕರ ಅಗತ್ಯವಿದೆ. ಹೊಸ ಸ್ಕ್ಯಾನಿಂಗ್‌ ಕೇಂದ್ರ ತುರ್ತಾಗಿ ಬೇಕಾಗಿದೆ.

ಎಲ್ಲ ಸೇವೆಗೂ ಸಿದ್ದ
ಮಳೆಗಾಲದಲ್ಲಿ ಎಲ್ಲ ರೀತಿಯ ಸೇವೆಯನ್ನು ನೀಡಲು ಸಿದ್ದರಿದ್ದೇವೆ. ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿಸಿದ ಎಲ್ಲ ರೀತಿಯ ಚಿಕಿತ್ಸೆಗೆ ಲಭ್ಯ ಔಷಧಗಳನ್ನು ಈಗಾಗಲೇ ಪೂರೈಸಲಾಗಿದೆ. ರೋಗಿಗಳಿಗೆ ನಿರಂತರ 24 ಗಂಟೆಗಳ ಕಾಲ ಸಕಲ ಸೇವೆಯನ್ನು ನೀಡಲು ಎಲ್ಲ ತಯಾರಿ ನಡೆಸಲಾಗಿದೆ.
– ಡಾ| ರೋಬರ್ಟ್‌ ರೆಬೆಲ್ಲೋ,
ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ

ಗ್ರೂಪ್‌ -ಡಿ : 14 ಹುದ್ದೆ ಖಾಲಿ
ಖಾಲಿಯಿರುವ ಹುದ್ದೆಗಳು 1 ಹಿರಿಯ ಸ್ಟಾಫ್‌ ನರ್ಸ್‌, 1 ಇಸಿಜಿ ಟೆಕ್ನಿಶಿಯನ್‌, 1 ನೇತ್ರಾಧಿಕಾರಿ, 1 ಹಿರಿಯ ಲ್ಯಾಬ್‌ ಟೆಕ್ನಿಶಿಯನ್‌, ಫೀಲ್ಡ್‌ ಕಾರ್ಯಕ್ಕಾಗಿ 1 ಕಿರಿಯ ಮಹಿಳಾ ಸಹಾಯಕಿ ಖಾಲಿಯಿವೆ. ಇನ್ನೂ 22 ಗ್ರೂಪ್‌ ಡಿ ಹುದ್ದೆ ಮಂಜೂರಾಗಿದ್ದರೂ, ಅದರಲ್ಲಿ ಕೇವಲ 8 ಮಾತ್ರ ಭರ್ತಿಯಾಗಿದ್ದು, ಬಾಕಿಯುಳಿದ 14 ಹುದ್ದೆಗಳು ಖಾಲಿಯಾಗಿವೆ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.