ಯೋಜನೆ ಸಮರ್ಪಕ ಕಾರ್ಯಗತವಾಗುವಲ್ಲಿ ನಿಗಾ ವಹಿಸಿ: ಶಾಸಕ ಭಟ್‌


Team Udayavani, Jun 22, 2018, 2:45 AM IST

raghupati-bhat-21-6.jpg

ಉಡುಪಿ: ಉಡುಪಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಯಾದ ‘ವಾರಾಹಿ ಕುಡಿಯುವ ನೀರಿನ ಯೋಜನೆ’ಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ನನ್ನ ಉದ್ದೇಶ. ಯೋಜನೆ ಉತ್ತಮ ರೀತಿಯಲ್ಲಿ ಕಾರ್ಯಗತವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಶಾಸಕ ಕೆ.ರಘುಪತಿ ಭಟ್‌ ಹೇಳಿದ್ದಾರೆ.

ನಗರಸಭೆ ಸಭಾಂಗಣದಲ್ಲಿ ಜೂ.20 ರಂದು ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅವರ ಉಪಸ್ಥಿತಿಯಲ್ಲಿ ಪ್ರಗತಿಪರಿಶೀಲನಾ ಸಭೆ ನಡೆಸಿದ ಶಾಸಕರು ಅಮೃತ್‌ ಯೋಜನೆ (ಅಟಲ್‌ ಮಿಷನ್‌ ಫಾರ್‌ ರಿಜುವಿನೇಷನ್‌ ಆ್ಯಂಡ್‌ ಅರ್ಬನ್‌ ಟ್ರಾನ್ಸ್‌ಫಾರ್ಮೇಷನ್‌) ಮತ್ತು ಎಡಿಬಿ ನೆರವಿನಲ್ಲಿ ನಡೆಯಲಿರುವ ವಾರಾಹಿ ಕುಡಿಯುವ ನೀರಿನ ಯೋಜನೆ, ಮಣಿಪಾಲದಲ್ಲಿ ಒಳಚರಂಡಿ ಕಾಮಗಾರಿ, ತ್ಯಾಜ್ಯ ವಿಲೇವಾರಿ, ಬಸ್‌ ನಿಲ್ದಾಣಗಳು ಸೇರಿದಂತೆ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದು ಚರ್ಚೆ ನಡೆಸಿದರು.

270 ಕೋ.ರೂ. ಯೋಜನೆ
ವಾರಾಹಿಯಿಂದ ಉಡುಪಿಗೆ ನೀರು ತರುವ ಒಟ್ಟು 270 ಕೋ.ರೂ. ವೆಚ್ಚದ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಟೆಂಡರ್‌ ನಡೆದಿದೆ. ಉಡುಪಿ ನಗರಸಭೆಗೆ ‘ಅಮೃತ್‌’ ಯೋಜನೆಯಡಿ 132 ಕೋ.ರೂ. ಹಾಗೂ ಎಡಿಬಿಯಿಂದ 207 ಕೋ.ರೂ. ಸೇರಿದಂತೆ ಒಟ್ಟು 338.63 ಕೋ.ರೂ. ಮಂಜೂರಾಗಿದೆ. ಇದರಲ್ಲಿ 290 ಕೋ.ರೂ.ಗಳನ್ನು ಕುಡಿಯುವ ನೀರು ಮತ್ತು 38 ಕೋ.ರೂ.ಗಳನ್ನು ಒಳಚರಂಡಿ ಕಾಮಗಾರಿಗೆ ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭಟ್‌ ಅವರು ‘ವಾರಾಹಿ ಹೊರತುಪಡಿಸಿದರೆ ಉಡುಪಿಗೆ ಬೇರೆ ನೀರಿನ ಮೂಲಗಳಿಲ್ಲ. ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಈ ಯೋಜನೆ ಅನಿವಾರ್ಯ. ಆದರೆ ಅಲ್ಲಿಂದ ಉಡುಪಿಗೆ 38 ಕಿ.ಮೀ. ಉದ್ದದ ಪೈಪ್‌ ಗಳನ್ನು ರಸ್ತೆಯಲ್ಲಿ ಹಾಕುವಾಗ ರಸ್ತೆ ಅಗೆಯುವ ಸಮಸ್ಯೆ ಎದುರಾಗಬಹುದು. ಇದಕ್ಕೆ ಅಗತ್ಯವಿರುವ ಭೂಸ್ವಾಧೀನ ಮಾಡಿ ಕಾರಿಡಾರ್‌ ನಿರ್ಮಾಣ ಮಾಡಿದರೆ ಸುರಕ್ಷಿತ ಮತ್ತು ಸೂಕ್ತವಾಗಿರುತ್ತದೆ’ ಎಂದರು.

ಮಣಿಪಾಲಕ್ಕೆ ಒಳಚರಂಡಿ
ಮಣಿಪಾಲ ಭಾಗದ ಒಳಚರಂಡಿ ಸಮಸ್ಯೆಗೆ ಪರಿಹಾರವಾಗಿ ಮಣಿಪಾಲದಲ್ಲಿ ಮಾಹೆಯವರ ಒಳಚರಂಡಿ ಶುದ್ಧೀಕರಣ ಘಟಕದ ಜತೆಯಲ್ಲಿಯೇ ನಗರಸಭೆ ಕೂಡ ಶುದ್ಧೀಕರಣ ಪ್ರಕ್ರಿಯೆ ಮಾಡುವ ಕುರಿತು ಮಾಹೆಯವರ ಜತೆಗೆ ಮಾತುಕತೆ ನಡೆಸಿದ್ದೇನೆ. ಈ ಬಗ್ಗೆ ಅಂತಿಮ ತೀರ್ಮಾನ ಆಗಬೇಕಾಗಿದೆ ಎಂದು ಭಟ್‌ ಹೇಳಿದರು. ಆಯುಕ್ತ ಜನಾರ್ದನ್‌, ನಗರಸಭೆ ಇಂಜಿನಿಯರ್‌ ಗಣೇಶ್‌ ಪಾಲ್ಗೊಂಡಿದ್ದರು.

ಒಳಚರಂಡಿ: ಸದಸ್ಯರ ಆಗ್ರಹ
ಮಣಿಪಾಲದ ಒಳಚರಂಡಿ ಸಮಸ್ಯೆ ಕುರಿತು ಪ್ರಸ್ತಾವವಾದಾಗ ಉಡುಪಿಯ ವಿವಿಧೆಡೆ ಉಂಟಾಗಿರುವ ಒಳಚರಂಡಿ ಸಮಸ್ಯೆಯ ಬಗ್ಗೆ ಹಲವಾರು ಮಂದಿ ನಗರಸಭೆ ಸದಸ್ಯರು ಶಾಸಕರ ಗಮನ ಸೆಳೆದರು. ‘ಹಲವೆಡೆ ವೆಟ್‌ ವೆಲ್‌ ಗ‌ಳು ಸರಿಯಿಲ್ಲ. ಕೊಳಚೆ ನೀರನ್ನು ಕಲ್ಸಂಕ ತೋಡಿಗೆ ಬಿಡಲಾಗುತ್ತಿದೆ’ ಎಂದು ಹರೀಶ್‌ರಾಮ್‌ ಬನ್ನಂಜೆ ಹೇಳಿದರು. ದಿನಕರ ಶೆಟ್ಟಿ ಹೆರ್ಗ, ಅಮೃತಾ ಕೃಷ್ಣಮೂರ್ತಿ, ಜನಾರ್ದನ ಭಂಡಾರ್‌ಕರ್‌ ಮೊದಲಾದವರು ‘ವೆಟ್‌ ವೆಲ್‌ ಗ‌ಳನ್ನು ಶೀಘ್ರ ಸರಿಪಡಿಸಬೇಕಾಗಿದೆ’ ಎಂದರು. ಕೊಡವೂರು ಪ್ರದೇಶಗಳಲ್ಲಿ ಕೊಳಚೆ ನೀರು ಹರಿಯುತ್ತಿರುವ ಕುರಿತು ಶಾಸಕರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ‘ಕೊಳಚೆ ಶುದ್ಧೀಕರಣ ಘಟಕದಿಂದ ಕೊಳಚೆ ನೀರು ಹೊರಗೆ ಬರುತ್ತಿಲ್ಲ. ಆದರೆ ಕೆಲವು ವೆಟ್‌ ವೆಲ್‌ ಗ‌ಳಲ್ಲಿ ಪಂಪಿಂಗ್‌ ಸಮಸ್ಯೆ ಆದಾಗ ಕಲ್ಸಂಕ ತೋಡಿಗೆ ಕೊಳಚೆ ನೀರು ಬರುತ್ತಿದೆ’ ಎಂದರು.

‘ಶೀಘ್ರದಲ್ಲೇ ಕೊಳಚೆ ನೀರು ಸಮಸ್ಯೆ ಇರುವ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಒಳಚರಂಡಿ ಕಾಮಗಾರಿಗೆ ಹಣ ಹೊಂದಿಸಿಕೊಳ್ಳಲು ಕಷ್ಟವಾಗದು’ ಎಂದು ಶಾಸಕರು ಹೇಳಿದರು. ಕಸವಿಲೇವಾರಿ, ದಾರಿದೀಪ ನಿರ್ವಹಣೆಯೂ ಸೂಕ್ತ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಲು ಶಾಸಕರು ಸೂಚಿಸಿದರು. 

ಉಡುಪಿ, ಮಣಿಪಾಲಕ್ಕೆ ಬಸ್‌ ನಿಲ್ದಾಣ
ಡಲ್ಟ್ (ಡೈರೆಕ್ಟೊರೇಟ್‌ ಆಫ್ ಅರ್ಬನ್‌ ಲ್ಯಾಂಡ್‌ ಟ್ರಾನ್ಸ್‌ ಫಾರ್ಮೇಷನ್‌) ವತಿಯಿಂದ ಉಡುಪಿ, ಮಣಿಪಾಲ ಮತ್ತು ಮಲ್ಪೆಯಲ್ಲಿ ಬಸ್‌ ನಿಲ್ದಾಣಗಳು ನಿರ್ಮಾಣಗೊಳ್ಳಲಿವೆ. ಮಲ್ಪೆಯಲ್ಲಿ ಸ್ಥಳ ಆಯ್ಕೆ ಅಂತಿಮ ವಾಗಿಲ್ಲ. ಮಣಿಪಾಲದಲ್ಲಿ ಈಗ ಇರುವ ನಿಲ್ದಾಣದ ಸ್ಥಳ ದಲ್ಲಿ 3.45 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗು ವುದು. ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲೇ ಹೊಸ ಬಸ್‌ ನಿಲ್ದಾಣವನ್ನು 5 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ‘ಬಸ್‌ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಕಾಂಪ್ಲೆಕ್ಸ್‌ಗೂ ಅವಕಾಶ ನೀಡಬೇಕು. ಈ ಕುರಿತಾದ ಯೋಜನೆಯ ನೀಲನಕಾಶೆ ಕೂಡಲೆ ನೀಡಿ’ ಎಂದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.