ಸ್ವಂತ ಖರ್ಚಿನಿಂದ ತೆರವು ಕಾರ್ಯಕ್ಕೆ ಮುಂದಾದ ಯುವಕರು
Team Udayavani, Jun 21, 2018, 6:25 AM IST
ಮಲ್ಪೆ: ಕಡಿದ ಮರದ ತುಂಡುಗಳು ರಸ್ತೆಯ ಬದಿಯ ಅಂಚನ್ನು ಚಾಚಿಕೊಂಡು ವಾಹನಗಳ ಸುಗಮ ಸಂಚಾರಕ್ಕೆ ತೊಡಕನ್ನು ಉಂಟು ಮಾಡುತ್ತಿದ್ದು ಇದನ್ನು ಮನಗಂಡ ಸ್ಥಳೀಯ ಯುವಕರು ಬೃಹತ್ ಗಾತ್ರದ ಮರದ ತುಂಡನ್ನು ಹಿಟಾಚಿ ಮೂಲಕ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.
ಕಳೆದ ಮೂರು ವಾರದ ಹಿಂದೆ ಸುರಿದ ಮಳೆಗೆ ಕಲ್ಮಾಡಿ ಮುಖ್ಯ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ಅದನ್ನು ನಗರಸಭೆಯ ವತಿಯಿಂದ ಕಡಿದು ತೆರವುಗೊಳಿಸಲಾಗಿತ್ತು. ಆದರೆ ಕಡಿದ ಮರದ ತುಂಡುಗಳು ಮಾತ್ರ ರಸ್ತೆಯಲ್ಲೇ ಬಾಕಿ ಉಳಿದಿದ್ದವು. ರಸ್ತೆಗೆ ಚಾಚಿಕೊಂಡಿದ್ದ ಮರದ ತುಂಡುಗಳು ವಾಹನ ಸಂಚಾರಕ್ಕೆ ತಡೆಯೊಡ್ಡುತ್ತಿದ್ದವು. ಮರದ ಚೂಪಾದ ಭಾಗಗಳು ರಸ್ತೆಯ ಬದಿಯಲ್ಲಿ ಸಾಗುವ ದ್ವಿಚಕ ವಾಹನ ಸಾವಾರಿಗೆ ತಾಗಿ ಅನಾಹುತಗಳು ನಡೆಯುತ್ತಿದ್ದವು.ಈ ಬಗ್ಗೆ ನಾಗರಿಕರು ಹಲವು ಬಾರಿ ನಗರಸಭೆಗೆ ದೂರಿಕೊಂಡರೂ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಮಾಡಿಯ ಸ್ಥಳೀಯ ಯುವಕರು ಸುಂದರ್ ಜೆ. ಕಲ್ಮಾಡಿ ನೇತೃತ್ವದಲ್ಲಿ ತಮ್ಮ ಸ್ವಂತ ಖರ್ಚಿನಿಂದ ಹಿಟಾಚಿ ಮೂಲಕ ಮರದ ತುಂಡುಗಳನ್ನು ತೆರವುಗೊಳಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.
ಮನವಿಗೆ ಸ್ಪಂದಿಸಲಿಲ್ಲ
ರಸ್ತೆ ಬದಿಯ ಮರವನ್ನು ತೆರವುಗೊಳಿಸುವಂತೆ ಸಂಬಂಧಪಟ್ಟ ಆಡಳಿತಕ್ಕೆ ಹಲವು ಬಾರಿ ಮನವಿ ಮಾಡಿದೇªವೆ. ಯಾವ ಸ್ಪಂದನೆಯೂ ದೊರೆಯದಿದ್ದಾಗ ಸಾರ್ವಜನಿಕರ ಹಿತದೃಷ್ಟಿಯಿಂದ ನಾವೇ ಸ್ವಂತ ಖರ್ಚು ಹಾಕಿ ಈ ಕಾರ್ಯಕ್ಕೆ ಮುಂದಾಗಿದೇªವೆ.
– ಸುಂದರ್ ಜೆ. ಕಲ್ಮಾಡಿ,ಸಮಾಜ ಸೇವಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ